12
March, 2026

A News 365Times Venture

12
Thursday
March, 2026

A News 365Times Venture

ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಂದ ಬಾಲಕಿ ಅಪಹರಣ ಕೇಸ್: FIR ದಾಖಲು.

Date:

ಮಂಡ್ಯ,ಜೂನ್,21,2025 (www.justkannada.in): ಲೋನ್ ಕಟ್ಟುವುದು ತಡವಾಗಿದ್ದಕ್ಕೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ  ದಂಪತಿಯ ಮಗುವನ್ನ ಮೈಕ್ರೋ ಫೈನಾನ್ಸ್  ಸಿಬ್ಬಂದಿಗಳು ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದ ಬೆಳಕವಾಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಂದ ಬಾಲಕಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎನ್‌ಎಸ್ 2023, 137, 352 ರ ಅಡಿ ದೂರು ದಾಖಲಾಗಿದ್ದು  ಬಾಲಕಿ ತಂದೆ ನವೀನ್ ಕೊಟ್ಟ ದೂರಿನನ್ವಯ ಎಫ್ಐಆರ್ ದಾಖಲಾಗಿದೆ.  ಟಿ.ನರಸೀಪುರದ ಬಜಾಜ್ ಮೈಕ್ರೋ ಫೈನಾನ್ಸ್ ನ ಅಜಿತ್ ಹಾಗೂ ಮ್ಯಾನೇಜರ್ ವಿರುದ್ದ ನವೀನ್  ದೂರು ಕೊಟ್ಟಿದ್ದರು.

ನವೀನ್ ತಾಯಿ ಮಂಗಳಮ್ಮ ಬಜಾಜ್ ಮೈಕ್ರೋ ಫೈನಾನ್ಸ್ ನಿಂದ 40 ಸಾವಿರ ಸಾಲ ಪಡೆದಿದ್ದರು. 24 ಕಂತುಗಳ ಪೈಕಿ 12 ಕಂತು ಕಟ್ಟಿದ್ದರು. ಆದರೆ ಈ ತಿಂಗಳ ಕಂತು ಕಟ್ಟಿಲ್ಲ ಎಂದು ನವೀನ್ ಗೆ ಸಿಬ್ಬಂದಿಗಳು ಕರೆ ಮಾಡಿದ್ದರು

ಈ ಮಧ್ಯೆ ಜೂನ್ 16 ರಂದು ಪೂರಿಗಾಲಿಯ ಸಂಬಂಧಿಕರ ಮನೆಗೆ ನವೀನ್ ದಂಪತಿ & ಮಕ್ಕಳು ತೆರಳಿದ್ದರು.  ನವೀನ್ ಮೈಸೂರಿಗೆ, ಪತ್ನಿ ಫ್ಯಾಕ್ಟರಿಗೆ ತೆರಳಿದ್ದ ವೇಳೆ  ಮೈಕ್ರೋ ಫೈನಾನ್ಸ್ ಸಿಬ್ಬಂದಿ ಆಗಮಿಸಿದ್ದು, ಬಾಲಕಿ ಮುಂದೆಯೇ ಸಿಬ್ಬಂಧಿ ಅಜಿತ್ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾನೆ.  ಅಲ್ಲದೇ ಬಾಲಕಿಯನ್ನ ಫ್ಯಾಕ್ಟರಿ ಬಳಿ ಕರೆದೊಯ್ದಿದ್ದು ಅಲ್ಲಿಯೂ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬಾಲಕಿಯನ್ನು ವಾಪಸ್ಸು ಬಿಟ್ಟು ಹೋಗಿದ್ದಾರೆ.

ಈ ಹಿನ್ನೆಲೆಯಲ್ಲಿ ಕಿರುಕುಳ ನೀಡುತ್ತಿರುವ ಫೈನಾನ್ಸ್ ಸಿಬ್ಬಂದಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಕುಟುಂಬಕ್ಕೆ ರಕ್ಷಣೆ ನೀಡುವಂತೆ ನವೀನ್  ದೂರು ನೀಡಿದ್ದರು.vtu

Key words: FIR, girl, kidnapping case, microfinance staff

The post ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಂದ ಬಾಲಕಿ ಅಪಹರಣ ಕೇಸ್: FIR ದಾಖಲು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ-ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,12,2026 (www.justkannada.in):  ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರ,...

സര്‍ സി.പിയെ ചോദ്യം ചെയ്യാന്‍ മടിക്കാത്ത ആലപ്പുഴയിലെ തൊഴിലാളി വര്‍ഗം ജി. സുധാകരനെയും ചോദ്യം ചെയ്യും: എം. ശിവപ്രസാദ്

തിരുവനന്തപുരം: മുന്‍ മന്ത്രിയും സി.പി.ഐ.എം മുതിര്‍ന്ന നേതാവുമായ ജി. സുധാകരനെതിരെ രൂക്ഷവിമര്‍ശനവുമായി...

Ring Roads In Telangana: తెలంగాణ జిల్లాలకు మహర్దశ.. ప్రతీ జిల్లాకో రింగు రోడ్డు..

తెలంగాణ రాష్ట్రవ్యాప్తంగా రవాణా వ్యవస్థను సమూలంగా ప్రక్షాళన చేస్తూ.. ప్రతి జిల్లా...