29
April, 2026

A News 365Times Venture

29
Wednesday
April, 2026

A News 365Times Venture

POK ವಾಪಸ್ ಪಡೆಯಲು ಒಳ್ಳೆಯ ಸಮಯವಿತ್ತು: ಆದ್ರೆ ಕದನ ವಿರಾಮ ಘೋಷಿಸಿದ್ದು ಯಾಕೆ? ವಿ.ಎಸ್ ಉಗ್ರಪ್ಪ

Date:

ಬಳ್ಳಾರಿ,ಮೇ,15,2025 (www.justkannada.in):  ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಿಒಕೆ ವಾಪಸ್ ಪಡೆಯಲು ಒಳ್ಳೆಯ ಸಮಯವಿತ್ತು. ಆದರೆ ಈ ವೇಳೆ ಕದನ ವಿರಾಮ ಘೋಷಿಸಿದ್ದು ಯಾಕೆ?  ಎಂದು ಕೇಂದ್ರ ಸರ್ಕಾರದ ವಿರುದ್ದ ಮಾಜಿ ಸಂಸದ ವಿಎಸ್ ಉಗ್ರಪ್ಪ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ವಿಎಸ್ ಉಗ್ರಪ್ಪ,  ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲಿನ ಉಗ್ರರ ದಾಳಿಯಲ್ಲಿ 28 ಜನರು ಸಾವನ್ನಪ್ಪಿದರು. ಈ ಹಿನ್ನೆಲೆಯಲ್ಲಿ ಉಗ್ರರ ಮೇಲೆ ಭಾರತೀಯ ಸೇನೆ ನಡೆಸಿದ್ದ ಅಪರೇಷನ್ ಸಿಂಧೂರ ದಾಳಿಯಿಂದ ಪಾಕ್ ಆಕ್ರಮಿತ ಪಿಓಕೆ ವಾಪಸ್ ಪಡೆಯಲು ಮತ್ತು ಉಗ್ರರ ನೆಲೆಗಳೊಂದಿಗೆ ಅವರ ಬಳಿಯಿರುವ ಶಸ್ತ್ರಾಸ್ತ್ರಗಳನ್ನು ನಾಶ ಪಡಿಸಲು ಒಳ್ಳೆಯ ಅವಕಾಶ ಇತ್ತು. ಆದರೆ, ಪ್ರಧಾನಿ ಮೋದಿಯವರು ಏಕೆ ಕದನ ವಿರಾಮ ಘೋಷಿಸಿದರೋ ಗೊತ್ತಿಲ್ಲ. ಕದನ ವಿರಾಮ ಘೋಷಣೆ ಮಾಡಿದ್ದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್. ಇದಕ್ಕೆ ಅಮೆರಿಕ ಮಧ್ಯಸ್ಥಿಕೆ ವಹಿಸಿದ್ದು ಯಾಕೆ..? ಎಂದು ಪ್ರಶ್ನಿಸಿದರು.

ಕದನ ವಿರಾಮ ಘೋಷಿಸಲು ಯಾರೊಂದಿಗೆ ಚರ್ಚಿಸಿದ್ದರು. ಸೇನಾ ಮುಖ್ಯಸ್ಥರೊಂದಿಗೆ ಚರ್ಚಿಸಿದ್ಧಾರಾ? ಸರ್ವಪಕ್ಷಗಳ ಸಭೆ ಕರೆದಾಗ ಪ್ರಧಾನಿ ನರೇಂದ್ರ ಮೋದಿಯವರೇ ಗೈರು ಹಾಜರಾಗುತ್ತಾರೆ. ಯಾರೊಂದಿಗೆ ಚರ್ಚಿಸಿ ನಿರ್ಣಯ ಕೈಗೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರೀಯ ನಾಯಕತ್ವವನ್ನು ಪ್ರದರ್ಶಿಸಬೇಕು ಎಂದು ವಿ.ಎಸ್ ಉಗ್ರಪ್ಪ ಕುಟುಕಿದರು.

Key words: POK,  declare, ceasefire,  VS Ugrappa

The post POK ವಾಪಸ್ ಪಡೆಯಲು ಒಳ್ಳೆಯ ಸಮಯವಿತ್ತು: ಆದ್ರೆ ಕದನ ವಿರಾಮ ಘೋಷಿಸಿದ್ದು ಯಾಕೆ? ವಿ.ಎಸ್ ಉಗ್ರಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഇങ്ങനെയാണ് അവര്‍ തെരഞ്ഞെടുപ്പ് ജയിക്കുന്നത്’; തൃണമൂല്‍ കോണ്‍ഗ്രസ് വോട്ടിങ് മെഷീനില്‍ കൃത്രിമം കാണിച്ചെന്ന് ബി.ജെ.പി

കൊല്‍ക്കത്ത: പശ്ചിമ ബംഗാള്‍ നിയമസഭാ തെരഞ്ഞെടുപ്പില്‍ തൃണമൂല്‍ കോണ്‍ഗ്രസ് വോട്ടിങ് മെഷീനില്‍...

UAE வெளியேறியது இருக்கட்டும்; OPEC என்றால் என்ன? அதன் பணி என்ன? – தெரிந்துகொள்வோம் வாங்க!

பெட்ரோலியம் ஏற்றுமதி செய்யும் நாடுகளின் அமைப்பில் (OPEC) இருந்து ஐக்கிய அரபு...

Supplementary exams: పది ఫెయిల్ అయిన విద్యార్థులకు అలర్ట్.. జూన్ 5 నుంచి పరీక్షలు..

పదో తరగతి ఫలితాల వెల్లడి తర్వాత, ఉత్తీర్ణత సాధించని విద్యార్థుల కోసం...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ...