15
April, 2026

A News 365Times Venture

15
Wednesday
April, 2026

A News 365Times Venture

ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟು ನಿಟ್ಟಿನ ಕ್ರಮ: ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ

Date:

ಬೆಂಗಳೂರು,ಮೇ,10,2025 (www.justkannada.in): ಭಾರತ- ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ  ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ವಿಧಾನಸೌಧ ಸಮಿತಿ ಕೊಠಡಿಯಲ್ಲಿ ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು, ಡಿಸಿ, ಎಸ್ಪಿ, ಆಯುಕ್ತರ ಜೊತೆ ಸಿಎಂ ಸಿದ್ಧರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಗತ್ಯ ವಸ್ತುಗಳ ದರ ಹೆಚ್ಚಳ ಆಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು. ಅಕ್ರಮ ದಾಸ್ತಾನು ಕಾಳಸಂತೆ  ಮೇಲೆ ನಿರಂತರವಾಗಿ ನಿಗಾ ಇಡಬೇಕು.  ಯುದ್ದದ ಪರಿಸ್ಥಿತಿ ತಿಳಿಯಾಗವವರೆಗೆ ಜನರಲ್ಲಿ ಜಾಗೃತಿ ಮೂಡಿಸಿ  ಯುದ್ದದ ಸಂದರ್ಭದಲ್ಲಿ ಜನ ಹೇಗೆ ರಕ್ಷಿಸಿಕೊಳ್ಳಬೇಕು ಎಂಬ ಬಗ್ಗೆ ಜಾಗೃತಿ ಮೂಡಿಸಿ ಎಂದು ಸೂಚಿಸಿದರು.

ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಯಾವುದೇ ಪರಿಸ್ಥಿತಿ ಎದುರಿಸಲು ನಾವು ಸರ್ವಸನ್ನದರಾಗಬೇಕು.  ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಹೆಚ್ಚು ಭದ್ರತೆ ಒದಗಿಸಬೇಕು. ಸುಳ್ಳು ಸುದ್ದಿ ಹರಡುವುದನ್ನ ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಸೂಚಿಸಿದ್ದಾರೆ.

Key words: maintain law and order, Increase, security, CM, Siddaramaiah, Meeting

The post ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟು ನಿಟ್ಟಿನ ಕ್ರಮ: ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തോല്‍ക്കുമെന്ന ഭയം വ്യക്തമാണ്, ഫെഡറല്‍ തത്വത്തെ തകര്‍ക്കാന്‍ അനുവദിക്കില്ല; മണ്ഡലപുനര്‍നിര്‍ണയത്തില്‍ പ്രകാശ് രാജ്

ന്യൂദല്‍ഹി: മണ്ഡലപുനര്‍നിര്‍ണയത്തില്‍ കേന്ദ്ര സര്‍ക്കാരിനെതിരെ വിമര്‍ശനവുമായി പ്രകാശ് രാജ്. തോല്‍ക്കുമെന്ന ഭയത്തിന്റെ...

'டார்கெட் 1 லட்சம் வாக்குகள்!' – பெரம்பூரில் வெல்வாரா விஜய்? |களநிலவரம் ஓர் அலசல்!

தவெக தலைவர் விஜய் பெரம்பூர், திருச்சி கிழக்கு என இரண்டு தொகுதிகளில்...

TCS Nashik Case: టీసీఎస్ నాసిక్ ‘‘కార్పొరేట్ జిహాద్’’ కేసులో సంచలన విషయాలు..!

TCS Nashik Case: ప్రముఖ టెక్ సంస్థ టీసీఎస్ నాసిక్ బీపీవో...

ಹಿರಿಯ ಶಾಸಕರ ಜೊತೆ ಐವರು ಹೊಸ ಶಾಸಕರಿಗೂ ಸಚಿವ ಸ್ಥಾನ ನೀಡಲಿ- ಕಾಂಗ್ರೆಸ್ ಶಾಸಕ ಆಗ್ರಹ

ದಾವಣಗೆರೆ,ಏಪ್ರಿಲ್,14,2026 (www.justkannada.in): ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ ಹಿರಿಯ ಶಾಸಕರು...