17
March, 2026

A News 365Times Venture

17
Tuesday
March, 2026

A News 365Times Venture

ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಬಿದ್ದ ಕಡೆ ಚಿರತೆ ಮತ್ತು ಮರಿಗಳು ಪ್ರತ್ಯಕ್ಷ: ಪ್ರಾಣಿಗಳಿಗೆ ಹಾನಿ ಇಲ್ಲ- ಡಿಸಿಎಫ್ ಬಸವರಾಜು

Date:

ಮೈಸೂರು,ಫೆಬ್ರವರಿ,22,2025 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟದ ಮೀಸಲು ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದ ಪ್ರಕರಣ ಸಂಬಂಧ 35 ಎಕರೆ ಸಂಪೂರ್ಣ ಸುಟ್ಟು ಹೋಗಿದೆ. ಬೆಂಕಿ ಬಿದ್ದ ಕಡೆ ಚಿರತೆ ಮತ್ತು ಮರಿಗಳು ನಮ್ಮ ವಾಚರ್ ಕಣ್ಣಿಗೆ ಬಿದ್ದಿವೆ ಎಂದು ಮೈಸೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜು ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಫ್ ಬಸವರಾಜು. ನಿನ್ನೆ ಮಧ್ಯಾಹ್ನ 12:30ರ ಸುಮಾರಿಗೆ ಚಾಮುಂಡಿಬೆಟ್ಟದ ಎರಡು ಕಡೆ ಏಕಕಾಲಕ್ಕೆ ಬೆಂಕಿ ಕಾಣಿಸಿಕೊಂಡಿತು. ಆ ವೇಳೆ ಗಾಳಿಯ ವೇಗ ಹೆಚ್ಚಾಗಿದ್ದರಿಂದ ಬೆಂಕಿ ವೇಗವಾಗಿ ಹಬ್ಬಿತು. ಬೆಂಕಿ ಬಿದ್ದ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಲುಪುವುದು ಕಷ್ಟಕರವಾಗಿತ್ತು. ಇದರ ‌ನಡುವೆಯೂ ಸತತ ಕಾರ್ಯಾಚರಣೆ ‌ನಡೆಸಿ ಕಳೆದ ರಾತ್ರಿ 11:30ರ ಸುಮಾರಿಗೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ. ದನಗಾಹಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಹಾಗಾಗಿ ಪ್ರತಿನಿತ್ಯ ಈ ಭಾಗದಲ್ಲಿ ಜಾನುವಾರುಗಳನ್ನು ಮೇಯಿಸಲು ಬರುತ್ತಿದ್ದವರನ್ನು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ. ಆ ಭಾಗದಲ್ಲಿ ಹೆಚ್ಚು ಸಂಚರಿಸುತ್ತಿದ್ದವರ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹೇಳಿದರು.

ಉದ್ದೇಶ ಪೂರ್ವಕವಾಗಿ ಬೆಂಕಿ ಹಾಕಿದ್ದಾರೆ ಎಂಬ ಅನುಮಾನವಿದ್ದು, ಆ ಬಗ್ಗೆ ತನಿಖೆ ನಡೆಯುತ್ತಿದೆ. ಗಾಳಿ ವೇಗ ಹಾಗೂ ಬಿಸಿಲಿನ ವಾತಾವರಣ ಇತ್ತು. ಆದ ಕಾರಣ ಬೆಂಕಿ ಹೆಚ್ಚಿತ್ತು. ನಾವು ಎಷ್ಟೇ ಪ್ರಯತ್ನ ಪಟ್ಟರೂ ಆ ಜಾಗಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಅಗ್ನಿಶಾಮಕದಳ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸಲು ಶ್ರಮ ಹಾಕಿದರು. ಸಂಜೆ ವೇಳೆಗೆ ಬೆಂಕಿ ಕಂಟ್ರೋಲ್ ಗೆ ಬಂತು. 3 ತಂಡಗಳ ಜೊತೆಗೆ ವಾಚರ್ ಗಳನ್ನು ಇಟ್ಟು ಇಡೀ ರಾತ್ರಿ ಕಾದೀದ್ದೇವೆ. ಸದ್ಯಕ್ಕೆ ಡ್ರೋನ್ ಹಾರಿಸಿ ಎಲ್ಲವನ್ನೂ ಪರಿಶೀಲನೆ ಮಾಡಿದ್ದೇವೆ. ದೇವಿಕೆರೆ, ಗೊಲ್ಲಹಳ್ಳ, ಈ ಭಾಗದಲ್ಲಿ 35 ಎಕರೆ ಸಂಪೂರ್ಣ ಸುಟ್ಟಿದೆ. ಬೇಸಿಗೆಯಿಂದ ಒಣ ಹುಲ್ಲು ಪ್ರಮಾಣ ಜಾಸ್ತಿ ಇತ್ತು . ಅದೆಲ್ಲ ಸುಟ್ಟಿದೆ. 1516 ಎಕರೆಯಷ್ಟು ಮೀಸಲು ಅರಣ್ಯ ಪ್ರದೇಶವಿದೆ. 4 ಕಡೆ ಬೆಟ್ಟಕ್ಕೆ ಪ್ರವೇಶವಿದೆ. ಎಲ್ಲವನ್ನೂ ನಾವು ಮಾನಿಟರ್ ಮಾಡೋದು ಕಷ್ಟ. ನಾನು ಮಾಧ್ಯಮಗಳ ಮೂಲಕ  ಎಲ್ಲರನ್ನೂ ಕೇಳಿಕೊಳ್ಳುತ್ತೇನೆ. ಬಿಡಿ ಸಿಗರೇಟ್ ಸೇದಿ ಎಸೆಯಬೇಡಿ. ಸಣ್ಣ ಕಿಡಿ ಇಡೀ ಕಾಡನ್ನೇ ನಾಶ ಮಾಡತ್ತೆ ಎಂದು ಡಿಸಿಎಫ್ ಬಸವರಾಜ್ ಹೇಳಿದರು.

ಚಿರತೆ ಹಾಗೂ ಮರಿಗಳು ಪ್ರತ್ಯೆಕ್ಷ

ಅದೃಷ್ಟವಶಾತ್ ಯಾವುದೇ ಪ್ರಾಣಿಗಳಿಗೆ ಹಾನಿಯಾಗಿಲ್ಲ. ಬೆಳಿಗ್ಗೆ ನಮ್ಮ ವಾಚರ್ ಕಣ್ಣಿಗೆ ಚಿರತೆ ಹಾಗೂ ಮರಿಗಳು ಬಿದ್ದಿದೆ. ಬೆಂಕಿ ಬಿದ್ದ ತಕ್ಷಣ ಪ್ರಾಣಿಗಳು ಒಂದು ಕಡೆಯಿಂದ ಮತ್ತೊಂದು ಭಾಗಕ್ಕೆ ಹೋಗಿವೆ. ಹಾಗಾಗಿ ವನ್ಯ ಜೀವಿಗಳಿಗೂ ಯಾವುದೇ ಹಾನಿಯಾಗಿಲ್ಲ ಡಿಸಿಎಫ್ ಬಸವರಾಜ್ ಹೇಳಿದರು.

Key words: Chamundi Hills, fire, DCF, Basavaraju

The post ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಬಿದ್ದ ಕಡೆ ಚಿರತೆ ಮತ್ತು ಮರಿಗಳು ಪ್ರತ್ಯಕ್ಷ: ಪ್ರಾಣಿಗಳಿಗೆ ಹಾನಿ ಇಲ್ಲ- ಡಿಸಿಎಫ್ ಬಸವರಾಜು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಿರ್ಸಿ ವೃತ್ತದಿಂದ ಮತ್ತೊಂದು ಮೇಲ್ಸೇತುವೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,17,2026 (www.justkannada.in):  ಚಾಮರಾಜಪೇಟೆ ಸಿರ್ಸಿ ಜಂಕ್ಷನ್‌ನಿಂದ ಬಿಎಚ್ ಇಎಲ್ ಕಿಮಕೋ...

അമേരിക്കയ്ക്ക് നിങ്ങളോട് കൂറില്ല, ഇസ്രഈല്‍ നിങ്ങളുടെ ശത്രുവാണ്; ഇസ്‌ലാമിക രാഷ്ട്രങ്ങള്‍ക്ക് മുന്നറിയിപ്പുമായി ലാരിജാനി

ടെഹ്റാന്‍: ഇസ്‌ലാമിക രാജ്യങ്ങള്‍ക്ക് തുറന്ന കത്തുമായി ഇറാന്റെ സുരക്ഷാ കൗണ്‍സില്‍ സെക്രട്ടറി അലി...

Rajinikanth: 'காலம் பேசாது ஆனால் காத்திருந்து பதில் சொல்லும்' – ஆதவ் அர்ஜுனாவுக்கு ரஜினிகாந்த் பதில்

நடிகர் ரஜினிகாந்த் அரசியலுக்கு வராதது குறித்து தவெக நிர்வாகி ஆதவ் அர்ஜுனா...

Haryana Shocker: లవర్‌కు రంగులు రాశాడని, ఫ్రెండ్ దారుణహత్య..

Haryana Shocker: తన ప్రేయసికి రంగులు పూశాడనే కారణంగా ఒక వ్యక్తి...