17
August, 2026

A News 365Times Venture

17
Monday
August, 2026

A News 365Times Venture

ಮೆಟ್ರೋ ಪ್ರಯಾಣ ದರ ಇಳಿಕೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Date:

ಬೆಂಗಳೂರು,ಫೆಬ್ರವರಿ,13,2025 (www.justkannada.in):  ಇತ್ತೀಚೆಗೆ ಬಿಎಂಆರ್ ಸಿಎಲ್ ಮೆಟ್ರೋ ಪ್ರಯಾಣ ದರವನ್ನ ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿದ್ದಕ್ಕೆ ಪ್ರಯಾಣಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ಇದೀಗ ಸಿಎಂ ಸಿದ್ದರಾಮಯ್ಯ ಅವರು  ಮೆಟ್ರೋ ಪ್ರಯಾಣ ದರ ಇಳಿಕೆ ಮಾಡುವಂತೆ ಬಿಎಂಆರ್ ಸಿಎಲ್ ಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ.

ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

Key words: CM, Siddaramaiah, reduction, metro fares, BMRCL

The post ಮೆಟ್ರೋ ಪ್ರಯಾಣ ದರ ಇಳಿಕೆಗೆ ಸಿಎಂ ಸಿದ್ದರಾಮಯ್ಯ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അമേരിക്കൻ സൈനികരെ കൊല്ലുകയോ പിടികൂടുകയോ ചെയ്യുന്നവർക്ക് 30,000 ഡോളർ; സ്ത്രീകൾക്ക് ഇരട്ടി പ്രതിഫലം പ്രഖ്യാപിച്ച് ഇറാൻ

ടെഹ്‌റാൻ: അമേരിക്കൻ സൈനികരെ കൊല്ലുകയോ പിടികൂടുകയോ ചെയ്യുന്നവർക്ക് 30,000 ഡോളർ പാരിതോഷികം...

மகாராஷ்டிரா: சாலை இல்லாததால் உயிரிழந்த கர்ப்பிணி மனைவி; மக்களைத் திரட்டி சாலையமைத்த பழங்குடி கணவன்!

மகாராஷ்டிராவில் மலைப்பகுதியில் இருக்கும் கிராமங்களுக்குப் போதிய சாலை வசதி இல்லாமல் இருக்கிறது....

Car Accident: పెళ్లి సందడి టు విషాదం.. కాలువలోకి దూసుకెళ్లిన కారు, నలుగురు యువకులు గల్లంతు!

పశ్చిమ గోదావరి జిల్లాలో విషాదకర ఘటన చోటుచేసుకుంది. ఇరగవరం మండలం ఐతంపూడి...