1
May, 2026

A News 365Times Venture

1
Friday
May, 2026

A News 365Times Venture

ಬೂಟಾಟಿಕೆಗೆ 4 ಫ್ಲೈಟ್ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ: ಅಪರೇಷನ್ ಸಿಂಧೂರ ಬಗ್ಗೆ ‘ಕೈ’ ಶಾಸಕ ಟೀಕೆ

Date:

ಕೋಲಾರ,ಮೇ,16,2025 (www.justkannada.in):  ಕೇಂದ್ರ ಸರ್ಕಾರ ಬೂಟಾಟಿಕೆಗೆ ನಾಲ್ಕು ಫ್ಲೈಟ್ ಮೇಲೆ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ. ನೂರು ಜನರನ್ನ ಹೊಡೆದಿದ್ದು ಕನ್ಫರ್ಮ್ ಆಗಿಲ್ಲ ಎಂದು ಹೇಳುವ ಮೂಲಕ ಅಪರೇಷನ್ ಸಿಂಧೂರ ಕಾರ್ಯಾಚರಣೆಯ ಬಗ್ಗೆ ಕಾಂಗ್ರೆಸ್‌ ಶಾಸಕ ಕೊತ್ತೂರು ಮಂಜುನಾಥ್‌ ಟೀಕಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಕೊತ್ತೂರು ಮಂಜುನಾಥ್,  26 ಜನ ಮಹಿಳೆಯರ ಅರಿಶಿನ ಕುಂಕುಮಕ್ಕೆ ಬೆಲೆ ಇಷ್ಟೆನಾ? ಆ ಹೆಣ್ಣು ಮಕ್ಕಳಿಗೆ ಸಿಕ್ಕ ಪರಿಹಾರ ಇದೇನಾ? ಅಂತ ಬೇಸರ ವ್ಯಕ್ತಪಡಿಸಿದರು.

ನಮ್ಮ ದೇಶಕ್ಕೆ ಬಂದು ನಮ್ಮನ್ನ ಹೊಡೆದು ತಪ್ಪಿಸಿಕೊಂಡು ಹೋಗ್ತಾರೆ ಅಂದ್ರೆ ನಮ್ಮ ಭದ್ರತಾ ವೈಪಲ್ಯ, ಗಡಿಯಲ್ಲಿ ಸೇನೆ ಏನ್ ಮಾಡುತ್ತಿತ್ತು? ನೂರು ಜನರನ್ನ ಹೊಡೆದಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಅದು ಕನ್ಫರ್ಮ್ ಆಗಿಲ್ಲ.  ಉಗ್ರರೇ ಬಂದ್ರಾ..? ಇವರೇ ಕರೆಸಿದ್ರಾ ಚರ್ಚೆಯಾಗಲಿ. ಡಿಬೇಟ್ ಗೆ ಬರಲಿ .  4  ಫ್ಲೈಟ್ ಮೇಲೆ ಕಳಿಸಿದ್ದು ಬಿಟ್ಟರೇ ಬೇರೇನು ಮಾಡಿಲ್ಲ. ಉಗ್ರರು ಗಡಿ ದಾಟಿ ಬಂದಾಗ ನಮ್ಮ ಸೈನಿಕರು ಎಲ್ಲಿದ್ರು..? ಎಂದು ಕೊತ್ತೂರು ಮಂಜುನಾಥ್ ಪ್ರಶ್ನಿಸಿದ್ದಾರೆ.

Key words: congress MLA, Kottur Manjunath, criticizes, Operation Sindhur

The post ಬೂಟಾಟಿಕೆಗೆ 4 ಫ್ಲೈಟ್ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ: ಅಪರೇಷನ್ ಸಿಂಧೂರ ಬಗ್ಗೆ ‘ಕೈ’ ಶಾಸಕ ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കേരളത്തില്‍ തൂക്കുസഭയ്ക്ക് സാധ്യത; യു.ഡി.എഫിന് നേരിയ മുന്‍തൂക്കം പ്രവചിച്ച് ടുഡേയ്‌സ് ചാണക്യ എക്‌സിറ്റ് പോള്‍

  തിരുവനന്തപുരം: കേരള നിയമസഭാ തെരഞ്ഞെടുപ്പില്‍ ആര്‍ക്കും വ്യക്തമായ ഭൂരിപക്ഷമില്ലാത്ത ഒരു...

Instagram Star Murder: భర్త చేతితో ఇన్‌స్టా స్టార్‌ దారుణ హత్య.. ట్విస్ట్‌ ఏంటంటే..?

Instagram Star Murder: ​భార్య ఎదుగుతుంటే చూసి మురిసిపోవాల్సిన భర్త.. ఆమె...

ಖರ್ಗೆ ಹೇಳಿದ ಮೇಲೆ ಸಿಎಂ ಬದಲಾವಣೆ ಅಧ್ಯಾಯ ಮುಗಿಯಿತು- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,1,2026 (www.justkannada.in):  ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ...