19
March, 2026

A News 365Times Venture

19
Thursday
March, 2026

A News 365Times Venture

ಬೆಂಗಳೂರು ಅರಮನೆ ಜಮೀನು ವಿವಾದ: ರಾಜಮನೆತನಕ್ಕೆ TDR ನೀಡಲು ಸರ್ಕಾರಕ್ಕೆ ಸುಪ್ರೀಂ ಆದೇಶ

Date:

ಬೆಂಗಳೂರು, ಮೇ, 22,2025 (www.justkannada.in): ಬೆಂಗಳೂರು ಅರಮನೆ ಮೈದಾನದ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಶಾಕ್ ನೀಡಿದ್ದು, ಬೆಂಗಳೂರು ಅರಮನೆಗೆ 3400 ಕೋಟಿ ಟಿಡಿಆರ್ ಅನ್ನು ರಾಜಮನೆತನಕ್ಕೆ ನೀಡಲು ಅದೇಶಿಸಿದೆ.

ಸುಪ್ರೀಂಕೋರ್ಟ್ ನ್ಯಾ. ಅರವಿಂದ್ ಕುಮಾರ್​ ನೇತೃತ್ವದ ದ್ವಿ ಸದಸ್ಯ ಪೀಠವು ಕೂಡಲೇ ರಾಜಮನೆತನಕ್ಕೆ ಟಿಡಿಆರ್ ನೀಡುವಂತೆ ಸರ್ಕಾರಕ್ಕೆ ಸೂಚಿಸಿ ಆದೇಶ ಹೊರಡಿಸಿದೆ.  ಒಂದು ವಾರದೊಳಗೆ ಟಿಡಿಆರ್ ಠೇವಣಿ ಇಡುವಂತೆ ರಾಜ್ಯ ಸರ್ಕಾರಕ್ಕೆ ಈ ಹಿಂದೆ ಸೂಚಿಸಲಾಗಿತ್ತು. ಅದರಂತೆ ಬರೋಬ್ಬರಿ 3400 ಕೋಟಿ ರೂ. ಮೊತ್ತದ ಟಿಡಿಆರ್​ ಅನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ ರಿಜಿಸ್ಟ್ರಾರ್​ನಲ್ಲಿ ಇಡಲಾಗಿತ್ತು. ಇದನ್ನು ರಾಜಮನೆತನದ ಪರ ವಕೀಲರು ವಿರೋಧಿಸಿದ್ದರು.ಈ ಟಿಡಿಆರ್​ಗಳನ್ನು ರಾಜಮನೆತನಕ್ಕೆ ನೀಡಬಾರದು ಎಂದು ರಾಜ್ಯ ಸರ್ಕಾರವು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿತ್ತು.

ಇದೀಗ ಅಂತಿಮವಾಗಿ ರಾಜಮನೆತನಕ್ಕೆ ಟಿಡಿಆರ್ ನೀಡುವಂತೆ ಸುಪ್ರೀಂಕೋರ್ಟ್​ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಬೆಂಗಳೂರು ಅರಮನೆ ಮೈದಾನದ ಬಳಿ ರಸ್ತೆ ಅಗಲೀಕರಣಕ್ಕಾಗಿ ಒಟ್ಟು 15.36 ಎಕರೆ ಜಮೀನು ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರ ಉದ್ದೇಶಿಸಿತ್ತು. ಎಕರೆಗೆ 200 ಕೋಟಿ ರೂಪಾಯಿಯಂತೆ  3400 ಕೋಟಿ ಟಿಡಿಆರ್ ಪರಿಹಾರ ನೀಡುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಆದರೆ ಟಿಡಿಆರ್ ನೀಡಲು ಒಪ್ಪದ ಸರ್ಕಾರ ಸುಗ್ರೀವಾಜ್ಞೆ ಅಸ್ತ್ರ ಹೂಡಿತ್ತು. ಹೀಗಾಗಿ ಸುಗ್ರೀವಾಜ್ಞೆ ಮತ್ತು ಪರಿಹಾರ ನೀಡದ್ದಕ್ಕೆ ರಾಜಮನೆತನ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.

Key words: Bangalore Palace, land dispute, Supreme Court, government, TDR

The post ಬೆಂಗಳೂರು ಅರಮನೆ ಜಮೀನು ವಿವಾದ: ರಾಜಮನೆತನಕ್ಕೆ TDR ನೀಡಲು ಸರ್ಕಾರಕ್ಕೆ ಸುಪ್ರೀಂ ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Stock Market: ఖతార్‌పై దాడి ఎఫెక్ట్.. భారీ నష్టాల్లో స్టాక్ మార్కెట్

దేశీయ స్టాక్ మార్కెట్ ఇప్పుడిప్పుడే కోలుకుంటోందని అనుకుంటున్న తరుణంలో ఇరాన్ చేసిన...

ನೀತಿ ಸಂಹಿತೆ: ಚು.ಆಯೋಗದ ಗಮನಕ್ಕೆ ತಂದು ಒಳಮೀಸಲಾತಿ ಜಾರಿ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ...

എല്‍.ഡി.എഫിനും യു.ഡി.എിനും ഭൂരിപക്ഷം ലഭിക്കില്ല; കേരളത്തിന്റെ ഭാവി ബി.ജെ.പി തീരുമാനിക്കും: കെ. സുരേന്ദ്രന്‍

കോഴിക്കോട്: ഇത്തവണത്തെ നിയമസഭാ തെരഞ്ഞെടുപ്പില്‍ ബി.ജെ.പി നിര്‍ണായക ശക്തിയാകുമെന്ന് മുന്‍ പാര്‍ട്ടി...