15
May, 2025

A News 365Times Venture

15
Thursday
May, 2025

A News 365Times Venture

ಏ.8 ರಿಂದ 9 ದಿನಗಳ ಕಾಲ ಹಾಲನೂರು ಶ್ರೀ ಮಲ್ಲೇಶ್ವರ ಸ್ವಾಮಿ, ಪಾರ್ವತಿದೇವಿ ಜಾತ್ರೆ

Date:

ತುಮಕೂರು,ಏಪ್ರಿಲ್,4,2025 (www.justkannada.in): ತುಮಕೂರು ತಾಲ್ಲೂಕಿನ ಕಸಬಾ ಹೋಬಳಿ ಹಾಲನೂರು ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಮಲ್ಲೇಶ್ವರ ಸ್ವಾಮಿ, ಪಾರ್ವತಿದೇವಿ ಜಾತ್ರಾ ಮಹೋತ್ಸವ ಏಪ್ರಿಲ್ 8 ರಿಂದ ಏಪ್ರಿಲ್ 16ರವರೆಗೆ 9 ದಿನಗಳ ಕಾಲ ನಡೆಯಲಿದೆ.

ಜಿಲ್ಲಾಧಿಕಾರಿ ಶುಭ ಕಲ್ಯಾಣ್, ತಹಶೀಲ್ದಾರ್ ರಾಜೇಶ್ವರಿ, ಮುಜರಾಯಿ ಇಲಾಖೆ ಹಾಗೂ ಭಕ್ತಮಂಡಲಿ ,ಹಾಲನೂರು ಗ್ರಾಮದ ಯಜಮಾನರು, ಗ್ರಾಮಸ್ಥರ ನೇತೃತ್ವದಲ್ಲಿ ನಡೆಯಲಿರುವ ಜಾತ್ರಾ ಮಹೋತ್ಸವ ಏ.8 ರಂದು ಮಂಗಳವಾರ ಸಂಜೆ ಧ್ವಜಾರೋಹಣದೊಂದಿಗೆ ಚಾಲನೆಗೊಳ್ಳಲಿದೆ. ಏ.9 ರಂದು ಗ್ರಾಮದ ಎಲ್ಲಾ ಮನೆಗಳಿಂದ ಆರತಿಗಳು ಬರಲಿವೆ.ನಂತರ ಗಿರಿಜಾ ಕಲ್ಯಾಣ ನಡೆಯಲಿದೆ.

ಏ.10 ತ್ರಯೋದಶಿ ಗುರುವಾರ ಮಧ್ಯಾಹ್ನ 12-45 ಕ್ಕೆ ಬ್ರಹ್ಮ ರಥೋತ್ಸವ ನಡೆಯಲಿದೆ. ಬೆಳ್ಳಾವಿ ಮಠದ ಶ್ರೀ ಕಾರದ ವೀರಬಸವ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಏ.11 ರಂದು ಸಂಜೆ ಅಡ್ಡ ಪಲ್ಲಕ್ಕಿ ಉತ್ಸವ ಹಾಗೂ ಅದಲಾಪುರ ಮಹಾಲಕ್ಷ್ಮಿ ದೇವಿ ಮೆರವಣಿಗೆ ನೆರವೇರಲಿದೆ. ರಂಗೋಲಿ ಸ್ಪರ್ಧೆ ಸಹ ಏರ್ಪಡಿಸಲಾಗಿದೆ.

ಏ.12 ರಂದು ಹುಣ್ಣಿಮೆ ಶನಿವಾರದಂದು ಜಾತ್ರೆಯ ಮುಖ್ಯ ಆಕರ್ಷಣೆ ಉಪ್ಪರಿಗೆ ವಾಹನ ಉತ್ಸವ ನಡೆಯಲಿದ್ದು ,ಅಂದು ರಾತ್ರಿ ಶ್ರೀ ಮಲ್ಲೇಶ್ವರ ಕೃಪಾಪೋಷಿತ ನಾಟಕ ಮಂಡಳಿ ವತಿಯಿಂದ ಕುರುಕ್ಷೇತ್ರ ನಾಟಕ ಪ್ರದರ್ಶನವಾಗಲಿದೆ. ಏ.13 ರಂದು ರುದ್ರಾಕ್ಷಿ ಮಂಟಪ ಮೆರವಣಿಗೆ ಏ.16 ರಂದು ವಸಂತೋತ್ಸವ ಓಕುಳಿ ಆಚರಣೆ ಮೂಲಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಜಾತ್ರೆ ನಡೆಯುವ 9 ದಿನವೂ ನಿರಂತರವಾಗಿ ಅನ್ನ ದಾಸೋಹ ನಡೆಯಲಿದೆ. ಮುಜರಾಯಿ ಇಲಾಖೆ ನೇತೃತ್ವದಲ್ಲಿ ನಡೆಯುವ ಸದರಿ ಜಾತ್ರಾ ಮಹೋತ್ಸವದ ವೇಳೆ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಇರುತ್ತದೆ.

ರಥ ಬೀದಿಯಲ್ಲಿ ನೂರಾರು ಅಂಗಡಿ ಮುಂಗಟ್ಟು ತೆರೆದು ಕೊಳ್ಳಲಿವೆ. ಸಹಸ್ರಾರು ಭಕ್ತಾದಿಗಳು ಭಾಗವಹಿಸಲಿದ್ದಾರೆ. ಪ್ರಮುಖವಾಗಿ ಹರಕೆ ಮಾಡಿಕೊಂಡವರು ಹಾಗೂ ಹರಕೆ ಮಾಡಿಕೊಳ್ಳುವವರು ಕುಟುಂಬ ಸಮೇತರಾಗಿ ಆಗಮಿಸಿ ಹರಕೆ ತೀರಿಸಲಿದ್ದಾರೆ. ಸಂತಾನ, ಆರೋಗ್ಯ,ವಿದ್ಯೆ, ಲಗ್ನ ಇತ್ಯಾದಿಗಳ ಈಡೇರಿಕೆಗೆ ಭಕ್ತರು ಹರಕೆ ಹೊತ್ತಿರುತ್ತಾರೆ. ಹರಕೆ ಈಡೇರಿದ ಮೇಲೆ ಹರಕೆ ತೀರಿಸುತ್ತಾರೆ. ಹಾಗೆಯೇ ಜಾತ್ರೆಗೆ ಬರುವ ಭಕ್ತಾದಿಗಳು ಹಾಲನೂರು ಸುತ್ತಮುತ್ತಲಿನ  ಪುರಾಣ ಪ್ರಸಿದ್ಧ ದೇವಾಲಯಗಳಾದ ಅರೆಯೂರು ವೈದ್ಯನಾಥೇಶ್ವರ,ಕೈದಾಳ ಚನ್ನಕೇಶವ,ಗೂಳೂರು ಗಣೇಶ, ಹೆತ್ತೇನಹಳ್ಳಿ ಮಾರಮ್ಮನ ಶ್ರೀ ಕ್ಷೇತ್ರಗಳಿಗೆ ಭೇಟಿ ನೀಡಬಹುದಾಗಿದೆ.

Key words: Halanur Sri Malleshwara Swamy, Parvata Devi, Fair , 8th April

The post ಏ.8 ರಿಂದ 9 ದಿನಗಳ ಕಾಲ ಹಾಲನೂರು ಶ್ರೀ ಮಲ್ಲೇಶ್ವರ ಸ್ವಾಮಿ, ಪಾರ್ವತಿದೇವಿ ಜಾತ್ರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್

ಮೈಸೂರು,ಮೇ,14,2025 (www.justkannada.in): ರಾಜ್ಯಸಚಿವ ಸಂಪುಟ ಪುನರಚನೆ ಕುರಿತು ಕಾಂಗ್ರೆಸ್ ಶಾಸಕ...

ദേശീയ സുരക്ഷ; തുര്‍ക്കി സര്‍വകലാശാലയുമായുള്ള ധാരണാപത്രം റദ്ദാക്കി ജെ.എന്‍.യു

ന്യൂദല്‍ഹി: ദേശീയ സുരക്ഷ മുന്‍നിര്‍ത്തി തുര്‍ക്കി സര്‍വകലാശാലയുമായുള്ള ധാരണാപത്രം നിര്‍ത്തിവെച്ച് ജെ.എന്‍.യു....

Mahanadu: కడపలో మహానాడు.. పార్టీలో కీలక సంస్కరణలు

Mahanadu: టీడీపీలో ఒకే పదవిలో మూడు సార్లు కంటే ఎక్కువ ఉండరాదన్న...