9
May, 2026

A News 365Times Venture

9
Saturday
May, 2026

A News 365Times Venture

ರಾಜ್ಯ  ಪಡಿತರ ಚೀಟಿದಾರರಿಗೆ ‘ಆಹಾರದ ಕಿಟ್’ ನೀಡಲು ಸರ್ಕಾರ ಚಿಂತನೆ

Date:

ಬೆಂಗಳೂರು,ಜೂನ್,24,2025 (www.justkannada.in):  ರಾಜ್ಯದ ಪಡಿತರ ಚೀಟಿದಾರರಿಗೆ ನೀಡಲಾಗುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಹೌದು. ಕಾಂಗ್ರೆಸ್ ಚುನಾವಣೆಗೂ ಮುನ್ನ 10 ಕೆಜಿ ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿತ್ತು. ಅಧಿಕಾರಕ್ಕೆ ಬಂದ ನಂತರ  ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಉಳಿದ 5 ಕೆಜಿ ಅಕ್ಕಿಗೆ ಹಣವನ್ನ ಪಡಿತರ ಚೀಟಿದಾರರ ಖಾತೆಗೆ ವರ್ಗಾವಣೆ ಮಾಡುತ್ತಿತ್ತು. ನಂತರ ಹಣದ ಬದಲಾಗಿ 5 ಕೆಜಿ ಹೆಚ್ಚುವರಿ ಅಕ್ಕಿಯನ್ನೇ ನೀಡುತ್ತಿದೆ. ಇದೀಗ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಆಹಾರ ಇಲಾಖೆಯಿಂದ ಪ್ರಸ್ತಾವನೆ ಬಂದಿದೆ ಎನ್ನಲಾಗಿದೆ. ಆಹಾರದ ಕಿಟ್ ನಲ್ಲಿ ಸಕ್ಕರೆ, ಉಪ್ಪು, ತೊಗರಿಬೇಳೆ, ಕಾಫಿಪುಡಿ, ಟೀ ಪುಡಿ, ಅಡುಗೆ ಎಣ್ಣೆ, ಗೋಧಿ ಇರಲಿದೆ . ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದರೆ ಮಾತ್ರ ವಿತರಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಸಚಿವ ಸಂಪುಟದಲ್ಲಿ ಇದಕ್ಕೆ ಸಮ್ಮತಿ ಸಿಕ್ಕಿದರೆ ಸದ್ಯದಲ್ಲೇ ಆಹಾರ ಕಿಟ್ ನೀಡುವ ಯೋಜನೆ ಜಾರಿಗೆ  ಬರುವ ಸಾಧ್ಯತೆಯಿದೆ. ಜುಲೈ 2 ರಂದು ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಬಗ್ಗೆ ಇಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.vtu

Key words: government, food kits, ration card,  holders

The post ರಾಜ್ಯ  ಪಡಿತರ ಚೀಟಿದಾರರಿಗೆ ‘ಆಹಾರದ ಕಿಟ್’ ನೀಡಲು ಸರ್ಕಾರ ಚಿಂತನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പത്ത് വര്‍ഷത്തില്‍ അടച്ചുപൂട്ടിയത് ഒരു ലക്ഷം സ്‌കൂള്‍, ഒറ്റ വിദ്യാര്‍ത്ഥി പോലുമില്ലാതെ 8,000 സ്‌കൂള്‍; കുത്തഴിഞ്ഞ് രാജ്യത്തെ വിദ്യാഭ്യാസ മേഖല

ന്യൂദല്‍ഹി: രാജ്യത്തെ സ്‌കൂള്‍ വിദ്യാഭ്യാസ രംഗത്തെ അടിസ്ഥാന സൗകര്യങ്ങളുടെയും പഠനനിലവാരത്തിന്റെയും ദയനീയാവസ്ഥ...

'அதிமுகவை ஆட்சியில் அமர்த்த திமுக ஆதரவு கேட்டது!' – உண்மையை போட்டுடைத்த பேபி!

அதிமுகவை வெளியில் இருந்து ஆதரித்து எடப்பாடி பழனிசாமியை முதல்வராக்கும் திட்டத்துக்கு தங்களையும்...

What’s Today: ఈ రోజు ఏమున్నాయంటే..?

* IPL 2026: నేడు రాజస్థాన్‌ రాయల్స్‌ వర్సెస్‌ గుజరాత్‌ టైటాన్స్‌.....

BSY ಅಭಿಮಾನೋತ್ಸವ: 10 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ- ಗೋವಿಂದ ಕಾರಜೋಳ

ಚಿತ್ರದುರ್ಗ,ಮೇ,8,2026 (www.justkannada.in): ಬಿಎಸ್ ಯಡಿಯೂರಪ್ಪ ರಾಜಕೀಯಕ್ಕೆ ಬಂದು 50 ವರ್ಷ...