20
March, 2026

A News 365Times Venture

20
Friday
March, 2026

A News 365Times Venture

ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಕಠಿಣ ಕ್ರಮ ಕೈಗೊಳ್ಳುತ್ತೇವೆ : ಕಂದಾಯ ಸಚಿವ ಕೃಷ್ಣಭೈರೇಗೌಡ

Date:

ಬೆಂಗಳೂರು,ಮಾರ್ಚ್,19,2025 (www.justkannada.in):  ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಗೋಮಾಳ, ಕೆರೆ ಸೇರಿದಂತೆ ಸರ್ಕಾರಿ ಭೂ ಒತ್ತುವರಿಯನ್ನು ತೆರವುಗೊಳಿಸಲಾಗುತ್ತಿದೆ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ನ ಶರವಣ ಅವರು ಬೆಂಗಳೂರು ನಗರದಲ್ಲಿ 3 ವರ್ಷಗಳಿಂದ ನೂರಾರು ಎಕರೆ ಸರ್ಕಾರಿ ಭೂಮಿ, ಗೋಮಾಳ ಒತ್ತುವರಿ ಆಗಿದೆ. ಈವರೆಗೂ ಸರ್ಕಾರ ಎಷ್ಟು ಎಕರೆ ಜಾಗ ಒತ್ತುವರಿ ತೆರವು ಮಾಡಿದೆ. ಗೋಮಾಳ ಜಾಗ ಒತ್ತುವರಿ ಆಗಿದೆ. ಅಧಿಕಾರಿಗಳೇ ಇದರಲ್ಲಿ ಶಾಮೀಲಾಗಿದ್ದಾರೆ‌. ಒತ್ತುವರಿ ತೆರವು ಮಾಡಲು‌ ಅಧಿಕಾರಿಗಳ ಒತ್ತಡ ಇದೆಯಾ? ಅಧಿಕಾರಿಗಳು ಅಕ್ರಮ ಮಾಡ್ತಿದ್ದಾರಾ?. ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಒತ್ತುವರಿ ತೆರವು ಮಾಡಬೇಕು ಎಂದು ಆಗ್ರಹಿಸಿದರು

ಇದಕ್ಕೆ ಉತ್ತರಿಸಿದ ಸಚಿವ ಕೃಷ್ಣಭೈರೇಗೌಡ, ಪ್ರತಿ ತಾಲ್ಲೂಕಿನಲ್ಲೂ ನಕಲಿ ದಾಖಲೆ ಸೃಷ್ಟಿಸಿ ಬೇರೊಬ್ಬರಿಗೆ ಸರ್ಕಾರಿ ಭೂಮಿ ಮಾರಾಟ ಮಾಡಲು ಅವಕಾಶವಿಲ್ಲದಂತೆ ನಿರ್ಬಂಧಿಸಲು ಸೂಕ್ತ ಕಾನೂನು ಜಾರಿಗೊಳಿಸಲಾಗುವುದು. ಸರ್ಕಾರಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರತಿ ತಾಲ್ಲೂಕಿನಲ್ಲೂ ವಾರಕ್ಕೆ ಎರಡು ಬಾರಿ ಕೈಗೊಳ್ಳಲು ಸೂಚಿಸಲಾಗಿದೆ. ಈಗಾಗಲೇ ಈ ಕಾರ್ಯ ಆರಂಭವಾಗಿದ್ದು, ಮತ್ತಷ್ಟು ಶೀಘ್ರಗೊಳಿಸಲಾಗುವುದು ಎಂದರು.

ಕಾನೂನು ಅಡಿಯಲ್ಲೇ ಕಾನೂನು ವಿರೋಧಿ ಕೆಲಸ ಕೆಲ ಅಧಿಕಾರಿಗಳು ಮಾಡ್ತಿದ್ದಾರೆ. ಕೆಲವು ಅಧಿಕಾರಿಗಳಿಂದಲೇ ಒತ್ತುವರಿ ತೆರವು ಆಗ್ತಿಲ್ಲ. ಅಧಿಕಾರಿಗಳು ಉದ್ದೇಶಪೂರ್ವಕವಾಗಿಯೇ ವ್ಯವಸ್ಥಿತವಾಗಿ ಇಂತಹ ಪ್ರಕರಣಗಳನ್ನ ನಡೆಸುತ್ತಿದ್ದಾರೆ. ಕಾನೂನು ಅಡಿಯಲ್ಲೇ ಕಾನೂನು ವಿರೋಧಿ ಕೆಲಸ ಕೆಲ ಅಧಿಕಾರಿಗಳು ಮಾಡ್ತಿದ್ದಾರೆ. ನನ್ನ ಕ್ಷೇತ್ರದಲ್ಲಿ ಇಂತಹ ಅಕ್ರಮ ನಡೆದಿದೆ. ಗೋಮಾಳ ಒತ್ತುವರಿ ಮಾಡಿಕೊಂಡಿದ್ದಾರೆ. ಪಂಚಾಯತಿಯವರೇ ಖಾತೆ ಮಾಡಿಕೊಟ್ಡಿದ್ದಾರೆ. ವ್ಯವಸ್ಥಿತವಾಗಿ ಅಕ್ರಮವಾಗಿ ಅಧಿಕಾರಿಗಳ ಬೆಂಬಲದಿಂದ ಒತ್ತುವರಿ ಮಾಡಿಕೊಂಡಿದ್ದಾರೆ. ನಾವು ಅಂತಹ ಕೇಸ್ ಟ್ಯಾಕಲ್ ಮಾಡಲು ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಅಂತ ತಿಳಿಸಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ಬಗ್ಗೆ 272 ದೂರುಗಳು ಬಂದಿವೆ. ಮಾರ್ಗಸೂಚಿ ಮತ್ತು ಮಾರುಕಟ್ಟೆ ಬೆಲೆಯಂತೆ ನಗರ ಜಿಲ್ಲೆಯ ವಿವಿಧ ಗ್ರಾಮಗಳ ಸರ್ಕಾರಿ ಜಮೀನಿಗೆ ಒಂದೊಂದು ಮೌಲ್ಯ ನಿಗದಿಪಡಿಸಲಾಗಿದೆ. ಒತ್ತುವರಿ ಮಾಡಿಕೊಂಡಿರುವವರಿಗೆ ನೋಟಿಸ್‌‍ ನೀಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿ ಹಂತ ಹಂತವಾಗಿ ತೆರವುಗೊಳಿಸಲಾಗುತ್ತದೆ ಎಂದರು.

Key words: strict action, clear encroachment, government land,Minister,  Krishna Bhairegowda

The post ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಕಠಿಣ ಕ್ರಮ ಕೈಗೊಳ್ಳುತ್ತೇವೆ : ಕಂದಾಯ ಸಚಿವ ಕೃಷ್ಣಭೈರೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

താനൂരില്‍ നിന്നും തിരൂരിലേക്ക്; വി. അബ്ദുറഹിമാന്‍ മണ്ഡലം മാറി

മലപ്പുറം: താനൂര്‍ മണ്ഡലത്തില്‍ എല്‍.ഡി.എഫ് സ്ഥാനാര്‍ത്ഥിയായി പ്രഖ്യാപിച്ചിരുന്ന വി. അബ്ദുറഹിമാന്‍ മണ്ഡലം...

'6 சீட்டுனா பேசுறதுக்கு கூப்பிடுங்க, இல்லன்னா..!'- கறார் சி.பி.எம்; இறங்கி வராத திமுக? பின்னணி என்ன?

திமுக - சி.பி.எம் இடையேயான தொகுதி பங்கீட்டில் இழுபறி ஓய்ந்தபாடில்லை. மூன்று...

Off The Record: గుంటూరు నియోజకవర్గంలో పెరిగిపోతున్న అసమ్మతి సెగలు

Off The Record: గుంటూరు తూర్పు నియోజకవర్గంలో మైనార్టీల ఓట్లు ఎక్కువ....

കോണ്‍ഗ്രസിന്റെ രണ്ടാംഘട്ട സ്ഥാനാര്‍ത്ഥി പട്ടിക പ്രഖ്യാപിച്ചു; കണ്ണൂരില്‍ ടി.ഒ മോഹനന്‍, അബിന്‍ വര്‍ക്കിയും സന്ദീപ് വാര്യരും പട്ടികയില്‍

തിരുവനന്തപുരം: ഏറെ അനിശ്ചിതത്വത്തിനും ചര്‍ച്ചകള്‍ക്കുമൊടുവില്‍ നിയമസഭാ തെരഞ്ഞെടുപ്പിനുള്ള കോണ്‍ഗ്രസിന്റെ രണ്ടാം ഘട്ട...