19
March, 2026

A News 365Times Venture

19
Thursday
March, 2026

A News 365Times Venture

ಪ್ರೀತಿಸಿ ಮನೆ ಬಿಟ್ಟು ಓಡಿ ಹೋದ ಮಗಳು: ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Date:

ಮೈಸೂರು, ಮೇ, 24,2025 (www.justkannada.in): ಹಿರಿಯ ಮಗಳು ಪ್ರೀತಿಸಿ ಪ್ರಿಯಕರನ ಜೊತೆ ಮನೆಬಿಟ್ಟು ಓಡಿ ಹೋದ ಹಿನ್ನೆಲೆಯಲ್ಲಿ ಮನನೊಂದು ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಹೆಚ್​.ಡಿ.ಕೋಟೆ ತಾಲೂಕಿನ ಬೂದನೂರು ಕೆರೆಗೆ ಹಾರಿ ಒಂದೇ ಕುಟಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹದೇವಸ್ವಾಮಿ, ಪತ್ನಿ ಮಂಜುಳಾ, ಪುತ್ರಿ ಹರ್ಷಿತಾ ಆತ್ಮಹತ್ಯೆಗೆ ಶರಣಾದವರು. ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತಾ ಯುವಕನೊಂದಿಗೆ  ಮನೆ ಬಿಟ್ಟು ಹೋಗಿದ್ದಳು. ಇದರಿಂದ ತಂದೆ ಮಹದೇವಸ್ವಾಮಿ, ತಾಯಿ ಮಂಜುಳಾ ಮತ್ತು ಸಹೋದರಿ ಹರ್ಷಿತಾ ಮನನೊಂದಿದ್ದರು.

ಈ ಮಧ್ಯೆ ಕೆರೆಗೆ ಹಗ್ಗ ಕಟ್ಟಿ ಕೆರೆಗೆ ಹಾರಿ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.  ಮೂವರ ಚಪ್ಪಲಿಗಳು ಮತ್ತು ಬೈಕ್​​ ಬೂದನೂರು ಕೆರೆ ಏರಿ ಮೇಲೆ ಪತ್ತೆಯಾಗಿದೆ. ಮೂವರೂ ಕೆರೆಗೆ ಹಾರಿ ಮೃತಪಟ್ಟಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಶೋಧಕಾರ್ಯ ನಡೆಸಿದಾಗ, ಮೂವರ ಶವ ಕೆರೆಯಲ್ಲಿ ಪತ್ತೆಯಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಶವಗಳನ್ನ ಹೊರ ತೆಗೆದಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಹೆಚ್​ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words:  daughter, love, same family, three, suicides

The post ಪ್ರೀತಿಸಿ ಮನೆ ಬಿಟ್ಟು ಓಡಿ ಹೋದ ಮಗಳು: ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಮಗೆ ಗೆಲುವೇ ಮಾನದಂಡ: ಸಿಎಂ,ಡಿಸಿಎಂ, ಹೈಕಮಾಂಡ್ ತೀರ್ಮಾನಕ್ಕೆ ಬದ್ದ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,18,2026 (www.justkannada.in):  ಬಾಗಲಕೋಟೆ,ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಗಳ...

സായുധ പ്രതിരോധം ഇസ്രഈലിനെതിരെ ഫലപ്രദമാണെന്ന് തെളിഞ്ഞു: ഹിസ്ബുല്ല

ബെയ്‌റൂട്ട്: ഇസ്രഈലിനെ പ്രതിരോധിക്കാന്‍ ആയുധമെടുക്കുന്നത് ഫലപ്രദമാണെന്ന് തെളിയിക്കപ്പെട്ടെന്ന് ഹിസ്ബുല്ല സെക്രട്ടറി ജനറല്‍...

Notary Portal: "தமிழ்நாடே இல்லையா?" – மத்திய அரசின் நோட்டரி இணையதளத்தில் நிலவும் பெரும் குளறுபடி

பொதுமக்களுக்குச் சட்டப்பூர்வமான ஆவணச் சான்றொப்பம் மற்றும் உறுதிமொழிப் பத்திரங்களை வழங்கும் நோட்டரி...

Andhra Pradesh: ఏపీ ప్రభుత్వం కీలక నిర్ణయం.. వారికి రూ.174 కోట్లు తిరిగి చెల్లింపు

Andhra Pradesh: ఏపీ ప్రభుత్వం తాజాగా టిడ్కో ఇళ్లకు సంబంధించిన కీలక...