16
April, 2026

A News 365Times Venture

16
Thursday
April, 2026

A News 365Times Venture

ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಎರಡು ವಿಚಾರಗಳು ಅಪ್ರಸ್ತುತ- ಸಚಿವ ಕೆ.ಎಚ್ ಮುನಿಯಪ್ಪ.

Date:

ಬೆಂಗಳೂರು, ಏಪ್ರಿಲ್‌ 19,2025 (www.justkannada.in):  ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಎರಡು ವಿಚಾರಗಳು ಸದ್ಯ ಅಪ್ರಸ್ತುತ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆಎಚ್ ಮುನಿಯಪ್ಪ, ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ.ಶಿವಕುಮಾರ್ ರವರೇ ಮುಂದುವರೆಯಲ್ಲಿದ್ದಾರೆ.  ಅದು ನಮ್ಮ ಮಟ್ಟದಲ್ಲಿನ ಚರ್ಚೆ ಅಲ್ಲ ಏನೇ ಇದ್ದರೂ ಹೈಕಮಾಂಡ್ ಗೆ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವಿದೆ ಎಂದು ಹೇಳಿದರು.

ದಲಿತ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ವಿಚಾರವಾಗಿ ಮಾಧ್ಯಮಗಳು ಸೃಷ್ಟಿ ಮಾಡಿವೆ. ಈಗಾಗಲೇ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರೇ ಇದ್ದು ಇದರಲ್ಲಿ ಯಾವುದೇ ಬದಲಾವಣೆಗಳಿಲ್ಲ. ಎಲ್ಲಾ ಸಮುದಾಯಗಳಿಗೆ ಸಾಮಾಜಿಕ, ಶೈಕ್ಷಣಿಕ ,ಆರ್ಥಿಕ ಸಮಾನತೆ ಕೊಡುವುದು ಕಾಂಗ್ರೆಸ್ ಪಕ್ಷದ ಬದ್ಧತೆ ಯಾಗಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.

ಧರ್ಮ ಸಿಂಗ್ ನಂತರ ಅತ್ಯಂತ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರು ಆಗಬೇಕು ಎಂದು ನಾನೇ ಹೇಳಿದ್ದೆ.  ತದನಂತರ ಮೊದಲು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದಾಗ ನಮ್ಮ ಪರಮೇಶ್ವರ್ ರವರು ಕೆಪಿಸಿಸಿ ಅಧ್ಯಕ್ಷರಿದ್ದಾಗ ಆಕಸ್ಮಿಕವಾಗಿ ಸೋತರು ಕೂಡ ಅವರಿಗೆ ಉಪ ಮುಖ್ಯಮಂತ್ರಿ ಮಾಡಬೇಕೆಂದು ನಾನೇ ಒತ್ತಾಯ ಮಾಡಿದ್ದೆ. ದಲಿತರಲ್ಲಿ ಯಾರಿಗಾದರು ಕೊಡಬೇಕೆಂದು ಹೇಳಿದ್ದೆ ಆದರೆ ಅದರ ಸಮಯ ಇನ್ನೂ ಬಂದಿಲ್ಲ ಎಂಬುದು ಕಾಣತಿದೆ. ಏಕೆಂದರೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಇರುವುದರಿಂದ ನಮ್ಮ ಹೈಕಮಾಂಡ್ ಯಾವ ಸಮಯದಲ್ಲಿ ಏನು ನಿರ್ಧಾರ ಮಾಡಬೇಕು ಮಾಡಲಿದೆ ಎಂದರು.

Key words: change, CM, KPCC President, irrelevant issues , Minister, K.H. Muniyappa.

The post ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಎರಡು ವಿಚಾರಗಳು ಅಪ್ರಸ್ತುತ- ಸಚಿವ ಕೆ.ಎಚ್ ಮುನಿಯಪ್ಪ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അവർ തന്ത്രങ്ങൾ മെനയുകയാണ്; മണ്ഡല പുനർ നിർണയത്തെ ഇന്ത്യാ മുന്നണി എതിർക്കും: ഖാർഗെ

ന്യൂദൽഹി: ഇന്ത്യാ മുന്നണി മണ്ഡല പുനർ നിർണയ ബില്ലിനെ പാർലമെന്റിൽ എതിർക്കുമെന്ന്...

Saving Account: మీ బ్యాంక్ ఖాతాల్లో నిరంతరం డబ్బులు వేస్తున్నారా..? ఐటీ నోటీసులొస్తాయ్..

బ్యాంకులో ఎంత డబ్బు దాచుకుంటే ఆదాయపు పన్ను శాఖ నుంచి నోటీసులు...

ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಢುವುದು ಬೇಡ-ಹೆಚ್ ಡಿಕೆಗೆ ಯೋಗೇಶ್ವರ್ ಟಾಂಗ್

ರಾಮನಗರ,ಏಪ್ರಿಲ್,15,2026(www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಮತ್ತೆ ಕೇಂದ್ರ...