23
April, 2026

A News 365Times Venture

23
Thursday
April, 2026

A News 365Times Venture

ಅಪರೇಷನ್ ಸಿಂಧೂರಕ್ಕೆ ಬೆದರಿದ ಪಾಕ್: ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧ ಎಂದ ಪಾಕ್ ರಕ್ಷಣಾ ಸಚಿವ

Date:

ನವದೆಹಲಿ,ಮೇ,7,2025 (www.justkannada.in):  ಪೆಹಲ್ಗಾಮ್​ ಉಗ್ರರ ದಾಳಿಯ ಪ್ರತೀಕಾರಕ್ಕೆ  ನಿನ್ನೆ ತಡರಾತ್ರಿ ಭಾರತೀಯ ಸೇನೆ ಉಗ್ರರ 9 ನೆಲೆಗಳ ಮೇಲೆ ದಾಳಿ ಕ್ಷಿಪಣಿ ದಾಳಿ ನಡೆಸಿ   ಉಗ್ರರ ನೆಲೆಯನ್ನ ಧ್ವಂಸ ಮಾಡಿದ್ದು, ಈ ಅಪರೇಷನ್ ಸಿಂಧೂರಕ್ಕೆ  ಬೆದರಿದ ಪಾಕಿಸ್ತಾನ ಇದೀಗ ಶಾಂತಿ ಮಂತ್ರ ಜಪಿಸಿದಂತಿದೆ.

ಹೌದು  ಆಪರೇಷನ್ ಸಿಂಧೂರ್ ​​ ಬೆನ್ನಲ್ಲೇ ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧ ಎಂದು ಪಾಕ್ ರಕ್ಷಣಾ ಸಚಿವ ಖವಾಜಾ ಅಸಿಫ್ ಶಾಂತಿ ಪಠಣ ಮಾಡಿದ್ದಾರೆ ಎಂದು ವರದಿಯಾಗಿದೆ.

ಅಪರೇಷನ್ ಸಿಂಧೂರ ಕಾರ್ಯಾಚರಣೆ ಬೆನ್ನಲ್ಲೆ ಪ್ರತಿಕ್ರಿಯಿಸಿರುವ  ಪಾಕಿಸ್ತಾನ ರಕ್ಷಣಾ ಸಚಿವ ಅಸಿಫ್​ ಭಾರತ ದಾಳಿ ಮಾಡಿದರೆ ಮಾತ್ರ ಪಾಕಿಸ್ತಾನ ಪ್ರತಿಕ್ರಿಯೆ ನೀಡುತ್ತದೆ . ನಾವು ಭಾರತದ ವಿರುದ್ಧ ಯಾವುದೇ ಕ್ರಮಕೈಗೊಳ್ಳುವಿದಲ್ಲ ಎಂದು ಹೇಳುತ್ತಿದ್ದೇವೆ. ಆದರೆ ನಮ್ಮ ಮೇಲೆ ದಾಳಿ ನಡೆದರೆ, ನಾವು ಪ್ರತಿದಾಳಿ ಮಾಡುತ್ತೇವೆ. ಇನ್ನು ಒಂದು ವೇಳೆ ಭಾರತ ಹಿಂದೆ ಸರಿದರೆ ನಾವು ಸಹ ಖಂಡಿತವಾಗಿಯೂ ಈ ಉದ್ವಿಗ್ಬತೆಯನ್ನು ಶಮನಗೊಳಿಸುತ್ತೇವೆ. ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧರಿದ್ದೇವೆ ಎಂದಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ದೇಶದಾದ್ಯಂತ  ಮಾಕ್ ಡ್ರಿಲ್ (ಅಣಕುಪ್ರದರ್ಶನ ) ನಡೆಯುತ್ತಿದ್ದು ಈ ಪ್ರಯುಕ್ತ ಯುದ್ಧದ ಸೈರನ್ ಮೊಳಗಿತು. ಏನಾದರು ಪಾಕಿಸ್ತಾನ್ ಭಾರತದ ಮೇಲೆ ದಾಳಿ ಮಾಡಿದರೆ ಹೇಗೆ ರಕ್ಷಿಸಿಕೊಳ್ಳಬೇಕು ಎನ್ನುವುದರ ಕುರಿತು ಅಣುಕು ಪ್ರದರ್ಶನ  ಇದಾಗಿದೆ.

Key words: Operation Sindhura, Pakistan, threatened

The post ಅಪರೇಷನ್ ಸಿಂಧೂರಕ್ಕೆ ಬೆದರಿದ ಪಾಕ್: ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧ ಎಂದ ಪಾಕ್ ರಕ್ಷಣಾ ಸಚಿವ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മുഖ്യമന്ത്രി കസേരയ്ക്കായി സോഷ്യല്‍ മീഡിയയില്‍ പോര്; ചെന്നിത്തലയ്ക്കായി ക്യാമ്പെയ്‌നുമായി യൂത്ത് കോണ്‍ഗ്രസും കെ.എസ്.യുവും

തിരുവനന്തപുരം: കേരളത്തില്‍ നിയമസഭാ തെരഞ്ഞെടുപ്പ് ഫലം വരാന്‍ ദിവസങ്ങള്‍ മാത്രം ബാക്കി...

`சாதி, மதமற்றவர்' சான்றிதழ்; நடைமுறை எதார்த்தமும் சட்டச் சிக்கல்களும் – ஓர் ஆழமான அலசல்!

நடிகர் பார்த்திபன் ஹைதராபாத் நிகழ்ச்சியில் தனது சாதி குறித்துப் பேசியது விமர்சனத்திற்குள்ளான...

Amazon Great India Summer Sale: అమెజాన్ సమ్మర్ సేల్‌లో.. ల్యాప్‌టాప్‌లు, స్మార్ట్‌ఫోన్‌లు సగం కంటే తక్కువ ధరకే!

అమెజాన్ గ్రేట్ ఇండియా సమ్మర్ సేల్‌ను ప్రారంభిస్తోంది. ఈ సేల్ మే...

ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬಸವ ತತ್ವ, ಸಿದ್ದಾಂತ ಬೆಳೆಯಲು ಸಾಧ್ಯ- ಮಲ್ಲಿಕಾರ್ಜುನ ಖರ್ಗೆ

ಬೀದರ್,ಏಪ್ರಿಲ್,22,2026 (www.justkannada.in): ಬಸವ ತತ್ವ, ಸಿದ್ಧಾಂತಗಳ ಬಗ್ಗೆ ಬಹಳಷ್ಟು ಜನರು...