18
March, 2026

A News 365Times Venture

18
Wednesday
March, 2026

A News 365Times Venture

ರೈತರೇ ಗಮನಿಸಿ: ವಿವಿಧ ಬೆಳೆಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಿ

Date:

ಬೆಂಗಳೂರು ಗ್ರಾಮಾಂತರ ಮೇ 26,2025 (www.justkannada.in):  2025-26 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್, ಸಮಗ್ರ ತೋಟಗಾರಿಕೆ ಅಧಿವೃದ್ದಿ ಮತ್ತು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ನೆಲಮಂಗಲ ತಾಲ್ಲೂಕಿನಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲು ತೋಟಗಾರಿಕಾ ಇಲಾಖೆ ವತಿಯಿಂದ ರೈತರಿಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM) ಹಾಗೂ ಸಮಗ್ರ ತೋಟಗಾರಿಕೆ ಅಧಿವೃದ್ದಿ ಯೋಜನೆಯಡಿ(CHD) ರೈತರು ಬಾಳೆ, ಮಾವು, ಪಪ್ಪಾಯ ಹೈಬ್ರಿಡ್ ತರಕಾರಿ ಮತ್ತು ಹೂವಿನ ಬೆಳೆ ಬೆಳೆಯಬಹುದು. ಹಾಗೇ ರೋಗ ಮತ್ತು ಕೀಟ ನಿಯಂತ್ರಣ, ಪ್ಲಾಸ್ಟಿಕ್ ಹೊದಿಕೆ, ಪ್ರಾಥಮಿಕ ಸಂಸ್ಕರಣ ಘಟಕಗಳು, ಸಂರಕ್ಷಿತ ಬೇಸಾಯ, ವೈಯಕ್ತಿಕ ಕೃಷಿಹೊಂಡ, ಫಾರಂ ಗೇಟ್ ಪ್ಯಾಕ್ ಹೌಸ್ ನಿರ್ಮಾಣ, ಜೇನುಸಾಕಾಣಿಕೆ, ಮೊಬೈಲ್ ವೆಂಡಿಂಗ್ ಕಾರ್ಟ್ ಹಾಗೂ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಹೊಸ ಪ್ರದೇಶ ಕಾರ್ಯಕ್ರಮದಡಿ ದಾಳಿಂಬೆ, ಡ್ರ್ಯಾಗನ್ ಪ್ರೂಟ್ ಗಳಿಗೆ ಫಲಾನುಭವಿಗಳು  ತೋಟಗಾರಿಕೆ ಇಲಾಖೆಯಿಂದ  ಸಹಾಯಧನವನ್ನು ಪಡೆಯಬಹುದಾಗಿದೆ.

ಅರ್ಜಿಯನ್ನು ಮೇ 31ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ಅಧಿಕಾರಿ, ಕಸಬಾ ಹೋಬಳಿ, ದೂರವಾಣಿ ಸಂಖ್ಯೆ: 7337866626. ಸಹಾಯಕ ತೋಟಗಾರಿಕೆ ಅಧಿಕಾರಿ, ಸೋಂಪುರ ಹೋಬಳಿ, ದೂರವಾಣಿ ಸಂಖ್ಯೆ: 8884829971. ಸಹಾಯಕ ತೋಟಗಾರಿಕೆ ಅಧಿಕಾರಿ, ತ್ಯಾಮಗೊಂಡ್ಲು ಹೋಬಳಿ, ದೂರವಾಣಿ ಸಂಖ್ಯೆ: 8197655732.  ಸಹಾಯಕ ತೋಟಗಾರಿಕೆ ನಿರ್ದೇಶಕರು ನೆಲಮಂಗಲ, ದೂರವಾಣಿ ಸಂಖ್ಯೆ: 9902581832. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ನೆಲಮಂಗಲ, ದೂರವಾಣಿ ಸಂಖ್ಯೆ: 9880461607 ಸಂಪರ್ಕಿಸುವುದು ಎಂದು ನೆಲಮಂಗಲ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Farmers, Apply, incentives, various, crops

The post ರೈತರೇ ಗಮನಿಸಿ: ವಿವಿಧ ಬೆಳೆಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೃತ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ ಗಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು,ಮಾರ್ಚ್,18,2026 (www.justkannada.in): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್...

ഭീരുത്വപരമായ വധം; ഇറാന്‍ ഇന്റലിജന്‍സ് മന്ത്രി കൊല്ലപ്പെട്ടെന്ന് സ്ഥിരീകരിച്ച് പെസസ്‌കിയാന്‍

ടെഹ്‌റാന്‍: ഇറാന്റെ ഇന്റലിജന്‍സ് മന്ത്രി എസ്മായില്‍ ഖത്തീബ് കൊല്ലപ്പെട്ടെന്ന് സ്ഥിരീകരിച്ച് ഇറാന്‍...

தவெக: "நான் முதல் மாநாட்டுல சொன்ன மாதிரிதான்" – கூட்டணி சர்ச்சைகளுக்கு விஜய்யின் விளக்கம் என்ன?

தமிழக வெற்றிக் கழகத்தின் இஃப்தார் நோன்பு திறக்கும் நிகழ்வு இன்று மகாபலிபுரத்திலுள்ள...

Story Board: డబ్బిస్తే.. ఏదైనా చేసుకోవచ్చా..? ఫామ్ హౌస్‌లో ఏం జరుగుతోంది..?

Story Board: హైదరాబాద్ చుట్టుపక్కల ఫామ్‌హౌస్‌ల్లో అసాంఘిక కార్యకలాపాలు పెరిగిపోతున్నాయి. అసలు...