18
April, 2026

A News 365Times Venture

18
Saturday
April, 2026

A News 365Times Venture

SSLC Result: 22 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

Date:

ಬೆಂಗಳೂರು,ಮೇ,2,2025 (www.justkannada.in):  2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಶೇ.66.1ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಈ ಬಾರಿ 22 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಜಿಲ್ಲಾವಾರು ಫಲಿತಾಂಶ ಹೀಗಿದೆ

ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ(ಶೇ.91.12), ಉಡುಪಿ ಜಿಲ್ಲೆ 2ನೇ ಸ್ಥಾನ(ಶೇ.89.96), ಉತ್ತರ ಕನ್ನಡ ಜಿಲ್ಲೆಗೆ 3ನೇ ಸ್ಥಾನ(ಶೇ.83.19), ಶಿವಮೊಗ್ಗ ಜಿಲ್ಲೆಗೆ 4ನೇ ಸ್ಥಾನ(ಶೇ.82.29), ಕೊಡಗು ಜಿಲ್ಲೆಗೆ 5ನೇ ಸ್ಥಾನ(ಶೇ.82.21), ಹಾಸನ 6ನೇ ಸ್ಥಾನ ಶಿರಸಿ 7ನೇ ಸ್ಥಾನ, ಚಿಕ್ಕಮಗಳೂರು 8ನೇ ಸ್ಥಾನ,  ಬೆಂಗಳೂರು ಗ್ರಾಮಾಂತರ 9ನೇ ಸ್ಥಾನ  ಹಾವೇರಿ 13ನೇ ಸ್ಥಾನ  ಮೈಸೂರು 15ನೇ ಸ್ಥಾನ ಪಡೆದಿದ್ದು ಕಲಬುರಗಿ ಕೊನೆಯ ಸ್ಥಾನ(ಶೇ42.43) ಪಡೆದಿದೆ.

2025 ಮಾರ್ಚ್​ 21ರಿಂದ ಏಪ್ರಿಲ್​ 4 ರವರೆಗೆ ರಾಜ್ಯದ 2,818 ಕೇಂದ್ರಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲಾಗಿತ್ತು. 4,61563 ಹುಡುಗರು ಮತ್ತು 4,34,884 ಹುಡಗಿಯರು ಪರೀಕ್ಷೆ ಬರೆದಿದ್ದರು. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ ಎಸ್​ಎಸ್​ಎಲ್​ಸಿ ಫಲಿತಾಂಶ ಲಭ್ಯವಿದ್ದು, https://karresults.nic.in ಜಾಲತಾಣದಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.

Key words: SSLC Result, 625 Marks, 22 students, Dakshina Kannada district, first place

The post SSLC Result: 22 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വാല്‍പ്പാറ അപകടം: വിയോഗം നാടിനാകെ നികത്താനാവാത്ത നഷ്ടം, കുടുംബങ്ങളുടെ ദുഃഖത്തില്‍  പങ്കുചേരുന്നു; അനുശോചിച്ച് മുഖ്യമന്ത്രി

  തിരുവനന്തപുരം: വാല്‍പ്പാറയില്‍ മിനി വാന്‍ അപകടത്തില്‍പ്പെട്ട സംഭവത്തില്‍ അനുശോചനം രേഖപ്പെടുത്തി...

'டெல்லியை வீழ்த்தியது தமிழ்நாடு'- தொகுதி மறுவரையறை தோல்வி குறித்து ஸ்டாலின்

நாடாளுமன்ற சிறப்புக் கூட்டத்தின் முதல் நாளான நேற்று (ஏப்ரல்.17) மக்களவையில் 3...

Kids Wellness : పిల్లల ఆరోగ్యం పదిలంగా ఉండాలంటే.. ఈ హెల్త్ టెస్టులు తప్పనిసరి.!

పిల్లలే రేపటి పౌరులు, వారి ఆరోగ్యంపై పెట్టే శ్రద్ధ వారు ఆరోగ్యవంతమైన...

ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏ.18 ರಂದು ವಿಶೇಷ ಕಾರ್ಯಕ್ರಮ

ಬೆಂಗಳೂರು, ಏಪ್ರಿಲ್ ,16 ,2026 (www.justkannada.in): ಭ್ರಷ್ಟಾಚಾರ ನಿರ್ಮೂಲನೆ ಮತ್ತು...