26
March, 2026

A News 365Times Venture

26
Thursday
March, 2026

A News 365Times Venture

ಜಾತಿ ಗಣತಿ ವಿಚಾರವಾಗಿ ಸರ್ಕಾರ ಮುಕ್ತ- ಸಚಿವ ಎಂ.ಸಿ ಸುಧಾಕರ್

Date:

ಬೆಂಗಳೂರು,ಏಪ್ರಿಲ್,18,2025 (www.justkannada.in):  ಜಾತಿ ಗಣತಿ ವಿಚಾರವಾಗಿ ನಿನ್ನೆ ವಿಶೇಷ ಸಂಪುಟ ಸಭೆ ನಡೆದಿದ್ದು ಸಚಿವರ ಅಭಿಪ್ರಾಯ ಪಡೆದ ಸಿಎಂ ಸಿದ್ದರಾಮಯ್ಯ ಮೇ 2 ರಂದು ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಸಚಿವ ಸಂಪುಟದಲ್ಲಿ ಜಾತಿಗಣತಿ ಮುಂದೂಡಿಕೆ ವಿಚಾರ ಕುರಿತು ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್,  ಜಾತಿ ಗಣತಿ ವಿಚಾರವಾಗಿ ಸರ್ಕಾರ ಮುಕ್ತವಾಗಿದೆ.  ಎಲ್ಲರಿಗೂ ಚರ್ಚೆಗೆ ಅವಕಾಶ ನೀಡಲಾಗಿದೆ.  ನಿನ್ನೆ ನಡೆದ ಸಭೆ ಅಪೂರ್ಣವಾಗಿದ್ದು, ಸಿಎಂ, ಡಿಸಿಎಂ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ಸಿಇಟಿ ಪರೀಕ್ಷೆ ವೇಳೆ  ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಕುರಿತು ಪ್ರತಿಕ್ರಿಯಿಸಿದ ಸಚಿವ ಎಂ.ಸಿ ಸುಧಾಕರ್,  ಹಿಜಾಬ್ ಪ್ರಕರಣ ರೀತಿ ರಾಜಕೀಯ ಮಾಡಲ್ಲ. ಎಲ್ಲರ ಭಾವನೆಗಳನ್ನ ನಾವು ಗೌರವಿಸುತ್ತೇವೆ.  ಸಿಇಟಿ  ಪರೀಕ್ಷೆ ಹೊಣೆ ಅಯಾ ಡಿಸಿಗಳಿಗೆ ನೀಡಿದ್ದೇವೆ.   ಜನಿವಾರ ತೆಗೆಯಬೇಕು ಎಂಬ ನಿಯಮಗಳಿಲ್ಲ ಜನಿವಾರ ತೆಗೆಸಿದ್ದು ಅತಿರೇಕ. ಎಲ್ಲಾ ಧರ್ಮ ಆಚಾರ ವಿಚಾರ ಗೌರವಿಸಬೇಕು ಎಂದರು.

Key words: Government, caste census, Minister, M.C. Sudhakar

The post ಜಾತಿ ಗಣತಿ ವಿಚಾರವಾಗಿ ಸರ್ಕಾರ ಮುಕ್ತ- ಸಚಿವ ಎಂ.ಸಿ ಸುಧಾಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಟಿಪ್ಪರ್- ಖಾಸಗಿ ಬಸ್ ಡಿಕ್ಕಿ: 13 ಮಂದಿ ಸಜೀವ ದಹನ

ಪ್ರಕಾಶಂ, ಮಾರ್ಚ್,26,2026 (www.justkannada.in):  ಟಿಪ್ಪರ್ ಮತ್ತು ಖಾಸಗಿ ಬಸ್ ಗಳ...

ഹോർമുസ് കടലിടുക്കിൽ സാഹചര്യങ്ങൾ പഴയപോലെയാകില്ല: ഇറാൻ

ടെഹ്‌റാൻ: ഹോർമുസ് കടലിടുക്കിലെ സാഹചര്യം പഴയപടിയാകില്ലെന്ന് ഇറാൻ സൈന്യത്തിന്റെ ഖാത്തം അൽ-അൻബിയ...

பாபநாசம் தொகுதி அமமுக-வுக்கு இல்லை; ரூட் போடும் வைத்தி! – திமுகவில் இணைகிறாரா டிடிவி விசுவாசி?

அமமுக-வின் துணை பொதுச்செயலாளர் எம்.ரெங்கசாமி. டி.டி.வி.தினகரனுக்கு அடுத்தபடியாக டெல்டா அமமுக-வின் முகமாக...