1
May, 2026

A News 365Times Venture

1
Friday
May, 2026

A News 365Times Venture

ಬೂಕರ್ ಪ್ರಶಸ್ತಿಗೆ ಲೇಖಕಿ ಭಾನು ಮುಷ್ಟಾಕ್ ಭಾಜನ: ಸಚಿವ ಶಿವರಾಜ ತಂಗಡಗಿ ಅಭಿನಂದನೆ

Date:

ಬೆಂಗಳೂರು,ಮೇ,21,2025 (www.justkannada.in): ಬೂಕರ್ ಪ್ರಶಸ್ತಿಗೆ ಭಾಜನರಾದ ಲೇಖಕಿ ಭಾನು ಮುಷ್ಟಾಕ್ ಅವರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅಭಿನಂದನೆ ಸಲ್ಲಿಸಿದ್ದಾರೆ.

ಕನ್ನಡ ಸಾಹಿತ್ಯದ ಸಂವೇದನಾಶೀಲ ಲೇಖಕಿ ಬಾನು  ಮುಷ್ತಾಕ್ ಅವರಿಗೆ ಅಂತರರಾಷ್ಟ್ರೀಯ ಪ್ರತಿಷ್ಠಿತ ಸಾಹಿತ್ಯ ಪ್ರಶಸ್ತಿ ಎಂದು ಪರಿಗಣಿಸಲ್ಪಟ್ಟಿರುವ ಬೂಕರ್ ಪ್ರಶಸ್ತಿ ದೊರೆತಿರುವುದು ಸಮಸ್ತ ಕನ್ನಡಿಗರಿಗೆ ಹೆಮ್ಮೆ ತಂದಿದೆ. ಸರ್ಕಾರದ ಪರವಾಗಿ ಹಾಗೂ ಇಡೀ ನಾಡಿನ ಜನರ ಪರವಾಗಿ  ಭಾನು ಮುಷ್ತಾಕ್ ಅವರಿಗೆ ಹಾರ್ದಿಕವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಅವರ ಎದೆಯ ಹಣತೆ ಎಂಬ ಕಥಾ ಸಂಕಲನ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾಗಿದೆ, ಕನ್ನಡದ ಈ ಕಥೆಯನ್ನು ಇಂಗ್ಲಿಷ್ ಭಾಷೆಗೆ ಅನುವಾದಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಕಾರಣರಾದ ಅನುವಾದಕಿ ದೀಪ ಬಸ್ತಿ ಅವರು ಸಹ ಅಭಿನಂದನೆಗೆ ಅರ್ಹರು. ಅವರಿಗೂ ಸಮಸ್ತ ಕನ್ನಡಿಗರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಚಿವ ಶಿವರಾಜ್ ತಂಗಡಗಿ ಅವರು ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಜನಾಂಗದ ಪ್ರತಿನಿಧಿಯಾಗಿ  ಮಹಿಳೆಯರ ಬವಣೆಗಳನ್ನು ತಮ್ಮ ಸಾಹಿತ್ಯದ ಮೂಲಕ ಜಗತ್ತಿನ ಮುಂದೆ ತೆರೆದಿಟ್ಟ ಬಾನು ಮುಷ್ತಾಕ್ ಅವರು ಈ ಪ್ರಶಸ್ತಿಗೆ ಭಾಜನರಾದ ಮೊಟ್ಟ ಮೊದಲ ಕನ್ನಡದ ಲೇಖಕಿಯಾಗಿದ್ದಾರೆ. ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಅಂತರರಾಷ್ಟ್ರೀಯ ಮನ್ನಣೆ ದೊರಕಿಸಿದ ಅವರ ಈ ಸಂಭ್ರಮದಲ್ಲಿ ನಾವೆಲ್ಲರೂ ಭಾಗಿ ಯಾಗೋಣ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಅಭಿನಂದನಾ ಸಂದೇಶದಲ್ಲಿ ತಿಳಿಸಿದ್ದಾರೆ.

Key words: Minister, Shivaraj Thangadgi, congratulates, Bhanu Mushtaq, Booker Award

The post ಬೂಕರ್ ಪ್ರಶಸ್ತಿಗೆ ಲೇಖಕಿ ಭಾನು ಮುಷ್ಟಾಕ್ ಭಾಜನ: ಸಚಿವ ಶಿವರಾಜ ತಂಗಡಗಿ ಅಭಿನಂದನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കേരളത്തില്‍ തൂക്കുസഭയ്ക്ക് സാധ്യത; യു.ഡി.എഫിന് നേരിയ മുന്‍തൂക്കം പ്രവചിച്ച് ടുഡേയ്‌സ് ചാണക്യ എക്‌സിറ്റ് പോള്‍

  തിരുവനന്തപുരം: കേരള നിയമസഭാ തെരഞ്ഞെടുപ്പില്‍ ആര്‍ക്കും വ്യക്തമായ ഭൂരിപക്ഷമില്ലാത്ത ഒരു...

Instagram Star Murder: భర్త చేతితో ఇన్‌స్టా స్టార్‌ దారుణ హత్య.. ట్విస్ట్‌ ఏంటంటే..?

Instagram Star Murder: ​భార్య ఎదుగుతుంటే చూసి మురిసిపోవాల్సిన భర్త.. ఆమె...

ಖರ್ಗೆ ಹೇಳಿದ ಮೇಲೆ ಸಿಎಂ ಬದಲಾವಣೆ ಅಧ್ಯಾಯ ಮುಗಿಯಿತು- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,1,2026 (www.justkannada.in):  ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ...