13
March, 2026

A News 365Times Venture

13
Friday
March, 2026

A News 365Times Venture

ಶ್ರೇಷ್ಠ ಭಾರತ ನಿರ್ಮಾಣಕ್ಕೆ ಕೈಜೋಡಿಸಿ- ವಿದ್ಯಾರ್ಥಿಗಳಿಗೆ ರಾಜ್ಯಪಾಲ ಗೆಹ್ಲೋಟ್ ಕರೆ

Date:

ಮಂಡ್ಯ,ಜೂನ್,14,2025 (www.justkannada.in): “ಒಂದೇ ಭಾರತ, ಶ್ರೇಷ್ಠ ಭಾರತ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ, ಮೇಡ್ ಇನ್ ಇಂಡಿಯಾ ಮತ್ತು ಮೇಕ್ ಇನ್ ಇಂಡಿಯಾ ಗುರಿಗಳನ್ನು ಸಾಧಿಸಲು ಕೊಡುಗೆ ನೀಡಿ ಮತ್ತು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಪ್ರಯತ್ನಿಸಿ” ಎಂದು ವಿದ್ಯಾರ್ಥಿಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು.

ಇಂದು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಮಂಡ್ಯ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿದರು. “ಈ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಮತ್ತು ಈ ವಿಶೇಷ ದಿನ, ಇದು ನಿಮ್ಮ ಜೀವನದ ಅತ್ಯಂತ ಅಮೂಲ್ಯ ಕ್ಷಣಗಳಲ್ಲಿ ಒಂದಾಗಿದೆ. ನಿಮ್ಮ ಜೀವನವನ್ನು ರೂಪಿಸುವಲ್ಲಿ ಗಣನೀಯ ಕೊಡುಗೆ ನೀಡಿದೆ. ಈ ವಿಶ್ವವಿದ್ಯಾಲಯದ ಎಲ್ಲಾ ಶಿಕ್ಷಕರು, ಆಡಳಿತ ಸಿಬ್ಬಂದಿ ಮತ್ತು ಪೋಷಕರನ್ನು ಗೌರವಿಸಿ ಎಂದರು.

“ಜೀವನದ ಯಶಸ್ಸಿನಲ್ಲಿ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತದೆ, ಶಿಕ್ಷಣವು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಉಪಯುಕ್ತವಾಗಿದೆ. ಶಿಕ್ಷಣವು ಕೌಶಲ್ಯಗಳನ್ನು ಹೆಚ್ಚಿಸುತ್ತದೆ ಮತ್ತು ನಾವು ಆಸಕ್ತಿ ಹೊಂದಿರುವ ಕ್ಷೇತ್ರದಲ್ಲಿ ಕೌಶಲ್ಯಪೂರ್ಣರಾಗುವ ಮೂಲಕ ನಾವು ಉತ್ತಮ ಯಶಸ್ಸನ್ನು ಸಾಧಿಸಬಹುದು. ನಿಮ್ಮ ಶಿಕ್ಷಣದ ಜ್ಞಾನವನ್ನು ಯಾರು ಕದಿಯಲು ಸಾಧ್ಯವಿಲ್ಲ. ಜೀವನ ಪೂರ್ತಿ ಕಲಿಕೆ ನಿರಂತರವಾಗಿರಲಿ. ಇದು ನಿಮ್ಮ ಯಶಸ್ಸಿಗೆ ಹಾದಿಯಾಗಲಿದೆ” ಎಂದು ಹೇಳಿದರು.

ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆ, ಪರಿಸರ ಮಾಲಿನ್ಯದಂತಹ ಜಾಗತಿಕ ಸವಾಲುಗಳ ಹೆಚ್ಚಾಗುತ್ತಿವೆ. ಈ ಜಾಗತಿಕ ಸವಾಲುಗಳ ಪರಿಹಾರಕ್ಕೆ ಕೊಡುಗೆ ನೀಡಬೇಕು. ಪರಿಸರ ಮಾಲಿನ್ಯ ತಡೆಗಟ್ಟುವಲ್ಲಿ ಮುಂದಾಗಬೇಕು ಹಾಗೂ ಸಮಾಜಕ್ಕಾಗಿ ನಿಸ್ವಾರ್ಥ ಸೇವೆ ಮಾಡಬೇಕು ಎಂದು ತಿಳಿಸಿದರು.

ಪ್ರಾಚೀನ ಕಾಲದಲ್ಲಿ, ನಮ್ಮ ಶಿಕ್ಷಣ ವ್ಯವಸ್ಥೆ, ನಮ್ಮ ಜ್ಞಾನ, ವಿಜ್ಞಾನ ಕೊಡುಗೆಯೊಂದಿಗೆ, ಭಾರತವು ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಕೇಂದ್ರವಾಗಿತ್ತು ಮತ್ತು ಬಲವಾದ ಆರ್ಥಿಕತೆಯಿಂದಾಗಿ ಆರ್ಥಿಕವಾಗಿ ಸಮೃದ್ಧವಾಗಿತ್ತು ಎಂಬ ಕಾರಣಕ್ಕಾಗಿ ನಮ್ಮ ಭಾರತವನ್ನು “ವಿಶ್ವ ಗುರು” ಮತ್ತು “ಸೋನೆ ಕಿ ಚಿಡಿಯಾ” ಎಂದು ಕರೆಯಲಾಗುತ್ತಿತ್ತು ಎಂದು ಎಲ್ಲರಿಗೂ ತಿಳಿದಿದೆ.  ಪ್ರಾಚೀನ ಭಾರತೀಯ ಖಗೋಳಶಾಸ್ತ್ರಜ್ಞರು ಬ್ರಹ್ಮಾಂಡದ ವೈಜ್ಞಾನಿಕ ತತ್ವಗಳನ್ನು ಅರ್ಥ ಮಾಡಿಕೊಂಡರು. ಭಾರತೀಯ ಖಗೋಳಶಾಸ್ತ್ರದ ಬೇರುಗಳು ವೇದಗಳಲ್ಲಿ ಕಂಡುಬರುತ್ತವೆ. ಋಗ್ವೇದ, ಯಜುರ್ವೇದ, ಅಥರ್ವವೇದ ಮತ್ತು ಸಾಮವೇದಗಳಲ್ಲಿ ಖಗೋಳ ಘಟನೆಗಳನ್ನು ಉಲ್ಲೇಖಿಸಲಾಗಿದೆ. ಖಗೋಳಶಾಸ್ತ್ರದಿಂದ ಭೂವಿಜ್ಞಾನ, ಗಣಿತ, ವೈದ್ಯಕೀಯ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಭಾರತೀಯರು ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಗಣಿತಶಾಸ್ತ್ರದಲ್ಲಿ, ಶೂನ್ಯ ಮತ್ತು ದಶಮಾಂಶ ಸಂಖ್ಯೆಗಳನ್ನು ಭಾರತೀಯ ಗಣಿತಜ್ಞರು ಮತ್ತು ಖಗೋಳಶಾಸ್ತ್ರಜ್ಞರು ಕಂಡುಹಿಡಿದಿದ್ದಾರೆ ಎಂದು ಹೇಳಿದರು.

“ಪ್ರಸ್ತುತ ಜಗತ್ತು ವೇಗವಾಗಿ ಬದಲಾಗುತ್ತಿದೆ. ಕೃತಕ ಬುದ್ಧಿಮತ್ತೆ, ಡೇಟಾ ವಿಜ್ಞಾನ, ಸುಸ್ಥಿರ ಅಭಿವೃದ್ಧಿ ಮತ್ತು ಉದ್ಯಮಶೀಲತೆಯಂತಹ ಕ್ಷೇತ್ರಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತಿವೆ. ನೀವು ಯಾವಾಗಲೂ ಇತ್ತೀಚಿನ ತಂತ್ರಜ್ಞಾನಗಳು ಮತ್ತು ಆಲೋಚನೆಗಳೊಂದಿಗೆ ನಿಮ್ಮನ್ನು ನವೀಕರಿಸಿಕೊಳ್ಳಬೇಕು” ಎಂದು ತಿಳಿಸಿದರು.

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಎನ್‌ಎಸ್‌ಎಚ್‌ಎಂ ಜ್ಞಾನ ಕ್ಯಾಂಪಸ್‌ ನ ನಿರ್ದೇಶಕ ಪ್ರೊ.ಸೌಮೇಂದ್ರನಾಥ್ ಬಂಡೋಪಾಧ್ಯಾಯ,  ಕುಲಪತಿ ಪ್ರೊ.ಕೆ.ಶಿವಚಿತಪ್ಪ, ಇತರ ಗಣ್ಯರು ಹಾಜರಿದ್ದರು.vtu

Key words: 3rd Convocation, Mandya University, Governor, Thawar Chand Gehlot

The post ಶ್ರೇಷ್ಠ ಭಾರತ ನಿರ್ಮಾಣಕ್ಕೆ ಕೈಜೋಡಿಸಿ- ವಿದ್ಯಾರ್ಥಿಗಳಿಗೆ ರಾಜ್ಯಪಾಲ ಗೆಹ್ಲೋಟ್ ಕರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನನ್ನನ್ನು ಬೆಳೆಸಿದಂತೆ ಯತೀಂದ್ರರನ್ನು ರಾಜಕೀಯವಾಗಿ ಬೆಳೆಸಿ-ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್13,2026 (www.justkannada.in):  ರಾಜಕೀಯವಾಗಿ ನನ್ನನ್ನು ಬೆಳೆಸಿದಂತೆ ಪುತ್ರ ಯತೀಂದ್ರರನ್ನು ಬೆಳೆಸುವಂತೆ...

കടന്നുവന്ന കനല്‍വഴികള്‍ മറ്റുള്ളവര്‍ മറന്നാലും ഞാന്‍ മറക്കില്ല; എന്റെ ചോരവീണ മണ്ണില്‍ തലയുയര്‍ത്തിത്തന്നെ നില്‍ക്കും: കെ. സുധാകരന്‍

കണ്ണൂര്‍: നിയമസഭാ സ്ഥാനാര്‍ത്ഥി നിര്‍ണയത്തിലെ അതൃപ്തി പരസ്യമാക്കി കോണ്‍ഗ്രസ് നേതാവ് കെ.സുധാകരന്‍....

பண்ணையாளர்கள் அறிமுகப்படுத்திய பரிசுகள்… வளைக்கப்பட்ட வாக்காளர்கள்! | நினைவுச் சுவடுகள் 09

பரிசுகளால் வளைக்கப்பட்ட வாக்காளர்கள்நினைவுச் சுவடுகள்தமிழ்நாட்டு அரசியலில் தேர்தல்கள் என்றால் பொதுக்கூட்டம், மாநாடு,...

Heroes Body Transformation: సినిమాల కోసం బాడీ ట్రాన్స్‌ఫర్మేషన్.. యంగ్ హీరోల సరికొత్త లుక్స్ వైరల్..!

Heroes Body Transformation: ప్రస్తుతం టాలీవుడ్‌లో మేకోవర్ సీజన్ నడుస్తోంది. కొత్త...