14
May, 2026

A News 365Times Venture

14
Thursday
May, 2026

A News 365Times Venture

ಎಐಸಿಸಿ ಹೆಸರು ದುರ್ಬಳಕೆ ಮಾಡಿಕೊಳ್ಳುವುದು ಬೇಡ: ಡಿಸಿಎಂ ಡಿಕೆ ಶಿವಕುಮಾರ್ ​ಗೆ ಸಚಿವ ಕೆಎನ್ ರಾಜಣ್ಣ ಟಾಂಗ್

Date:

ಬೆಂಗಳೂರು, ಫೆಬ್ರವರಿ 17,2025 (www.justkannada.in):  ಸಿಎಂ ಸಿದ್ದರಾಮಯ್ಯ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂದು ಹೇಳಿಕೆ ನೀಡಿದ್ದ  ಡಿಸಿಎಂ ಡಿಕೆ ಶಿವಕುಮಾರ್​​ಗೆ ತಿರುಗೇಟು ನೀಢಿರುವ ಸಹಕಾರ ಸಚಿವ ಕೆ.ಎನ್ ರಾಜಣ್ಣ, ಎಐಸಿಸಿ ಹೆಸರು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂದು ಹೇಳಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಚಿವ ಕೆ.ಎನ್ ರಾಜಣ್ಣ, ನಾವು ಯಾರ ಹೆಸರನ್ನೂ ದುರ್ಬಳಕೆ ಮಾಡಿಕೊಂಡಿಲ್ಲ. ಅವರು ಎಐಸಿಸಿ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ. ಎಲ್ಲದಕ್ಕೂ ಎಐಸಿಸಿ ಹೇಳಿದೆ ಎಂದು ಎಐಸಿಸಿ ಹೆಸರನ್ನ ಅವರು ದುರ್ಬಳಕೆ ಮಾಡಿಕೊಳ್ಳಬಾರದು. ಅವರು ಎಐಸಿಸಿ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬುದು ಅದು ಆರೋಪ ಅಲ್ಲ, ವಾಸ್ತವ. ನಾನು ಯಾರಿಂದಲೂ ಶಿಸ್ತಿನ ಪಾಠ ಕಲಿಯಬೇಕಿಲ್ಲ ಎಂದು ಡಿಕೆ ಶಿವಕುಮಾರ್ ಗೆ ಟಾಂಗ್ ಕೊಟ್ಟರು.

ಕರ್ನಾಟಕದಲ್ಲಿ  ಸಿಎಂ ಬದಲಾವಣೆ ಬಗ್ಗೆ ಚರ್ಚೆ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎನ್ ರಾಜಣ್ಣ, ಹೈಕಮಾಂಡ್ ಏಕಪಕ್ಷೀಯವಾಗಿ ನಿರ್ಧಾರವೇನೂ ಮಾಡಲ್ಲ. ಎಲ್ಲರ ಅಭಿಪ್ರಾಯ ಸಂಗ್ರಹ ಮಾಡಲೇಬೇಕು. ನಾವು ತಪ್ಪು ಮಾಡಿದ್ದರೇ ಮಾತ್ರ ಎಚ್ಚರಿಕೆ ಕೊಡಬೇಕು. ನಾವೇನೂ ತಪ್ಪು ಮಾಡಿಲ್ಲ. ಯಾರು ಕೂಡ ಹೈಕಮಾಂಡ್ ವಿರುದ್ಧ ಇಲ್ಲ ಎಂದರು.

Key words: Don’t, misuse,  AICC, name, Minister, KN Rajanna, DCM DK Shivakumar

The post ಎಐಸಿಸಿ ಹೆಸರು ದುರ್ಬಳಕೆ ಮಾಡಿಕೊಳ್ಳುವುದು ಬೇಡ: ಡಿಸಿಎಂ ಡಿಕೆ ಶಿವಕುಮಾರ್ ​ಗೆ ಸಚಿವ ಕೆಎನ್ ರಾಜಣ್ಣ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

எஸ்.பி.வேலுமணி பதவி பறிப்பு; அரசியல் களத்திற்கு மீண்டும் வரும் செ.ம.வேலுசாமி – பின்னணி என்ன?

கோவை மாவட்டம் சூலூர் அருகேயுள்ள செங்கத்துறை பகுதியை சேர்ந்தவர் செ.ம.வேலுசாமி. அ.தி.மு.க-வின்...

Aasara Pensions: గుడ్‌న్యూస్.. తెలంగాణలో ఆసరా పింఛన్లపై బిగ్ అప్‌డేట్..

తెలంగాణ రాష్ట్రంలో సామాజిక భద్రతే లక్ష్యంగా ప్రభుత్వం అడుగులు వేస్తోంది. ముఖ్యంగా...

ಮಣ್ಣಲ್ಲಿ ಮಣ್ಣಾದ ನಟ, ನಿರ್ದೇಶಕ ದಿಲೀಪ್ ರಾಜ್

ರಾಮನಗರ,ಮೇ,13,2026 (www.justkannada.in):  ಹೃದಯಾಘಾತದಿಂದ ಇಂದು ಬೆಳಗ್ಗಿನ ಜಾವ ನಿಧನರಾದ ನಟ...