2
May, 2026

A News 365Times Venture

2
Saturday
May, 2026

A News 365Times Venture

ಚಿಲುಮೆ ಪ್ರತಿಷ್ಠಾನದಿಂದ ನಾಡಪ್ರಭು ಜಯಂತ್ಯುತ್ಸವ: ಅದ್ದೂರಿ ಸ್ಮರಣೆ ಸಂಪನ್ನ

Date:

ಬೆಂಗಳೂರು,ಜೂನ್,27,2025 (www.justkannada.in): ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವದ ಅಂಗವಾಗಿ ಚಿಲುಮೆ ರವಿಕುಮಾರ್ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ಮೂರು ದಿನಗಳ ಕಾರ್ಯಕ್ರಮ  ಸಂಪನ್ನಗೊಂಡಿತು.

ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರು ಬುನಾದಿ ಹಾಕಿದ ಸ್ಥಳವಾದ ಅವಿನ್ಯೂ ರಸ್ತೆಯ ದೊಡ್ಡಪೇಟೆ ವೃತ್ತದಲ್ಲಿ ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ, ಕೆಂಪೇಗೌಡರ ವೇಷಭೂಷಣ ಧರಿಸಿ ಕುದುರೆ ಏರಿ ಸೇನೆಯೊಂದಿಗೆ ಆಗಮಿಸುವ ದೃಶ್ಯವನ್ನು ಮರುಸೃಷ್ಟಿಸಲಾಗಿತ್ತು. ಬೆಂಗಳೂರು ನಗರದ ನಿರ್ಮಾಣದ ಬಗ್ಗೆ ಕೆಂಪೇಗೌಡರು ಹೊಂದಿದ್ದ ಪರಿಕಲ್ಪನೆ ಆಧರಿಸಿ ಅಭಿನಯ ಪ್ರಸ್ತುತ ಪಡಿಸಲಾಯಿತು..

ಡೊಳ್ಳು ಕುಣಿತ, ನಗಾರಿ ವಿದ್ಯಾ, ತಾಳ ಅರೇವಾದ್ಯ, ಪೂಜಾ ಕುಣಿತ, ಕಹಳೆ ವಾದ್ಯಗಳು ಆಕರ್ಷಿಸಿದವು.  ರಾಜಾಜಿನಗರದ ಇಎಸ್ ಐ ಆಸ್ಪತ್ರೆಯಲ್ಲಿ ಹೊರರೋಗಿಗಳಿಗೆ ಹಣ್ಣುಹಂಪಲು, ಬ್ರೆಡ್, ಬಿಸ್ಕೆಟ್ ವಿತರಿಸಲಾಯಿತು.

ಮಾಗಡಿ ಕೆಂಪಾಪುರದಲ್ಲಿಅಲಂಕೃತ ನಾಡಪ್ರಭು ಸಮಾಧಿ ಬಳಿ ಸಂಜೆ 165 ದೀಪಗಳನ್ನು ಬೆಳಗಿಸಲಾಯಿತು.  ಇದೇ ವೇಳೆ ನೆರೆದವರು ಕೆಂಪೇಗೌಡರ ಮೌಲ್ಯಗಳನ್ನು ಎತ್ತಿಹಿಡಿಯುವ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಜಯಂತೋತ್ಸವ ಪ್ರಯುಕ್ತ ಮಂಗಳವಾರ ಮಾಗಡಿ ಕೆಂಪಾಪುರದಲ್ಲಿ ‘ನಾಡಪ್ರಭು ಕೆಂಪೇಗೌಡ ಸಮಾಧಿ ಪರಿಸರ ಶುದ್ಧಿ ಅಭಿಯಾನ’ ಹಮ್ಮಿಕೊಳ್ಳಲಾಗಿತ್ತು. ಬುಧವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಗವಿ ಗಂಗಾಧರೇಶ್ವರ ಗುಡಿ ಸೇರಿ ಆರು ಸ್ಥಳಗಳಲ್ಲಿ ಪುಷ್ಟಾರ್ಚನೆ ಸಲ್ಲಿಸಲಾಗಿತ್ತು.

ಕೊಡಗು ಜಿಲ್ಲಾ ಒಕ್ಕಲಿಗ ಯುವಘಟಕದ ಅಧ್ಯಕ್ಷ ಗಿರೀಶ್ ಮಲ್ಲಪ್ಪ, ಬಿಐಟಿ ಎಂಜಿನಿಯರಿಂಗ್ ಕಾಲೇಜು ಪ್ರಾಧ್ಯಾಪಕ ಡಾ.ಮಧುಸೂದನ್ ಎಂ., ಚಿಲುಮೆ ಟ್ರಸ್ಟ್ ಅಧ್ಯಕ್ಷ ಕೊಟ್ರೇಶ್, ವಿಜಯ್ ಹೊಸಪಾಳ್ಯ, ಕೆಂಪಾಪುರ ಗ್ರಾಪಂ ಮಾಜಿ ಅಧ್ಯಕ್ಷ ಹನುಮಂತಯ್ಯ, ಗ್ರಾಮಸ್ಥರು, ಸ್ವಯಂಸೇವಕರು ಹಾಗೂ ಪ್ರತಿಷ್ಠಾನದ ಸದಸ್ಯರು ಭಾಗಿಯಾಗಿದ್ದರು.

Key words: Nadaprabhu Jayanthiyastava, chilume Foundation

The post ಚಿಲುಮೆ ಪ್ರತಿಷ್ಠಾನದಿಂದ ನಾಡಪ್ರಭು ಜಯಂತ್ಯುತ್ಸವ: ಅದ್ದೂರಿ ಸ್ಮರಣೆ ಸಂಪನ್ನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അവര്‍ക്ക് ഹൃദയാഘാതം ഉണ്ടാകാതിരിക്കട്ടെ; ശത്രുക്കള്‍ ഭയക്കുന്ന ഒരായുധം, അത് അവരുടെ തൊട്ടടുത്തുണ്ട്; മുന്നറിയിപ്പുമായി ഇറാന്‍

ടെഹ്‌റാന്‍: അമേരിക്കയും ഇറാനും തമ്മിലുള്ള നയതന്ത്ര ചര്‍ച്ചകള്‍ പൂര്‍ണമായും വഴിമുട്ടിയതോടെ, പുതിയ...

தேர்தல் பரபரப்பு: `அரசியல் ஆதாயம்; பெற்றோர்களே உஷார்' – எச்சரிக்கும் குழந்தைகள் பாதுகாப்பு ஆணையம்!

தேர்தல் பிரசாரத்திற்காகக் குழந்தைகளை உணர்வு ரீதியாகப் பயன்படுத்தியதாகக் கூறி, தமிழக வெற்றிக்...

Story Board : ఒంటరి పోరాటమా.. అంతర్గత వైఫల్యమా? విపక్షాల బలహీనతకు అసలు కారణం రాహులేనా?

రాహుల్ గాంధీ కాంగ్రెస్ ను మాత్రమే కాకుండా.. మొత్తంగా ప్రతిపక్షాన్నే బలహీనపరుస్తున్నారు....

ಕಾರ್ಮಿಕರು ದೇಶದ ಆರ್ಥಿಕ  ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ,1,2026 (www.justkannada.in): ಕಾರ್ಮಿಕರು ದೇಶದ ಆರ್ಥಿಕ  ಸಾಮಾಜಿಕ, ಅಭಿವೃದ್ಧಿಯ...