21
April, 2026

A News 365Times Venture

21
Tuesday
April, 2026

A News 365Times Venture

ತಂತ್ರಜ್ಞಾನದ ಜತೆ ಇಂಗ್ಲಿಷ್ ಭಾಷೆ ಕೌಶಲ್ಯ ಇದ್ದರೆ ವಿಪುಲ ಉದ್ಯೋಗ ಅವಕಾಶ- ಗೋವಿಂದರಾಜು

Date:

ಮೈಸೂರು,ಮೇ,15,2025 (www.justkannada.in): ತಂತ್ರಜ್ಞಾನದ ಕುರಿತು ಅರಿವಿನ ಜತೆಗೆ ಇಂಗ್ಲಿಷ್ ಭಾಷೆ ಕೌಶಲ್ಯ ವೃದ್ಧಿಸಿಕೊಂಡರೆ ಹೇರಳ ಉದ್ಯೋಗ ಅವಕಾಶ ಸಿಗಲಿವೆ ಎಂದು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಇಂಗ್ಲಿಷ್ ಸಹ ಪ್ರಾಧ್ಯಪಕ ಗೋವಿಂದರಾಜು ಅಭಿಪ್ರಾಯ ವ್ಯಕ್ತಪಡಿಸಿದರು.

ಕೃಷ್ಣರಾಜ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಅಭಿವೃದ್ಧಿ ಕೋಶ ಮತ್ತು ಇಂಗ್ಲಿಷ್ ವಿಭಾಗದ ವತಿಯಿಂದ  ಏರ್ಪಡಿಸಿದ್ದ,” ಇಂದಿನ ದಿನಮಾನದಲ್ಲಿ ಇಂಗ್ಲಿಷ್ ಸಂವಹನ ಕೌಶಲ್ಯದ ಪಾತ್ರ”, ಎಂಬ ವಿಷಯದ ಕುರಿತು  ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಧುನಿಕ ದಿನದಲ್ಲಿ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಎದುರಿಸಬೇಕಾದ ಅನಿವಾರ್ಯ ಸೃಷ್ಟಿಯಾಗಿದೆ. ಹಾಗಾಗಿ, ಇಂಗ್ಲಿಷ್ ಭಾಷೆಯಲ್ಲಿ ಸಂವಹನ ಕೌಶಲ್ಯದ ಪರಿಣಿತಿ ಅಗತ್ಯವಾಗಿದೆ ಎಂದು ಹೇಳಿದರು.

ಹೊಸ ಯುಗದ ಆವಿಷ್ಕಾರವಾದ ಕೃತಕ ಬುದ್ಧಿಮತ್ತೆ ಆಧಾರಿತ ಚಾಟ್ ಜಿ.ಪಿ.ಟಿಯಂತಹ  ಮುಂದುವರಿದ ತಂತ್ರಜ್ಞಾನವು ಉದ್ಯೋಗ ಕ್ಷೇತ್ರದಲ್ಲಿ ಸವಾಲುಗಳನ್ನು ಒಡ್ದುತ್ತಿವೆ. ಹಾಗಾಗಿ, ಕಲೆ, ವಾಣಿಜ್ಯ ಮತ್ತು ವಿಜ್ಞಾನ ಅಥವಾ ಯಾವುದೇ ವಿಭಾಗದ ವಿದ್ಯಾರ್ಥಿಗಳು ತಂತ್ರಜ್ಞಾನದ ಜತೆಗೆ ಇಂಗ್ಲಿಷ್ ಭಾಷೆ ಸಂವಹನ ಕೌಶಲ್ಯವನ್ನು ಹೆಚ್ಚು ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ಕನ್ನಡ ಭಾಷೆ ಜತೆಗೆ ಇಂಗ್ಲಿಷ್ ಭಾಷೆ ಮತ್ತು ಅದರೊಂದಿಗೆ ತಂತ್ರಜ್ಞಾನ ಇದ್ದರೆ, ಉದ್ಯೋಗ ದೊರೆಯುವುದಲ್ಲದೆ, ಅಲ್ಲಿ ಗುರುತಿಸಿಕೊಳ್ಳಬಹುದು ಎಂದರು.

ಉದ್ಯೋಗ ಕ್ಷೇತ್ರದಲ್ಲಿ ಬಹು ಮುಖ್ಯ ಭಾಗವೇ ಇಂಗ್ಲಿಷ್ ಭಾಷೆ ಸಂವಹನ ಆಗಿರುವಾಗ, ಭಾಷೆ ಮಡಿವಂತಿಕೆ ಅಗತ್ಯ ಇಲ್ಲ ಎಂದ ಅವರು, ಉದ್ಯೋಗ ಪುರುಷ ಲಕ್ಷಣ ಅಲ್ಲ, ಮನುಷ್ಯ ಲಕ್ಷಣ ಎಂದು ಅಭಿಪ್ರಾಯಪಟ್ಟರು.

ಕಾಲೇಜಿನ ಪ್ರಭಾರ ಪ್ರಾಂಶುಪಾಲ ಪುಟ್ಟಸ್ವಾಮಿ, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ ದೀಪು ಕುಮಾರ್, ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಪ್ರಶಾಂತ್ ಪಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ, ಚಂದ್ರಶೇಖರ ಬಿ, ಸಹಾಯಕ ಪ್ರಾಧ್ಯಪಕ ಶಿವಾಜಿ, ಅಧ್ಯಪಕರು, ಅಧ್ಯಾಪಕೇತ ರರು, ವಿದ್ಯಾರ್ಥಿಗಳು ಇದ್ದರು.

Key words: job opportunities, English language, skills, technology

The post ತಂತ್ರಜ್ಞಾನದ ಜತೆ ಇಂಗ್ಲಿಷ್ ಭಾಷೆ ಕೌಶಲ್ಯ ಇದ್ದರೆ ವಿಪುಲ ಉದ್ಯೋಗ ಅವಕಾಶ- ಗೋವಿಂದರಾಜು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.എസ് താവളങ്ങള്‍ യു.എ.ഇയ്ക്ക് ബാധ്യത, എത്രയും പെട്ടെന്ന് അടച്ചുപൂട്ടണം: അബ്ദുള്‍ഖലീഖ് അബ്ദുള്ള

അബുദാബി: യു.എ.ഇയിലെ യു.എസ് സൈനിക താവളങ്ങള്‍ രാജ്യത്തിന് ഒരു തന്ത്രപരമായ ആസ്തി...

Digital Vastu Tips: ఈ మూడు మీ మొబైల్‌ ఫోన్‌ నుంచి తొలగించండి.. అదృష్టం మారిపోతుంది..!

Digital Vastu Tips: ఈ రోజుల్లో మొబైల్ ఫోన్‌, ల్యాప్‌టాప్‌లు మన...

ಬಿಟ್ ಕಾಯಿನ್ ಮೂಲಕ ವಿದೇಶದಲ್ಲಿ ಅಕ್ರಮ ಹೂಡಿಕೆ: ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತೆ-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು,ಏಪ್ರಿಲ್,20,2026 (www.justkannada.in):  ಬಿಟ್ ಕಾಯಿನ್ ಮೂಲಕ ಕಾಂಗ್ರೆಸ್ ನಾಯಕರು ವಿವಿಧ...