15
March, 2026

A News 365Times Venture

15
Sunday
March, 2026

A News 365Times Venture

ಫೆ.24 ರಂದು ಮೈಸೂರಿನಲ್ಲಿ ಜನಾಂದೋಲನ ಜಾಥಾ, ಮೌನ ಪ್ರತಿಭಟನೆ.

Date:

ಮೈಸೂರು,ಫೆಬ್ರವರಿ,19,2025 (www.justkannada.in): ಅವಹೇಳನಕಾರಿ ಪೋಸ್ಟ್ ಮತ್ತು ಉದಯಗಿರಿ ಗಲಭೆ ಪ್ರಕರಣ ಸಂಬಂಧ ಮೈಸೂರಿನಲ್ಲಿ ಫೆಬ್ರವರಿ 24 ರಂದು ಮೈಸೂರು ಜನಜಾಗೃತಿ ಸಮಿತಿ ವತಿಯಿಂದ ಜನಾಂದೋಲನ ಜಾಥಾ ಮತ್ತು ಮೌನಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿದೆ.

ಮೈಸೂರಿನ ಗನ್‌ಹೌಸ್‌ ನ ಬಳಿಯಿಂದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಮೌನ ಪ್ರತಿಭಟನೆ ನಡೆಸಿ, ಸಮಾರೋಪ ಸಮಾವೇಶವನ್ನು ಮಾಡಲು  ತೀರ್ಮಾನಿಸಲಾಗಿದೆ ಎಂದು ಮೈಸೂರು ಜನಜಾಗೃತಿ ಸಮಿತಿ ತಿಳಿಸಿದೆ.

ಘಟನೆ ನಡೆದು 10 ದಿನಗಳಾದರೂ, ಎಲ್ಲವೂ ಶಾಂತಿಯುತವಾಗಿದ್ದರೂ, ಕೆಲ ಕಿಡಿಗೇಡಿಗಳು ಮತ್ತೊಮ್ಮೆ ಕಿಡಿ ಹಚ್ಚಲು ಸಂಚು ರೂಪಿಸುತ್ತಿದ್ದಾರೆ. ಈ ಕಿಡಿಗೇಡಿಗಳ ಉದ್ದೇಶ ಹಿಂದೂ ಮುಸ್ಲಿಂರವರಿಗೆ ಜಗಳ ತಂದಿಡಬೇಕು ಎನ್ನುವ ಉದ್ದೇಶದಿಂದ ಹೀಗೆ ಮಾಡುತ್ತಿದ್ದಾರೆ. ಆದ್ದರಿಂದ ಮೈಸೂರಿನ ಜನರು ಶಾಂತಿಯನ್ನ ಬಯಸುತ್ತಾರೆ ಮತ್ತು ಸರ್ಕಾರ ಮತ್ತು ಕಾನೂನು ಹಾಗೂ ಪೊಲೀಸ್‌ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟಿರುತ್ತಾರೆ ಎಂದು ನಿರೂಪಿಸಲು ಈ ಬೃಹತ್ ಮೌನ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಪಕ್ಷಾತೀತವಾಗಿ ಮತ್ತು ಜಾತ್ಯಾತೀತವಾಗಿ ಹೆಚ್ಚಿನ ಜನರು ಭಾಗವಹಿಸಿ ಶಾಂತಿ ಮೆರವಣಿಗೆ ಯಶಸ್ವಿಗೊಳಿಸುವಂತೆ ಮೈಸೂರು ಜನಜಾಗೃತಿ ಸಮಿತಿ ಸದಸ್ಯರು ಮನವಿ ಮಾಡಿದ್ದಾರೆ.

Key words: Uadayagiri roit case, Janandola rally , Mysore

The post ಫೆ.24 ರಂದು ಮೈಸೂರಿನಲ್ಲಿ ಜನಾಂದೋಲನ ಜಾಥಾ, ಮೌನ ಪ್ರತಿಭಟನೆ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പൂനെയില്‍ പൊതുസ്ഥലത്ത് നോമ്പ് തുറക്കുന്നത് ചോദ്യം ചെയ്ത് യുവാക്കളെ ആക്രമിച്ചു; അഞ്ച് പേര്‍ക്ക് പരിക്ക്; 15 പേര്‍ പിടിയില്‍

പൂനെ: പൂനെ അക്‌സര്‍വാഡിയില്‍ കുളത്തിനരികെ നോമ്പ് തുറയ്ക്കായി ഒത്തുകൂടിയ മുസ്‌ലിം യുവാക്കളെ...

“உளவுத் துறையைக் கையாளப் போகும் முதல் பெண் டி.ஜி.பி”- அதிரடி மாற்றங்களைக் கையில் எடுத்த அரசு!

தமிழகத்தில் கடந்த சில நாட்களாக நடந்துவந்த குற்றசெயல்களும், அதை தொடர்ந்து...

Fatty Liver: ఫ్యాటీలివర్ సమస్యతో బాధపడుతున్నారా..? మందులతో పని లేకుండా తగ్గించుకోండిలా..

కాలేయం మన శరీరంలోని అత్యంత కీలకమైన అవయవం. ఇది విషతుల్యాలను తొలగించడం,...