29
April, 2026

A News 365Times Venture

29
Wednesday
April, 2026

A News 365Times Venture

ಕೇಂದ್ರದಿಂದ ಬೆಲೆ ಏರಿಕೆ: ರಾಜ್ಯ, ಜಿಲ್ಲಾ ಮಟ್ಟದಲ್ಲಿ ಹೋರಾಟ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಏಪ್ರಿಲ್,12,2025 (www.justkannada.in):  ಬೆಲೆ ಏರಿಕೆ ಮಾಡಿರುವುದನ್ನ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ, ಜಿಲ್ಲಾ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಡಿಕೆ ಶಿವಕುಮಾರ್,  ಕೇಂದ್ರ ಸರ್ಕಾರ  ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿದೆ.  ಆದರೆ ರಾಜ್ಯ ಬಿಜೆಪಿಯವರು ನಮ್ಮ ವಿರುದ್ದ ಪ್ರತಿಭಟನೆ ಮಾಡುತ್ತಿದ್ದಾರೆ. ಮೊದಲು ಬಿಜೆಪಿ ಬೋರ್ಡ್ ಬದಲಿಸಲಿ. ಆರ್. ಅಶೋಕ್, ವಿಜಯೇಂದ್ರಗೆ ಮನವಿ ಮಾಡುತ್ತೇನೆ.  ಅಂದು ಬೆಲೆ ಏಷ್ಟು ಇತ್ತು.  ಮೋದಿ ಸರ್ಕಾರ  ಬಂದ ಮೇಲೆ ಎಷ್ಟು ಬೆಲೆ ಏರಿಕೆಯಾಗಿದೆ ಎಂದು ತಿಳಿದುಕೊಳ್ಳಲಿ . ಜನರಿಗೆ ಅನುಕೂಲ ಆಗಲಿ ಅಂತಾ ನಾವು 5 ಗ್ಯಾರಂಟಿ ತಂದಿದ್ದೇವೆ ಪ್ರತಿ ಜಿಲ್ಲೆಗಳಲ್ಲೂ ಕೇಂದ್ರದ ವಿರುದ್ದ ಹೋರಾಟ ಮಾಡಲು ತೀರ್ಮಾನಿಸುತ್ತೇವೆ  ಮೊದಲು ರಾಜ್ಯಮಟ್ಟದಲ್ಲಿ ಕೇಂದ್ರದ ವಿರುದ್ದ ಹೋರಾಟ ನಂತರ ಜಿಲ್ಲೆಗಳಲ್ಲಿ ಹೋರಾಟ ಮಾಡುತ್ತೇವೆ ಎಂದರು.

ಬೆಂಗಳೂರು ಕರಗ ಮಹೋತ್ಸವಕ್ಕೆ ಹಣ ಬಿಡುಗಡೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರು ಕರಗ ಮಹೋತ್ಸವಕ್ಕೆ ಹಣ ಬಿಡುಗಡೆ ಮಾಡಲಾಗಿದೆ. ಬಜೆಟ್ ನಲ್ಲಿ ಕೂಡ ಅನುದಾನ ಮೀಸಲಿಟ್ಟಿದ್ದೇವೆ. ಅನಗತ್ಯವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಅವರಲ್ಲಿಯೇ ಎರಡು, ಮೂರು ಗುಂಪುಗಳಿವೆ. ಎಲ್ಲರೂ ಒಗ್ಗಟ್ಟಿನಿಂದ ಬರಬಹುದಿತ್ತು. ಯಾರು ಅರ್ಜಿ ಕೊಟ್ಟಿದ್ದಾರೋ ಅವರಿಗೆ ಹಣ ಕೊಟ್ಟಿದ್ದೇವೆ. ಹಣ ಬಿಡುಗಡೆಯಾಗಿಲ್ಲ ಎಂಬುದು ಸುಳ್ಳು  ಎಂದರು.

Key words: Fight, against, center, state, district levels, DCM, DK Shivakumar

The post ಕೇಂದ್ರದಿಂದ ಬೆಲೆ ಏರಿಕೆ: ರಾಜ್ಯ, ಜಿಲ್ಲಾ ಮಟ್ಟದಲ್ಲಿ ಹೋರಾಟ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

20,000ത്തോളം പേര്‍ക്ക് വോട്ട് ചെയ്യാനാവാത്തത് നിര്‍ഭാഗ്യകരം; പോസ്റ്റല്‍ വോട്ട് നിഷേധത്തില്‍ തെരഞ്ഞെടുപ്പ് കമ്മീഷനെതിരെ ഹൈക്കോടതി

കൊച്ചി: തെരഞ്ഞെടുപ്പ് ഡ്യൂട്ടിലുണ്ടായിരുന്ന ഉദ്യോഗസ്ഥര്‍ക്ക് പോസ്റ്റല്‍ വോട്ട് നിഷേധിച്ചതില്‍ തെരഞ്ഞെടുപ്പ് കമ്മീഷനെതിരെ...

“சோசலிச புரட்சிபோல, தமிழ்நாட்டில் 'விசில் புரட்சி' ஏற்படப் போகிறது!"- செங்கோட்டையன்

திண்டுக்கல் மாவட்டம் பழனிக்கு வருகை தந்த தமிழக வெற்றிக் கழகத்தின் தலைமை...

Dacoit: ఓటీటీలోకి అడివి శేష్ ‘డెకాయిట్’.. స్ట్రీమింగ్ డేట్ ఫిక్స్!

టాలీవుడ్ యంగ్ అండ్ టాలెంటెడ్ హీరో అడివి శేష్, మృణాల్ ఠాకూర్...

ಸಿದ್ದರಾಮಯ್ಯ ಇನ್ನು 15 ದಿನ ಮಾತ್ರ ಸರದಾರ- ಸಂಸದ ಗೋವಿಂದ ಕಾರಜೋಳ

ಬಾಗಲಕೋಟೆ,ಏಪ್ರಿಲ್,28,2026 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ  ಚರ್ಚೆಯಾಗುತ್ತಿದ್ದು ಇದೀಗ...