16
April, 2026

A News 365Times Venture

16
Thursday
April, 2026

A News 365Times Venture

ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಫೈರಿಂಗ್ ಮಾಡಿದ ಮಾಜಿ ಎಂಎಲ್​ಸಿ ಸಂಬಂಧಿ

Date:

ಚಿಕ್ಕಬಳ್ಳಾಪುರ, ಏಪ್ರಿಲ್ ,23,2025 (www.justkannada.in):  ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್​ಸಿ ವೈ.ಎ.ನಾರಾಯಣಸ್ವಾಮಿ  ಸಂಬಂಧಿಯೊಬ್ಬರು ಗುಂಡಿನ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಮಾಜಿ ಎಂಎಲ್​ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶಕುಮಾರ್ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡು ತಗುಲಿ ಚಿಕನ್ ರವಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಲ್ಲು ಕ್ವಾರಿ ಕ್ರಷರ್ ​ಗೆ ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದರು. ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಾಜಿ ಎಂಎಲ್​ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶಕುಮಾರ್ ಪ್ರತಿಭಟಿಸುತ್ತಿದ್ದವರ ಮೇಲೆ  ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಗುಂಡಿನ ದಾಳಿಯಿಂದ ಗಾಯಗೊಂಡ ರವಿ ಎಂಬುವವರನ್ನ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Key words: Former MLC,  relative, fires, protesters

The post ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಫೈರಿಂಗ್ ಮಾಡಿದ ಮಾಜಿ ಎಂಎಲ್​ಸಿ ಸಂಬಂಧಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അവർ തന്ത്രങ്ങൾ മെനയുകയാണ്; മണ്ഡല പുനർ നിർണയത്തെ ഇന്ത്യാ മുന്നണി എതിർക്കും: ഖാർഗെ

ന്യൂദൽഹി: ഇന്ത്യാ മുന്നണി മണ്ഡല പുനർ നിർണയ ബില്ലിനെ പാർലമെന്റിൽ എതിർക്കുമെന്ന്...

Saving Account: మీ బ్యాంక్ ఖాతాల్లో నిరంతరం డబ్బులు వేస్తున్నారా..? ఐటీ నోటీసులొస్తాయ్..

బ్యాంకులో ఎంత డబ్బు దాచుకుంటే ఆదాయపు పన్ను శాఖ నుంచి నోటీసులు...

ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಢುವುದು ಬೇಡ-ಹೆಚ್ ಡಿಕೆಗೆ ಯೋಗೇಶ್ವರ್ ಟಾಂಗ್

ರಾಮನಗರ,ಏಪ್ರಿಲ್,15,2026(www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಮತ್ತೆ ಕೇಂದ್ರ...