28
June, 2026

A News 365Times Venture

28
Sunday
June, 2026

A News 365Times Venture

ಶಾಸಕರ ಅಮಾನತು ಆದೇಶ ವಾಪಸ್ ಪಡೆಯಿರಿ, ಇಲ್ಲವಾದರೆ ತೀವ್ರ ಹೋರಾಟ: ಆರ್.ಅಶೋಕ ಆಗ್ರಹ

Date:

ಬೆಂಗಳೂರು, ಏಪ್ರಿಲ್, 2,2025 (www.justkannada.in):  18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯದೇ ಹೋದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದರು.

18 ಶಾಸಕರ ಅಮಾನತು ಆದೇಶ ವಾಪಸ್ ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ನಂತರ ವಿಧಾನಸೌಧದಲ್ಲಿ ಮಾತನಾಡಿದ ಆರ್.ಅಶೋಕ್ ಅವರು, ಮುಸ್ಲಿಮರಿಗೆ ನೀಡಿದ ಮೀಸಲಾತಿಯನ್ನು ವಿರೋಧಿಸಿ ಹಾಗೂ ಹನಿಟ್ರ್ಯಾಪ್ ಪ್ರಕರಣ ಖಂಡಿಸಿ 18 ಶಾಸಕರು ಪ್ರತಿಭಟನೆ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಸಿಬಿಐ, ಎಸ್ಐಟಿ ಅಥವಾ ಯಾವುದೇ ತನಿಖೆ ಮಾಡುವುದಾಗಿ ಹೇಳಿದ್ದರೆ ಅಥವಾ ಸ್ಪಷ್ಟತೆ ನೀಡಿದ್ದರೆ ಪ್ರತಿಭಟನೆ ಕೈ ಬಿಡಬಹುದಿತ್ತು. ಅಮಾನತು ಸಮಯದಲ್ಲಿ ಸ್ಪೀಕರ್ ಯು.ಟಿ.ಖಾದರ್ ಸೌಜನ್ಯಕ್ಕೂ ಶಾಸಕರನ್ನು ಕರೆದು ಮಾತಾಡಿಲ್ಲ ಎಂದು ದೂರಿದರು.

ಸ್ಪೀಕರ್ ಕಾಂಗ್ರೆಸ್ ಸರ್ಕಾರದ ಪರವಾಗಿ ನಿಂತಿದ್ದಾರೆ. ಈಗ ಸಚಿವ ಸಂಪುಟ ಪುನರ್ ರಚನೆಯಾಗಲು ಸಿದ್ಧತೆ ನಡೆದಿದೆ. ಇಂತಹ ಸಮಯದಲ್ಲಿ ವಿರೋಧ ಪಕ್ಷದ ಸದಸ್ಯರ ವಿರುದ್ಧ ಕ್ರಮ ಕೈಗೊಂಡರೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಸ್ಪೀಕರ್ ಯು.ಟಿ.ಖಾದರ್ ಅವರಿಗಿದೆ. ಸಭಾಧ್ಯಕ್ಷರ ಪೀಠ ಬಹಳ ಪವಿತ್ರವಾದುದು. ಸ್ಪೀಕರ್ ಯಾರು ಯಾರನ್ನೋ ಕರೆದುಕೊಂಡು ಬಂದು ಫೋಟೋ ತೆಗೆಸಿಕೊಳ್ಳುತ್ತಾರೆ. ಆದರೆ ಶಾಸಕರು ಪೀಠದ ಬಳಿ ಬಂದು ಪ್ರತಿಭಟನೆ ಮಾಡಿದರೆ ಅವರನ್ನು ಅಮಾನತು ಮಾಡಲಾಗುತ್ತದೆ. ಸ್ಪೀಕರ್ ಕೂಡಲೇ ಅಮಾನತು ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

Key words: Revoke, suspension, order, MLAs, R. Ashoka, demands

The post ಶಾಸಕರ ಅಮಾನತು ಆದೇಶ ವಾಪಸ್ ಪಡೆಯಿರಿ, ಇಲ್ಲವಾದರೆ ತೀವ್ರ ಹೋರಾಟ: ಆರ್.ಅಶೋಕ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അയോധ്യ ക്ഷേത്രക്കൊള്ള: ഇപ്പോള്‍ മോദിക്കും യോഗിക്കും ഒച്ചയില്ലേ, എന്തേ മൗനം? രൂക്ഷവിമര്‍ശനവുമായി പ്രിയങ്ക് ഖാര്‍ഗെ

ബെംഗളൂരു: അയോധ്യയിലെ രാമക്ഷേത്ര നിര്‍മാണത്തിനായി ഭക്തര്‍ നല്‍കിയ സംഭാവനകളില്‍ വന്‍ സാമ്പത്തിക...

Shoaib Akhtar: ఉగ్రవాదులతో క్రికెటర్‌కి సంబంధం ఏంటి? అదీ 26/11 ముంబై, పహల్గామ్ దాడుల సూత్రధారుతో..

Shoaib Akhtar: పాకిస్థాన్‌లో ఉగ్రవాదం రోజు రోజుకూ మితిమీరిపోతోంది. తాజాగా మాజీ...

ಯಾವುದೇ ಕಾರಣಕ್ಕೂ ಒಂದು ಇಂಚು ಭೂಮಿ ಕೊಡಬೇಡಿ- ರೈತರಿಗೆ HDK ಕಿವಿಮಾತು

ರಾಮನಗರ,ಜೂನ್,27,2026 (www.justkannada.in): ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರ ಸಂಬಂಧ...