19
March, 2026

A News 365Times Venture

19
Thursday
March, 2026

A News 365Times Venture

ನಕಲಿ ಔಷಧಿ ಜಾಲ ತಡೆಗಟ್ಟಲು ಕ್ರಮ -ಸಚಿವ  ದಿನೇಶ್ ಗುಂಡೂರಾವ್

Date:

 

ಬೆಂಗಳೂರು, ಮಾರ್ಚ್ 13,2025:  ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಜಾಲವನ್ನು ಹತ್ತಿಕ್ಕಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಔಷಧ ಮಾರಾಟಗಾರರ ವಿರುದ್ಧ  ಕಾರ್ಯಾಚರಣೆ ನಡೆಸಿ 2023-24ನೇ ಸಾಲಿನಲ್ಲಿ 10 ಮೊಕದ್ದಮೆಗಳನ್ನು ಹಾಗೂ 2024-25ನೇ ಸಾಲಿನಲ್ಲಿ 5 ಮೊಕದ್ದಮೆಗಳನ್ನು ಔಷಧ ಮತ್ತು ಕಾಂತಿವರ್ಧಕ ನಿಯಮಾವಳಿಗಳ ಅಡಿಯಲ್ಲಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ ಹಾಗೂ 87 ಫಾರ್ಮಸಿಗಳನ್ನು ಸಸ್ಪೆಂಡ್ ಮಾಡಿ 3 ಪಾರ್ಮಸಿಗಳನ್ನು ಮುಚ್ಚಲು ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್  ತಿಳಿಸಿದರು.

ಇಂದು ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಸದಸ್ಯ ಡಾ.ಅಶ್ವಥ್ ನಾರಾಯಣ ಅವರ ಪ್ರಶ್ನೆಗೆ ಉತ್ತರಿಸುತ್ತಾ ….

ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಉತ್ತರಖಂಡಗಳಲ್ಲಿ ಈ ನಕಲಿ ಔಷಧ ತಯಾರಿಕ ಘಟಕಗಳು ಇವೆ. ನಕಲಿ ಔಷದಿ ಜಾಲವು ರಾಜ್ಯದ ಸಮಸ್ಯೆಯಲ್ಲದೇ ರಾಷ್ಟ್ರಮಟ್ಟದ ಸಮಸ್ಯೆಯಾಗಿದ್ದು ಇದನ್ನು ಹತ್ತಿಕ್ಕುವ ಪ್ರಯತ್ನವನ್ನು ರಾಜ್ಯ ಸರ್ಕಾರ ನಡೆಸಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕೂಡ ಪತ್ರ ಬರೆಯಲಾಗಿದೆ ಎಂದರು.

ರಾಜ್ಯದ ಕೆಎಸ್‍ಎಂಎಸ್ ಸಿಎಲ್ ಸಂಸ್ಥೆಗೆ ಆರೋಗ್ಯ ಇಲಾಖೆ ಸಲ್ಲಿಸಿರುವ ಹಿಂದಿನ ವಾರ್ಷಿಕ Annual indent 2022-23 ಅನುಮೋದಿತವಾಗಿರುವ 732 ಔಷಧಿಗಳಲ್ಲಿ 475 ಔಷಧಿಗಳಿಗೆ ಖರೀದಿ ಆದೇಶ ನೀಡಿ ಔಷಧಗಳನ್ನು ಎಲ್ಲಾ ಔಷಧ ಉಗ್ರಾಣಗಳಿಗೆ ಸರಬರಾಜು ಮಾಡಲಾಗಿದೆ. ಉಗ್ರಾಣಕ್ಕೆ ಸರಬರಾಜುಗೊಂಡು ಆರೋಗ್ಯ ಸಂಸ್ಥೆಗಳ ಬೇಡಿಕೆಯಂತೆ ವಿತರಿಸಿ, ದಾಸ್ತಾನು ಕೊರತೆ ಆಗಿರುವ Essention-91,   Desirable-40 ಸೇರಿ 131 ಔಷಧಿಗಳ ಕೊರತೆಯಾಗಿದೆ. ಜನಸಾಮಾನ್ಯರಿಗೆ ಔಷಧಿಯನ್ನು ನೀಡುವುದು ಮೂಲ ಜವಬ್ದಾರಿಯಾಗಿದ್ದು ಈಗಾಗಲೇ ಅಗತ್ಯವಿರುವ ಕಡೆಗೆ ಔಷಧಿಗಳನ್ನು ಸಬರರಾಜು ಮಾಡಲಾಗುತ್ತಿದೆ. ಕೆಲವೊಂದು ಕಡೆ  ಔಷಧಗಳ ಕೊರತೆಯಾದರೆ ಬೇರೆ ಜಿಲ್ಲೆಗಳಿಂದ  ಪಡೆದು ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ಉತ್ತರಿಸಿದರು.

ಪ್ರಸ್ತುತ ಆರೋಗ್ಯ ಸಂಸ್ಥೆಗಳು ತುರ್ತು ಸಂದರ್ಭದಲ್ಲಿ ಅಗತ್ಯ ಪ್ರಮಾಣದಲ್ಲಿ ಔಷಧಗಳನ್ನು ತಮ್ಮ ಮಟ್ಟದಲ್ಲಿ ಸೂಕ್ತ ಪ್ರಾಧಿಕಾರದ ಅನುಮೋದನೆಯೊಂದಿಗೆ ಸ್ಥಳೀಯ ರಾಷ್ಟ್ರೀಯ ಉಚಿತ ಸೇವೆಗಳ ಕಾರ್ಯಕ್ರಮದ ಅಡಿಯಲ್ಲಿ ಆರೋಗ್ಯ ಸಂಸ್ಥೆಗಳು ಕೊರತೆ ಔಷಧಿಗಳನ್ನು ಅಗತ್ಯ ಪ್ರಮಾಣದಲ್ಲಿ  ಖರೀದಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಆರೋಗ್ಯ ಸಂಸ್ಥೆಗಳ ಹಂತದಲ್ಲಿ ಕ್ರಮ ವಹಿಸಲಾಗುತ್ತಿದೆ. ತ್ವರಿತವಾಗಿ ಅವಶ್ಯವಿರುವ ಔಷಧಿಗಳನ್ನು ಖರೀದಿಸಲು ಕೆಎಸ್‍ಎಂಎಸ್‍ಸಿಎಲ್ ನ ಹಿಂದಿನ ಸರಬರಾಜುದಾರರಿಂದ 25% ಹೆಚ್ಚುವರಿ ಪ್ರಮಾಣದಲ್ಲಿ ಖರೀದಿಸಲು ಕ್ರಮ ವಹಿಸಲಾಗುತ್ತಿದೆ ಹಾಗೂ 23 ಔಷಧಿಗಳನ್ನು 4G Excemption ಮೂಲಕ KAPL (ಕರ್ನಾಟಕ ಆ್ಯಂಟಿ ಬಯೋಟಿಕ್ಸ್ ಅಂಡ್ ಫಾರ್ಮ್ ಸ್ಯೂಟಿಕಲ್ಸ್ ಲಿಮಿಟೆಡ್) ನಿಂದ ಒಟ್ಟು 9.50ಕೋಟಿ ಮೌಲ್ಯದ ಔಷಧಿಗಳನ್ನು ಖರೀದಿಸಲು ಪ್ರಸ್ತಾವನೆ ಪರಿಶೀಲನೆಯಲ್ಲಿರುತ್ತದೆ.  ಕೆಲವೊಂದು ಔಷಧಿಗಳ ಕೊರತೆಗೆ ಕಾರಣ ಟೆಂಡರುಗಳಲ್ಲಿ ಯಾರೂ ಭಾಗವಹಿಸದೇ ಇರುವುದು. ಈ ಔಷಧಿಗಳ ಮೌಲ್ಯ ಮತ್ತು ಪ್ರಮಾಣ ಕಡಿಮೆ ಇರುವುದರಿಂದ  ಹಲವಾರು ಬಾರಿ ಟೆಂಡರ್ ಆಹ್ವಾನಿಸದರೂ ಯಾರೂ ಸ್ಪಂದಿಸಿಲ್ಲ. ಸರ್ಕಾರ ನಿಯಮಾನುಸಾರ ಔಷಧಿಗಳ ಖರೀದಿ ಮಾಡುತ್ತಿದೆ ಅಲ್ಲದೇ ಔಷಧಿ ಸರಬರಾಜು/ಖರೀದಿ ಪ್ರಕ್ರಿಯೆಯ ಟೆಂಡರ್‍ನ ಷರತ್ತುಗಳನ್ನು ಸರಳೀಕರಣ ಮಾಡಿ ಔಷಧಿಗಳನ್ನು ಸರಬರಾಜು ಮಾಡಲು ಹೆಚ್ಚಿನ ಬಿಡ್ ದಾರರು ಭಾಗವಹಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು.

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಗೆ ಒಟ್ಟು 112 ಔಷಧ ಪರಿವೀಕ್ಷಕರ ಹುದ್ದೆಗಳು ಮಂಜೂರಾಗಿದ್ದು, ಪ್ರಸ್ತುತ 08 ಔಷಧ ಪರಿವೀಕ್ಷಕರು ಕಾರ್ಯ ನಿರ್ವಹಿಸುತ್ತಿರುತ್ತಾರೆ. ಉಳಿದ 104 ಹುದ್ದೆಗಳು ಖಾಲಿ ಇರುತ್ತವೆ. 2018ರಲ್ಲಿ 83 ಪರಿವೀಕ್ಷಕರ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದ ಮೇರೆಗೆ 67 ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ದಿನಾಂಕ: 23-06-2021ರಂದು ಇಲಾಖೆಗೆ ಆಯ್ಕೆಪಟ್ಟಿಯನ್ನು ಕಳುಹಿಸಲಾಗಿದೆ. ಸದರಿ ಆಯ್ಕೆಪಟ್ಟಿಯನ್ನು ವಿವಿಧ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ಪ್ರಸ್ತುತ ಸರ್ವೋಚ್ಛ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಾಗಿದ್ದು ವಿಚಾರಣಾ ಹಂತದಲ್ಲಿರುತ್ತದೆ ಎಂದು ವಿವರಿಸಿದರು.

ಇಲಾಖೆಯಲ್ಲಿ ಖಾಲಿ ಇರುವ ಔಷಧ ಪರಿವೀಕ್ಷಕರ ಹುದ್ದೆಗಳ ಪ್ರಭಾರವನ್ನು ವೃತ್ತ ಕಚೇರಿಯ ಸಹಾಯಕ ಔಷಧ ನಿಯಂತ್ರಕರಿಗೆ ವಹಿಸಲಾಗಿರುತ್ತದೆ. ಸಹಾಯಕ ಔಷಧ ನಿಯಂತ್ರಕರುಗಳು ಅವರ ಕರ್ತವ್ಯಗಳ ಜೊತೆಯಲ್ಲಿ ಔಷಧ ಪರಿವೀಕ್ಷಕರ ಕೆಲಸವನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.

key words:  fake medicine, network , Dinesh Gundu Rao, karnataka, bangalore

Action to prevent fake medicine network – Minister Dinesh Gundu Rao

The post ನಕಲಿ ಔಷಧಿ ಜಾಲ ತಡೆಗಟ್ಟಲು ಕ್ರಮ -ಸಚಿವ  ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

'ஈரானிடம் அணு ஆயுதம் இல்லை; கமேனி தன் இறப்பிற்கு பயப்படவில்லை!' – ஜோ கென்ட் 'பரபர' தகவல்கள்

"ஈரானுக்கு எதிரான அமெரிக்காவின் போர் இஸ்ரேலின் அழுத்தத்தால் தொடங்கப்பட்டது... மனசாட்சிக்கு விரோதமாக...

Ravichandran Ashwin: “బుమ్రా తర్వాత భారత్ పరిస్థితి ఏంటి?” టీమిండియాకు అశ్విన్ బిగ్ వార్నింగ్..

Ravichandran Ashwin: టీమిండియాలో జస్ప్రీత్ బుమ్రా పాత్రను ప్రత్యేకంగా చెప్పనవసరం లేదు....

ಉಪ ಚುನಾವಣೆ: ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರ- ಡಿಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಮಾರ್ಚ್,18,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿ...

‘സ്ഥാനാര്‍ത്ഥിത്വം മാത്രമല്ല പ്രശ്‌നം, എന്റെ പ്രയാസം നേതൃത്വത്തെ അറിയിച്ചിട്ടുണ്ട്; ലീഗ് വിടുമെന്ന അഭ്യൂഹങ്ങളില്‍ രണ്ടത്താണി

മലപ്പുറം: മുസ്‌ലിം ലീഗ് നേതൃത്വവുമായുള്ള അതൃപ്തിയെത്തുടര്‍ന്ന് പാര്‍ട്ടി വിടുമെന്ന അഭ്യൂഹങ്ങളില്‍ പ്രതികരണവുമായി...