23
March, 2026

A News 365Times Venture

23
Monday
March, 2026

A News 365Times Venture

ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ: ಅನಗತ್ಯವಾಗಿ ಮರ ಕಡಿಯಲು ಅನುಮತಿಸದಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ

Date:

ಬೆಂಗಳೂರು, ಮೇ,8,2025 (www.justkannada.in): ಸರ್ಕಾರಿ ಭೂಮಿ, ಅರಣ್ಯ, ರಸ್ತೆ ಬದಿಯಲ್ಲಿನ ಮರಗಳನ್ನು ಅಕ್ರಮವಾಗಿ ಕಡಿಯುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮತ್ತು ಹೆಚ್ಚಿನ ದಂಡ ಹಾಕಲು ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನ ಅರಣ್ಯ ಭವನದಲ್ಲಿಂದು ಕೆ.ಡಿ.ಪಿ ಮತ್ತು ಎಂ.ಎಂ.ಆರ್.‌ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗೆ ಸುಪ್ರೀಂಕೋರ್ಟ್‌ ಸಹ ಹೆಚ್ಚಿನ ಮರಗಳನ್ನು ಕಡಿಯುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪ್ರಸಕ್ತ ಸನ್ನಿವೇಶದಲ್ಲಿ ವೃಕ್ಷ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದರು.

ಅಭಿವೃದ್ಧಿಯ ಹೆಸರಲ್ಲಿ ನೂರಾರು ಮರಗಳ ಕಡಿತಲೆಗೆ ಅನುಮತಿ ನೀಡುತ್ತಿರುವ ಬಗ್ಗೆ ಜನಾಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅನಗತ್ಯವಾಗಿ ಮರ ಕಡಿಯಲು ಅನುಮತಿ ನೀಡಬಾರದು ಎಂದು ಸೂಚನೆ ನೀಡಿದರು.

ಅರಣ್ಯ ಒತ್ತುವರಿ ಮಾಹಿತಿಗೆ ಸೂಚನೆ:

2015ರ ಪೂರ್ವದಲ್ಲಿ ಪಟ್ಟಾ ಜಮೀನು ಮತ್ತು ಒತ್ತುವರಿ ಸೇರಿ 3 ಎಕರೆಗಿಂತ ಕಡಿಮೆ ಇರುವ ಬಡ ಜನರಿಗೆ ಪುನರ್ವಸತಿ ಕಲ್ಪಿಸುವವರೆಗೆ ತೊಂದರೆ ನೀಡದೆ, ದೊಡ್ಡ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡಿಸಲು ನಿರ್ದೇಶನ ನೀಡಿದರು. ಅರಣ್ಯ ಭೂಮಿಯ ಇಂಡೀಕರಣಕ್ಕೆ ಪತ್ರ ಬರೆಯುವ ಬದಲು ಎ.ಸಿ. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವಂತೆ ಸೂಚಿಸಿದರು.

2015ರ ನಂತರದ ಒತ್ತುವರಿಯ ವಿಚಾರದಲ್ಲಿ ಶೂನ್ಯ ಸಹಿಷ್ಣತೆ ಇರಬೇಕು.  ಯಾರೇ 2015ರ ನಂತರ  ಅರಣ್ಯ ಒತ್ತುವರಿ ಮಾಡಿದ್ದರೆ, ಮುಲಾಜಿಲ್ಲದೆ ತೆರವು ಮಾಡಿ ಕ್ರಮ ಜರುಗಿಸಬೇಕು, ಕಳೆದ 2 ವರ್ಷದಲ್ಲಿ ಆಗಿರುವ ಒತ್ತುವರಿ, ಮಾಡಿರುವ ತೆರವು ಮತ್ತು ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ  ಸಚಿವ ಈಶ್ವರ್ ಖಂಡ್ರೆ ಸೂಚಿಸಿದರು.

ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ:

ಸಾರ್ವಜನಿಕರು ತಮ್ಮ ಸಮಸ್ಯೆ ಪರಿಹಾರಕ್ಕಾಗಿ ಕಚೇರಿಗೆ ಬಂದಾಗ ಅವರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚನೆ ನೀಡಿದರು.

ಇದೆ ಸಂದರ್ಭದಲ್ಲಿ ನಾಗರಹೊಳೆ ಎ ವೈಲ್ಡ್‌ ಪ್ಯಾರಡೈಸ್‌ ಮತ್ತು ಕಾಳಿ ಹುಲಿ ಸಂರಕ್ಷಣಾ ಪ್ರದೇಶ ಹೊರತಂದಿರುವ ವನ್ಯಜೀವಿ ವಿಧಿವಿಜ್ಞಾನ ಸಾಕ್ಷ್ಯ ಸಂಗ್ರಹಣಾ ಮಾರ್ಗದರ್ಶಿ ಎಂಬ ಎರಡು ಪುಸ್ತಕಗಳನ್ನು ಈಶ್ವರ ಖಂಡ್ರೆ ಬಿಡುಗಡೆ ಮಾಡಿದರು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು  ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಸುಭಾಷ್‌ ಮಾಲ್ಕಡೆ ಮತ್ತಿತರರು ಉಪಸ್ಥಿತರಿದ್ದರು. ರಾಜ್ಯದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳವರೆಗಿನ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Key words: Minister, Ishwar Khandre, instructs,  not, allow, unnecessary, cutting, trees

The post ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ: ಅನಗತ್ಯವಾಗಿ ಮರ ಕಡಿಯಲು ಅನುಮತಿಸದಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ശമ്പളം കുറവ്; മിടുക്കരായ അഭിഭാഷകര്‍ ജഡ്ജിയാവാന്‍ തയ്യാറാവുന്നില്ല: സുപ്രീം കോടതി ജഡ്ജി

ന്യൂദല്‍ഹി: ജഡ്ജിമാര്‍ക്കുള്ള പ്രതിമാസ ശമ്പളം വര്‍ധിപ്പിക്കണെമെന്ന് സുപ്രീം കോടതി ജഡ്ജി ദീപാങ്കര്‍...

Putin praises Iran: ఉద్రిక్తతల మధ్య పుతిన్ ఇరాన్‌కు సాలిడ్ సపోర్ట్.. రష్యా నమ్మకమైన స్నేహితుడు అంటూ సందేశం

రష్యన్ అధ్యక్షుడు వ్లాదిమిర్ పుతిన్, పర్షియన్ న్యూ ఇయర్ నౌరూజ్ సందర్భంగా...

പത്ത് വര്‍ഷമായി നരകത്തില്‍, ലീഗില്‍ അംഗത്വമെടുത്തപ്പോള്‍ സ്വര്‍ഗത്തിലേക്ക് അടുത്തു; തിരിച്ചുവരവില്‍ കാരാട്ട് റസാഖ്

കോഴിക്കോട്: ഇടതുപാളയം വിട്ട് വീണ്ട് മുസ്‌ലിം ലീഗിലേക്ക് ചേക്കേറിയതിന് പിന്നാലെ സി.പി.ഐ.എമ്മിനെതിരെ...