12
March, 2026

A News 365Times Venture

12
Thursday
March, 2026

A News 365Times Venture

ನಾವು ಬಡವರ ಪರ, ಬಿಜೆಪಿ ಶ್ರೀಮಂತರ ಪರ: ನಾವು ಕೊಟ್ಟ ಗ್ಯಾರಂಟಿ ಭರವಸೆ ಯಶಸ್ವಿಯಾಗಿ ಜಾರಿ-ರಾಹುಲ್ ಗಾಂಧಿ

Date:

ಹೊಸಪೇಟೆ,ಮೇ,20,2025 (www.justkannada.in):   ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 2 ವರ್ಷ ಪೂರೈಸಿದ್ದು, ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ ಗ್ಯಾರಂಟಿ ಯೋಜನೆಗೆ ಜಾರಿಗೊಳಿಸುವ ಆಶ್ವಾಸನೆಯನ್ನ ಈಡೇರಿಸಿದ್ದೇವೆ ಎಂದು  ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಂತಸ ವ್ಯಕ್ತಪಡಿಸಿದರು.

ಇಂದು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ನಡೆದ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ,  ಚುನಾವಣಾ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆ ಈಡೇರಿಸಿದ್ದೇವೆ. ಗ್ಯಾರಂಟಿ ತರಲು ಆಗಲ್ಲ ಎಂದು ಪ್ರಧಾನಿ ಟೀಕಿಸಿದ್ದರು. ಬಿಜೆಪಿ ಟೀಕಿಸಿತ್ತು. ಆದರೆ ಕೊಟ್ಟ ಎಲ್ಲಾ ಭರವಸೆಯನ್ನ ಈಡೇರಿಸಿದ್ದೇವೆ ಎಂದರು.

1 ಕೋಟಿಗೂ ಹೆಚ್ಚು ಮಹಿಳೆಯರಿಗೆ 2 ಸಾವಿರ ಕೊಡುತ್ತಿದ್ದೇವೆ.  ಎಲ್ಲಾ ಮನೆಗಳಿಗೂ ಉಚಿತ ವಿದ್ಯುತ್ ಕೊಡುತ್ತಿದ್ದೇವೆ. ಬಡ ಕುಟುಂಬಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗುತ್ತಿದೆ.  ಕರ್ನಾಟಕ ಮಹಿಳೆಯರು ಫ್ರಿಯಾಗಿ ಬಸ್ ನಲ್ಲಿ ಓಡಾಡುತ್ತಿದ್ದಾರೆ. ನಾವು ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನ ಯಶಸ್ವಿಯಾಗಿ ಜಾರಿಗಿಳಿಸಿದ್ದೇವೆ ಎಂದರು.

ಬಿಜೆಪಿಯವರು ಎರಡರಿಂದ ಮೂರು ಕೋಟಾದ್ಯಿಪತಿಗಳ ಪರ ನಿಂತಿದ್ದಾರೆ. ನಿಮ್ಮ ತೆರಿಗೆ ಹಣ ನಿಮ್ಮ ಸೌಕರ್ಯಕ್ಕೆ ಬಳಕೆಯಾಗಬೇಕು ಅನ್ನೋದು ನಮ್ಮ ಉದ್ದೇಶ . ಹಣ ಬಡವರ ಕಷ್ಟಗಳಿಗೆ ಅಗಬೇಕು ಅನ್ನದು ನಮ್ಮ ಉದ್ದೇಶ. ಆದರೆ  ಕೆಲ ಉದ್ಯಮಿಗಳಿಗೆ ಕೊಡುವುದು ಬಿಜೆಪಿಯವರ ಉದ್ದೇಶ. ಕೋಟ್ಯಾಧಿಪತಿಗಳು ಹೊರ ದೇಶಗಳಲ್ಲಿ ಆಸ್ತಿ ಖರೀದಿಸಿದ್ದಾರೆ. ಹೀಗಾಗಿ  ಕಾಂಗ್ರೆಸ್ ಬಡವರ ಪರ,  ಬಿಜೆಪಿ ಯಾವತ್ತೂ ಶ್ರೀಮಂತರ ಪರ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

Key words: congress, successfully, fulfilled ,guarantee, promise, Rahul Gandhi

The post ನಾವು ಬಡವರ ಪರ, ಬಿಜೆಪಿ ಶ್ರೀಮಂತರ ಪರ: ನಾವು ಕೊಟ್ಟ ಗ್ಯಾರಂಟಿ ಭರವಸೆ ಯಶಸ್ವಿಯಾಗಿ ಜಾರಿ-ರಾಹುಲ್ ಗಾಂಧಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Suryakumar Yadav: డ్రెస్సింగ్ రూమ్ సీక్రెట్స్ బయటపెట్టిన సూర్య.. గంభీర్ స్పీచ్‌తో ప్లేయర్లలో పూనకాలు!

Suryakumar Yadav: భారత్ ప్రపంచ క్రికెట్‌లో ఆధిపత్యం చెలాయిస్తోంది. మూడు సార్లు...

LPG ಸಿಲಿಂಡರ್ ಕೊರತೆ: ವಿಧಾನಸಭೆಯಲ್ಲಿ ಪ್ರತಿಧ್ವನಿ, ವಾಕ್ಸಮರ

ಬೆಂಗಳೂರು,ಮಾರ್ಚ್,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶದ...

പ്രധാനമന്ത്രിയെ വിമര്‍ശിക്കുന്ന സോഷ്യല്‍ മീഡിയ പോസ്റ്റുകള്‍ക്ക് പൂട്ട്; ഉത്തരവിട്ട് കേന്ദ്രം

ന്യൂദല്‍ഹി: പ്രധാനമന്ത്രി നരേന്ദ്രമോദിയെയോ സര്‍ക്കാരിനെയോ വിമര്‍ശിക്കുന്നതോ പരിഹസിക്കുന്നതോ ആയ സോഷ്യല്‍ മീഡിയ...