20
March, 2026

A News 365Times Venture

20
Friday
March, 2026

A News 365Times Venture

ಹಾಡಿ ಪ್ರದೇಶಕ್ಕೆ ಜಿಪಂ ಸಿಇಓ  ಭೇಟಿ: ಅಹವಾಲು ಸ್ವೀಕಾರ

Date:

ಮೈಸೂರು, ಮಾರ್ಚ್,19,2025 (www.justkannada.in): ಜಿಲ್ಲಾ ಪಂಚಾಯಿತ್  ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್. ಯುಕೇಶ್ ಕುಮಾರ್ ಅವರು ಇಂದು ತಾಲ್ಲೂಕಿನ ದೊಡ್ಡ ಹೆಜ್ಜೂರು, ಕಿರಂಗೂರು ಹಾಗೂ ಉಮ್ಮತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹಾಡಿ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು.

ಮೊದಲಿಗೆ ದೊಡ್ಡ ಹೆಜ್ಜೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರ ಬಳಿ ಇಂದಿಗೂ ಘನ ತ್ಯಾಜ್ಯ ವಿಲೇವಾರಿ ಘಟಕ ಕಾರ್ಯ‌ನಿರ್ವಹಿಸದ ಬಗ್ಗೆ ಪ್ರಶ್ನಿಸಿದರು. ಜೊತೆಗೆ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬೇಡಿಕೆ ಮತ್ತು ವಸೂಲಾತಿ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡರು.

ಬಳಿಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ 15ನೇ ಹಣಕಾಸು ಯೋಜನೆಯಡಿ ನಿರ್ಮಾಣಗೊಂಡಿರುವ ಶೌಚಾಲಯ ಕಾಮಗಾರಿ ಪರಿಶೀಲನೆ ಮಾಡಿದರು. ಜೊತೆಗೆ ಶಾಲೆಯಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಕಲ್ಪಿಸಿರುವುದರ ಕುರಿತು ಮಾಹಿತಿ ಪಡೆದರು.

ಬಳಿಕ ಕಿರಂಗೂರಿನ‌ ಶಂಕರಪುರ ಹಾಡಿಗೆ ತೆರಳಿ ಅಲ್ಲಿನ ಜನರ ಸಮಸ್ಯೆಯನ್ನು ಆಲಿಸಿದರು. ಈ ವೇಳೆ ಅಲ್ಲಿನ‌ ಸ್ಥಳೀಯರು ವಸತಿ ಕುರಿತು ಬೇಡಿಕೆ ಸಲ್ಲಿಸಿದ್ದು, ಒಂದೇ ಮನೆಯಲ್ಲಿ ಒಂದೆರಡು ಕುಟುಂಬಗಳು ಹೆಚ್ಚಾಗಿ ವಾಸವಿದ್ದು, ನಿವೇಶನ ವಂಚಿತರಾದವರಿಗೆ ಸೂಕ್ತ‌ ವಸತಿ ಕಲ್ಪಿಸುವಂತೆ‌ ಮನವಿ ಸಲ್ಲಿಸಿದರು.

ಬಳಿಕ ಉಮ್ಮತ್ತೂರು ಗ್ರಾಮ ಪಂಚಾಯಿತಿಯ ನಲ್ಲೂರು ಪಾಲ ಆಶ್ರಮ ಶಾಲೆ‌ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಮಾಡಿದ್ದು, ಇಲ್ಲಿನ ಹಂಗಾಮಿ ಶಿಕ್ಷಕರಿಗೆ ನಿಗಧಿತ‌ ಸಮಯಕ್ಕೆ ವೇತನ ಪಾವತಿಯಾಗದಿರುವ ಕುರಿತ ಸಮಸ್ಯೆ ಆಲಿಸಿದರು. ಜೊತೆಗೆ ಶಾಲೆಗಳಲ್ಲಿ ಸಮರ್ಪಕ ಮೂಲಭೂತ ಸೌಕರ್ಯ ಮತ್ತು ಹೊಸದಾಗಿ ಶಾಲಾ ಶೌಚಾಲಯವನ್ನು ಮ-ನರೇಗಾದಿಂದ  ನಿರ್ಮಾಣಕ್ಕೆ ಸಂಬಂಧಿಸಿದಂತೆ ಪಿಡಿಒ ಅವರಿಗೆ ತಾಕೀತು ಮಾಡಿದರು.

ಇದೇ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೊಂಗಯ್ಯ, ಎಇಇ ಪುಟ್ಟರಾಜು, ಪಿ.ಆರ್.ಇ.ಡಿ. ಅಭಿಯಂತರರು, ಸಿಡಿಪಿಒ ಅಧಿಕಾರಿ ಹರೀಶ್, ಪರಿಶಿಷ್ಟ ಪಂಗಡ ಇಲಾಖೆ ಸಹಾಯಕ ನಿರ್ದೇಶಕ ಗಂಗಾಧರ್, ತಾಲ್ಲೂಕು ಯೋಜನಾಧಿಕಾರಿ ಎಂ.ಎಸ್.ರಾಜೇಶ್, ನರೇಗಾ ಸಹಾಯಕ ನಿರ್ದೇಶಕರ ಎಸ್. ಗಿರಿಧರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹದೇವ. ಕೆ, ಟಿ.ಭವ್ಯ, ಮ-ನರೇಗಾ ಸಹಾಯಕ ಇಂಜಿನಿಯರ್ ನಂದ ಶ್ರೀನಿವಾಸ್, ಮದನ್, ಅನಿಲ್ ಸೇರಿದಂತೆ ಕಾರ್ಯದರ್ಶಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Key words: mysore, ZP, CEO, Visit, Hadi Area

The post ಹಾಡಿ ಪ್ರದೇಶಕ್ಕೆ ಜಿಪಂ ಸಿಇಓ  ಭೇಟಿ: ಅಹವಾಲು ಸ್ವೀಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

താനൂരില്‍ നിന്നും തിരൂരിലേക്ക്; വി. അബ്ദുറഹിമാന്‍ മണ്ഡലം മാറി

മലപ്പുറം: താനൂര്‍ മണ്ഡലത്തില്‍ എല്‍.ഡി.എഫ് സ്ഥാനാര്‍ത്ഥിയായി പ്രഖ്യാപിച്ചിരുന്ന വി. അബ്ദുറഹിമാന്‍ മണ്ഡലം...

'6 சீட்டுனா பேசுறதுக்கு கூப்பிடுங்க, இல்லன்னா..!'- கறார் சி.பி.எம்; இறங்கி வராத திமுக? பின்னணி என்ன?

திமுக - சி.பி.எம் இடையேயான தொகுதி பங்கீட்டில் இழுபறி ஓய்ந்தபாடில்லை. மூன்று...

Off The Record: గుంటూరు నియోజకవర్గంలో పెరిగిపోతున్న అసమ్మతి సెగలు

Off The Record: గుంటూరు తూర్పు నియోజకవర్గంలో మైనార్టీల ఓట్లు ఎక్కువ....

കോണ്‍ഗ്രസിന്റെ രണ്ടാംഘട്ട സ്ഥാനാര്‍ത്ഥി പട്ടിക പ്രഖ്യാപിച്ചു; കണ്ണൂരില്‍ ടി.ഒ മോഹനന്‍, അബിന്‍ വര്‍ക്കിയും സന്ദീപ് വാര്യരും പട്ടികയില്‍

തിരുവനന്തപുരം: ഏറെ അനിശ്ചിതത്വത്തിനും ചര്‍ച്ചകള്‍ക്കുമൊടുവില്‍ നിയമസഭാ തെരഞ്ഞെടുപ്പിനുള്ള കോണ്‍ഗ്രസിന്റെ രണ്ടാം ഘട്ട...