27
August, 2026

A News 365Times Venture

27
Thursday
August, 2026

A News 365Times Venture

ವಿಮಾನ ಪತನ ದುರಂತ:  ಕೇಂದ್ರ ವಿಮಾನಯಾನ ಸಚಿವರ ರಾಜೀನಾಮೆಗೆ ಈಶ್ವರ್ ಖಂಡ್ರೆ ಆಗ್ರಹ

Date:

ಕಲಬುರುಗಿ,ಜೂನ್,13,2025 (www.justkannada.in):  ನಿನ್ನೆ ಅಹಮದಾಬಾದ್ ನ ಮೇಘಾನಿ ಪ್ರದೇಶದಲ್ಲಿ ವಿಮಾನ ಪತನವಾಗಿ 241 ಮಂದಿ ಸಾವನ್ನಪ್ಪಿದ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾನಯಾನ ಸಚಿವರು ರಾಜೀನಾಮೆ ನೀಡುವಂತೆ  ಅರಣ್ಯ ಸಚಿವ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಈಶ್ವರ್ ಖಂಡ್ರೆ,  ಕೇಂದ್ರ ಸರ್ಕಾರ ವಿಮಾನ ದುರಂತದ ಘಟನೆ ಹೊಣೆ ಹೊರಬೇಕು. ವಿಮಾನಯಾನ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಇಂತಹ ದುರಂತ ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ಆ ವರದಿ ಜನರ ಮುಂದೆ ಇಡಬೇಕು ಎಂದು ಒತ್ತಾಯಿಸಿದರು.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ  ಕಾಲ್ತುಳಿತ ಘಟನೆ ಆದಾಗ ಬಿಜೆಪಿಯವರು ಸಿಎಂ, ಡಿಸಿಎಂ ರಾಜೀನಾಮೆ ಕೇಳುತ್ತಿದ್ದರು. ಆದರೆ ಕುಂಭಮೇಳ , ಪಹಲ್ಗಾಮ್ ಘಟನೆಯಲ್ಲಿ ರಾಜೀನಾಮೆ ಕೊಟ್ಟರಾ? ಸಾವಿನಲ್ಲಿ ಯಾರೂ ರಾಜಕೀಯ ಮಾಡಬಾರದು. ಟಾಟಾ ಗ್ರೂಪ್ ಮೃತ ಕುಟುಂಬಸ್ಥರಿಗೆ ಒಂದು ಕೋಟಿ ಪರಿಹಾರ ನೀಡಿದೆ. ಆದರೆ ಈ ಪರಿವಾರದವರಿಗೆ ಎಷ್ಟು ಕೋಟಿ ಕೊಟ್ಟರು ಕಡಿಮೆಯೇ ನಿರ್ವಹಣೆ ಮಾಡುವ ಡಿಜಿಸಿಎ ವಿಮಾನಯಾನ ಮಂತ್ರಿ ಏನು ಮಾಡುತ್ತಿದ್ದರು ಘಟನೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. ನಿರ್ಲಕ್ಷ ವಹಿಸಿದ ಎಲ್ಲರ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.vtu

Key words: Plane crash, Ishwar Khandre, demands, resignation, Union Aviation Minister

The post ವಿಮಾನ ಪತನ ದುರಂತ:  ಕೇಂದ್ರ ವಿಮಾನಯಾನ ಸಚಿವರ ರಾಜೀನಾಮೆಗೆ ಈಶ್ವರ್ ಖಂಡ್ರೆ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നേപ്പാള്‍ പ്രളയം: കേരളത്തില്‍ നിന്നുള്ളവര്‍ക്കായി ഹെല്‍പ്‌ഡെസ്‌ക് തുടങ്ങി

തിരുവനന്തപുരം: നേപ്പാളിലുണ്ടായ മിന്നല്‍ പ്രളയവുമായി ബന്ധപ്പെട്ട് കേരളീയര്‍ക്ക് അടിയന്തിര സഹായവും സേവനങ്ങളും...

"சட்டமன்றத்தில் லாவணி கச்சேரி நடந்துக்கொண்டிருக்கிறது" – தவெக, திமுக-வை தாக்கும் பெ.சண்முகம்

மார்க்ஸிஸ்ட் கம்யூனிஸ்ட் மாநிலச் செயலாளர் பெ.சண்முகம் செய்தியாளர்களைச் சந்தித்து பேசியிருக்கிறார். அப்போது,...

Karnataka: ఆకస్మిక తనిఖీలో షాకింగ్ సీన్.. ఆస్పత్రి రూమ్‌లో ప్రియురాలితో అడ్డంగా బుక్కైన..!

కర్ణాటకలో ఓ న్యాయమూర్తికి షాకింగ్ ఘటన ఎదురైంది. ఆస్పత్రిలోని ఓ గదిలో...

ಮೈಸೂರು ದಸರಾ 2026: ಗಜಪಯಣಕ್ಕೆ ಅದ್ದೂರಿ ಚಾಲನೆ

ಮೈಸೂರು,ಆಗಸ್ಟ್, 26,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪೂರ್ವಭಾವಿ...