19
March, 2025

A News 365Times Venture

19
Wednesday
March, 2025

A News 365Times Venture

ಯುವಕನಿಂದ ಚಾಮುಂಡಿ ಬೆಟ್ಟದ ಅರ್ಚಕರ ಮೇಲೆ ಹಲ್ಲೆ

Date:

ಮೈಸೂರು,ಫೆಬ್ರವರಿ,14,2025 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟ ದೇವಾಲಯದ ಅರ್ಚಕ  ದೇವಪ್ರಸಾದ್ ದೀಕ್ಷಿತ್  ಅವರ  ಮೇಲೆ ಯುವಕನೊಬ್ಬ ಹಲ್ಲೆ ಮಾಡಿ ಹುಚ್ಚಾಟ ನಡೆಸಿರುವ ಘಟನೆ ನಡೆದಿದೆ.

ಸಿದ್ದಾರ್ಥ ಬಡಾವಣೆಯ ಶಾಂತಲಾ ಶಾಲೆ ಮುಖ್ಯಸ್ಥ ಪ್ರೊ. ಸಂತೋಷ್ ಮಗ ಸಿದ್ದಾಂತ್  ಎಂಬಾತ ಅರ್ಚಕ ದೇವಪ್ರಸಾದ್ ದೀಕ್ಷಿತ್ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ದೇವಪ್ರಸಾದ್ ದೀಕ್ಷಿತ್  ಅವರ ಕುಟುಂಬ ಮೈಸೂರಿನ‌ ಸಿದ್ದಾರ್ಥ ನಗರ ಬಡಾವಣೆಯಲ್ಲಿ ವಾಸಿಸುತ್ತಿದ್ದು,  ಅದೇ ಬಡಾವಣೆಯಲ್ಲಿ ಪ್ರೊ. ಸಂತೋಷ್ ಕುಟುಂಬ ಸಹ ಇದೆ.

ಈ ಮಧ್ಯೆ ಸಿದ್ದಾಂತ್  ಸೋಮವಾರ ರಾತ್ರಿ 9 ಗಂಟೆ ಸಮಯದಲ್ಲಿ ಏಕಾಏಕಿ ದೇವಪ್ರಸಾದ್ ದೀಕ್ಷಿತ್ ಅವರ ಮನೆಗೆ ನುಗ್ಗಿ ಹಣ ಕೊಡುವಂತೆ ಪೀಡಿಸಿದ್ದಾನೆ. ಹಣ ಕೊಡದಿದ್ದಾಗ ದೇವಪ್ರಸಾದ್ ದೀಕ್ಷಿತ್ ಮುಖಕ್ಕೆ ಗುದ್ದಿ, ಗಾಯಗೊಳಿಸಿದ್ದು, ಆ ವೇಳೆಗೆ ಮನೆಗೆ ಬಂದ ದೇವಪ್ರಸಾದ್ ದೀಕ್ಷಿತ್ ಮಗ ಸುದೇವ್ ನೆರೆಹೊರೆಯವರ ಸಹಾಯ ಪಡೆದು ಸಿದ್ದಾಂತ್ ನನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಇನ್ನು ಮಗನ ಹುಚ್ಚಾಟದ ವಿಚಾರ ಗೊತ್ತಾಗಿ ಪ್ರೊ. ಸಂತೋಷ್ ಪತ್ನಿ ಹಾಗೂ ಸಿದ್ದಾಂತ್ ತಾಯಿಯು  ದೀಕ್ಷಿತ್ ರ ಮನೆಗೆ ಬಂದು ಗೋಳಾಡಿದ್ದಾರೆ. ಸಿದ್ದಾಂತ್ ತಾಯಿಯ ಗೋಳಾಟ ಕಂಡು ಮರುಗಿದ ದೇವ ಪ್ರಸಾದ್ ಕುಟುಂಬ ಫೊಲೀಸರಿಗೆ ದೂರು ಕೊಡಲು ಹಿಂದೇಟು ಹಾಕಿದ್ದಾರೆ.

Key words: Drug addict, youth, Attack, priests, Chamundi Hills

The post ಯುವಕನಿಂದ ಚಾಮುಂಡಿ ಬೆಟ್ಟದ ಅರ್ಚಕರ ಮೇಲೆ ಹಲ್ಲೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪಿ.ಯು. ಉಪನ್ಯಾಸಕರ ಸಂಘದ ಅಧ್ಯಕ್ಷರಿಂದ ನಕಲಿ ದಾಖಲೆ ಸಲ್ಲಿಕೆ ಆರೋಪ.?

ಮೈಸೂರು, ಮಾ.18, 2025:  ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ...

നിയമവിരുദ്ധമായി പ്രവര്‍ത്തിക്കുന്നെന്ന് ആരോപിച്ച് ഉത്തരാഖണ്ഡിലെ 84 മദ്രസകള്‍ അടച്ചുപൂട്ടി ബി.ജെ.പി സര്‍ക്കാര്‍

ഡെറാഡൂണ്‍: നിയമവിരുദ്ധമായി പ്രവര്‍ത്തിക്കുന്നുവെന്ന് ആരോപിച്ച് ഉത്തരാഖണ്ഡിലെ 84 മദ്രസകള്‍ അടച്ചുപൂട്ടി ബി.ജെ.പി...

`ஊதியம் கிடையாது' – போராட்டம் அறிவித்த அரசு ஊழியர்களுக்கு, தமிழ்நாடு அரசு எச்சரிக்கை

பழைய ஓய்வூதிய திட்டத்தை மீண்டும் அமல்படுத்த வேண்டும், பகுதி நேர ஆசிரியர்கள்...

Atreyapuram Pootharekulu: ఆత్రేయపురం కల్తీ నెయ్యి ఘటన.. ల్యాబ్ పరిశీలనలో వెలుగులోకి కీలక వాస్తవాలు!

అంబేద్కర్ కోనసీమ జిల్లా ఆత్రేయపురంలోని కొన్ని పూతరేకుల దుకాణాల్లో వాడింది కల్తీ...