14
May, 2026

A News 365Times Venture

14
Thursday
May, 2026

A News 365Times Venture

ದಸರಾಗೆ 49.61ಕೋಟಿ ರೂಪಾಯಿ ಖರ್ಚು ಮಾಡುವ ಅವಶ್ಯಕತೆ ಇತ್ತಾ..? MLC ಹೆಚ್.ವಿಶ್ವನಾಥ್ ಕಿಡಿ

Date:

ಮೈಸೂರು,ಜೂನ್,14,2025 (www.justkannada.in):  ಮೈಸೂರು ದಸರಾ ಲೆಕ್ಕವನ್ನು 8 ತಿಂಗಳ ಬಳಿಕ ಕೊಟ್ಟಿದ್ದಾರೆ, 49.61ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ. ಸರ್ಕಾರದ ಹಣವನ್ನು ಇಷ್ಟೊಂದು ಖರ್ಚು ಮಾಡುವ ಅವಶ್ಯಕತೆ ಇತ್ತಾ? ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಕಿಡಿಕಾರಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಹೆಚ್.ವಿಶ್ವನಾಥ್,  40% ಹಣವನ್ನು ಬರೀ ಯುವ ದಸರಾ ಎಂದು ಖರ್ಚು ಮಾಡಿದ್ದಾರೆ. 2003ರಲ್ಲಿ ನಾವು ದಸರಾ ಮಾಡುವಾಗ ಸರ್ಕಾರದಿಂದ ಅನುದಾನ ಸಿಕ್ಕಿರಲಿಲ್ಲ. ಖಾಸಗಿ ಕಂಪನಿಗಳಿಂದ ಸ್ಪಾನ್ಸರ್ ಶಿಪ್ ಪಡೆದು ದಸರಾ ಮಾಡಿದ್ದೆವು. ಮಾವುತರನ್ನು ಸನ್ಮಾನಿಸಿ ಆನೆಗಳನ್ನು ಕ್ಯಾಂಪ್ ನಿಂದ ಕಾಲು ನಡಿಗೆಯಲ್ಲಿ ಮೈಸೂರಿಗೆ ಕರೆ ತರುತ್ತಿದ್ದೆವು. ಹೀಗೇ ಮುಂದುವರೆದರೆ ಮುಂದಿನ ದಿನಗಳಲ್ಲಿ 100 ಕೋಟಿ ರೂಪಾಯಿಯಲ್ಲಿ ದಸರಾ ಮಾಡುತಾರೆ.

ಇವೆಲ್ಲವನ್ನು ಬಿಟ್ಟು ಮೊದಲು ಅರಮನೆ ಲೂಟಿಯಾಗುವುದನ್ನು ತಡೆಯಿರಿ. ಸುಬ್ರಹ್ಮಣ್ಯ ಎಂಬ ಅಧಿಕಾರಿ ಅರಮನೆಯನ್ನು ಲೂಟಿ ಮಾಡುತ್ತಿದ್ದಾರೆ. ಮೈಸೂರು ಉಸ್ತುವಾರಿ ಸಚಿವ ಮಹದೇವಪ್ಪ, ಸುಬ್ರಹ್ಮಣ್ಯನನ್ನು ತೆಗೆಯಲು ಕಷ್ಟ ಎಂದು ಹೇಳುತ್ತಿದ್ದಾರೆ. ದುಡ್ಡು ಕೊಟ್ಟು ಎಲ್ಲರನ್ನೂ ಕೊಂಡುಕೊಂಡಿದ್ದಾರೆ ಎಂದು ಹೇಳುತ್ತಾರೆ. ಅರಮನೆಯಲ್ಲಿ ಆಗುತ್ತಿರುವ ಅಕ್ರಮವನ್ನು ಮೊದಲು ತಡೆಯಿರಿ ಎಂದು ಎಚ್ ವಿಶ್ವನಾಥ್ ಆಗ್ರಹಿಸಿದರು.vtu

Key words: Mysore Dasara, spent, Rs 49.61 crore,  MLC, H.Vishwanath

The post ದಸರಾಗೆ 49.61ಕೋಟಿ ರೂಪಾಯಿ ಖರ್ಚು ಮಾಡುವ ಅವಶ್ಯಕತೆ ಇತ್ತಾ..? MLC ಹೆಚ್.ವಿಶ್ವನಾಥ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കേരളം കാത്തിരുന്നത് പത്ത് ദിവസം; ഒടുവില്‍ മുഖ്യമന്ത്രിയെ ഇന്ന് പ്രഖ്യാപിക്കാനൊരുങ്ങി കോണ്‍ഗ്രസ്

തിരുവനന്തപുരം: ദിവസങ്ങള്‍ നീണ്ട അനിശ്ചിതത്വങ്ങള്‍ക്കൊടുവില്‍ കേരളത്തിന്റെ പുതിയ മുഖ്യമന്ത്രി ആരെന്ന് ഇന്ന്...

ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ರಕ್ಷಕರೇ ಭಕ್ಷಕರಾದರೇ ಸಿದ್ದರಾಮಯ್ಯನವರೇ? ಆರ್.ಅಶೋಕ್ ಕಿಡಿ

ಬೆಂಗಳೂರು,ಮೇ,13,2026 (www.justkannada.in): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕರ್ನಾಟಕದಲ್ಲಿ...