20
August, 2026

A News 365Times Venture

20
Thursday
August, 2026

A News 365Times Venture

ನಾಲ್ಕೈದು ವರ್ಷ ಬದುಕಿರುತ್ತೇನೆ: ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ – ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು

Date:

ಬೆಂಗಳೂರು, ಫೆಬ್ರವರಿ 15,2025 (www.justkannada.in): ನಾನು ನಾಲ್ಕೈದು ವರ್ಷ ಬದುಕಿರುತ್ತೇನೆ. ಅಲ್ಲಿವರೆಗೂ ನೀರಾವರಿಗಾಗಿ ನಾನು ಹೋರಾಟ ಮಾಡುತ್ತೇನೆ.  ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ ದೇವೇಗೌಡರು,  ಮಹದಾಯಿ ನದಿ ನೀರಿಗಾಗಿ ನಾವೆಲ್ಲರೂ ಪಕ್ಷಭೇದ ಮರೆತು ಹೋರಾಟ ಮಾಡಬೇಕಿದೆ. ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​​ ಸೇರಿ ಎಲ್ಲರೂ ಹೋರಾಟ ಮಾಡಬೇಕು. ರಾಜ್ಯಕ್ಕೆ ಆದ ಅನ್ಯಾಯ ಸರಿಪಡಿಸಲು ಶಕ್ತಿಮೀರಿ ಹೋರಾಟ ಮಾಡೋಣ ಎಂದು ಕರೆ ನೀಡಿದರು.

ಮಹದಾಯಿ ಯೋಜನೆ ವಿವಾದ ನ್ಯಾಯಾಲಯದಲ್ಲಿದೆ. ಕಳಸಾ ಬಂಡೂರಿಯಿಂದ 3.5 ಟಿಎಂಸಿ ನೀರು ಬಿಡಲು ಗೋವಾ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಅದಕ್ಕೆ ನಮ್ಮ ಸರ್ಕಾರ ಪ್ರತಿಭಟನೆ ಮಾಡಿ ಅರ್ಜಿ ಹಾಕಿದೆ. ವಿವಾದ ಕೋರ್ಟ್​ನಲ್ಲಿರುವಾಗ ಪ್ರಧಾನಿ ಮೋದಿ ಏನು ಮಾಡುತ್ತಾರೆ. ಹಾಗಾಗಿ ನಮ್ಮವರು ಕೋರ್ಟ್​ನಲ್ಲಿ ಪ್ರಬಲ ವಾದ ಮಾಡಬೇಕು. ನಾವೆಲ್ಲ ಪಕ್ಷಭೇದ ಮರೆತು ಹೋರಾಟ ಮಾಡಬೇಕು ಎಂದು  ಹೆಚ್ ಡಿಡಿ ಹೇಳಿದರು.

ಕರ್ನಾಟಕಕ್ಕೆ25 ಟಿಎಂಸಿ ನೀರು ಕೊಡಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದೇನೆ. ಮಹದಾಯಿ ಯೋಜನೆಗೆ ಗೋವಾ ಮತ್ತು ಪರಿಸರದ ಸಮಸ್ಯೆ ಇದೆ. ಅದಕ್ಕೆ ಕೊಡಲು ಆಗಲ್ಲ ಅಂತ ಹೇಳಿದ್ದಾರೆ. ಕುಡಿಯುವ ನೀರಿಗಾಗಿ ನಮ್ಮ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಹೋರಾಟ ಮಾಡುತ್ತಿದೆ. ಎತ್ತಿನಹೊಳೆ ಯೋಜನೆಗೆ ₹8 ಸಾವಿರ ಕೋಟಿ ಮಂಜೂರು ಮಾಡಿದರೂ. ಈಗ 25 ಸಾವಿರ ಕೋಟಿ ನೀಡಿದ್ದಾರೆ, ಅದು ಎಲ್ಲಿವರೆಗೆ ಬಂದಿದೆ ಗೊತ್ತಿಲ್ಲ ಎಂದು ಹೆಚ್ ಡಿ ದೇವೇಗೌಡ ತಿಳಿಸಿದರು.

Key words: fight, Irrigation, until, last breath, H.D. Deve Gowda

The post ನಾಲ್ಕೈದು ವರ್ಷ ಬದುಕಿರುತ್ತೇನೆ: ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ – ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

EXCLUSIVE BREAKING NEWS: MDA ಬದಲಿ ನಿವೇಶನ ಹಂಚಿಕೆ ರದ್ದು: ₹2,000 ಕೋಟಿ ಮೌಲ್ಯದ 1,100 ನಿವೇಶನಗಳಿಗೆ ಕುತ್ತು!

  ಮೈಸೂರು, ಆ.19: ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮ ಉಲ್ಲಂಘಿಸಿ...

മഹാത്മാ ഗാന്ധിയുടെ കുടുംബം സി.ജെ.പിക്കൊപ്പം നിൽക്കുന്നു; അത് തങ്ങളുടെ രാജ്യസ്നേഹത്തിനുള്ള ഒരു സർട്ടിഫിക്കറ്റെന്ന് അഭിജീത് ദീപ്കെ

ഛത്രപതി സംഭാജി നഗർ: മഹാത്മാഗാന്ധിയുടെ കുടുംബം തങ്ങൾക്കൊപ്പം നിൽക്കുന്നുവെന്നത് തങ്ങളുടെ രാജ്യസ്നേഹത്തിനുള്ള...

'சீட் கேட்ட பிரபல சினிமா இயக்குநர்; உடனே மறுத்த முதல்வர் விஜய்!' – அமைச்சர் ஆனந்த் பகிரும் ரகசியம்

சட்டமன்றத்தில் இன்று நீர்வளத்துறையின் மானியக் கோரிக்கையின் மீதான விவாதம் நடந்தது. மானியக்...

Bihar: AK-47 ఘటనపై నిరసన.. పోలీసుల అదుపులో తేజస్వీ యాదవ్..

Bihar: బీహార్‌లో తీవ్ర ఉద్రిక్తత చోటుచేసుకుంది. పాట్నాలో ఆర్జేడీ నిర్వహించిన రాజ్‌భవన్...