14
April, 2026

A News 365Times Venture

14
Tuesday
April, 2026

A News 365Times Venture

ಭಾರತದೊಳಗೆ ನುಸುಳಲು ಯತ್ನಿಸಿದ 7 ಉಗ್ರರನ್ನು ಹತ್ಯೆಗೈದ ‘ಬಿಎಸ್ ಎಫ್’

Date:

ನವದೆಹಲಿ,ಮೇ,9,2025 (www.justkannada.in):  ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಭೀತಿ ಉಂಟಾಗಿರುವ ನಡೆವೆಯೇ  ಜಮ್ಮು ಮತ್ತು ಕಾಶ್ಮೀರದ ಅಂತರರಾಷ್ಟ್ರೀಯ ಗಡಿ ಬಳಿ ಒಳನುಸುಳಲು ಯತ್ನಿಸಿದ್ದ ಏಳು ಉಗ್ರರನ್ನು ‘ಬಿಎಸ್ ಎಫ್’ ಹತ್ಯೆ ಮಾಡಿದೆ.

ಜಮ್ಮು ಕಾಶ್ಮೀರದ ಸಾಂಬಾದಲ್ಲಿ ಭಾರತದ ಗಡಿ ಪ್ರವೇಶಕ್ಕೆ ಯತ್ನಿಸಿದ. 7 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಗೈದಿದ್ದಾರೆ. ಇದೀಗ ಈ ಒಂದು ವಿಡಿಯೋ ಭಾರತೀಯ ಸೇನೆ ರಿಲೀಸ್ ಮಾಡಿದೆ.  ಗುರುವಾರ ತಡರಾತ್ರಿ ಸಾಂಬಾ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಉಗ್ರರ ಚಲನವಲನವನ್ನು ಗಮನಿಸಿ ಸೇನೆಯು ಕಾರ್ಯಾಚರಣೆ ಆರಂಭಿಸಿದೆ. ಈ ವೇಳೆ ಉಗ್ರರು ಹಾಗೂ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು ಎಂದು ಬಿಎಸ್‌ಎಫ್‌ ವಕ್ತಾರರು ಹೇಳಿದ್ದಾರೆ.

ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಭಾರತದ ಸಶಸ್ತ್ರ ಪಡೆಗಳು ‘ಆಪರೇಷನ್‌ ಸಿಂಧೂರ’ದ ಮೂಲಕ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಗಡಿಯಲ್ಲಿ ಎರಡೂ ದೇಶಗಳ ನಡುವೆ ಸಂಘರ್ಷ ತೀವ್ರಗೊಂಡಿದ್ದು ಭಾರತದ ದಾಳಿಗೆ ಪಾಕಿಸ್ತಾನ ಪತರುಗುಟ್ಟಿದೆ.

Key words: BSF, kills, 7 terrorists, trying , India

The post ಭಾರತದೊಳಗೆ ನುಸುಳಲು ಯತ್ನಿಸಿದ 7 ಉಗ್ರರನ್ನು ಹತ್ಯೆಗೈದ ‘ಬಿಎಸ್ ಎಫ್’ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നിങ്ങള്‍ മുസ്‌ലിങ്ങളെ കന്നുകാലികളെ പോലെയാണ് പരിഗണിക്കുന്നത്; മമതയ്‌ക്കെതിരെ ഒവൈസി

കൊല്‍ക്കത്ത: പശ്ചിമബംഗാള്‍ മുഖ്യമന്ത്രി മമതാ ബാനര്‍ജിക്കെതിരെ രൂക്ഷ വിമര്‍ശനവുമായി എ.ഐ.എം.ഐ.എം അധ്യക്ഷന്‍...

Vikram : విక్రమ్ – శంకర్ మళ్ళీ కలుస్తున్నారు ఈసారి అదిరిపోయే కమర్షియల్ ప్లాన్!

2016లో వచ్చిన ఇంకొక్కడుతో విక్రమ్ , ఆనంద్ శంకర్ కాంబినేషన్ సూపర్...

ಮೈಸೂರು: ಮೂವರು ಸರಗಳ್ಳರ ಬಂಧನ: 125 ಗ್ರಾಂ ಚಿನ್ನಾಭರಣ ವಶಕ್ಕೆ

ಮೈಸೂರು,ಏಪ್ರಿಲ್,14,2026 (www.justkannada.in): ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ...