8
December, 2025

A News 365Times Venture

8
Monday
December, 2025

A News 365Times Venture

ಚಿತ್ರ ಕಲಾವಿದೆ ಮಾಧವಿ ಪಾರೇಖ್ ಗೆ ‘ನಂಜುಂಡರಾವ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Date:

ಬೆಂಗಳೂರು,ಜುಲೈ,5,2025 (www.justkannada.in):  ಗುಜರಾತಿನ ಹೆಸರಾಂತ ಚಿತ್ರ ಕಲಾವಿದೆ ಅವರಿಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಸಂಸ್ಥಾಪಕ ಡಾ.ಎಂ ಎಸ್ ನಂಜುಂಡರಾವ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಶನಿವಾರ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಮಾಧವಿ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ‌ ಕಲೆಯ ಛಾಪು ಮೂಡಿಸಿದ್ದಾರೆ. ಅವರಿಗೆ ಈ ಪ್ರಶಸ್ತಿಯನ್ನು ಕೊಟ್ಟಿರುವುದರಿಂದ ಪುರಸ್ಕಾರದ ಮೌಲ್ಯವೇ ಹೆಚ್ಚಾಗಿದೆ. ಇದು ಅವರ ಕಲಾಪ್ರತಿಭೆಗೆ ಸಂದ ಗೌರವವಾಗಿದೆ’ ಎಂದಿದ್ದಾರೆ.

ಅರವತ್ತು ವರ್ಷಗಳ ಹಿಂದೆ ಮುಖ್ಯಮಂತ್ರಿಗಳಾಗಿದ್ದ ದೇವರಾಜ ಅರಸು ಅವರು ಚಿತ್ರಕಲಾ ಪರಿಷತ್ತಿಗೆ ನಗರದ ಹೃದಯ ಭಾಗದಲ್ಲಿ ಈ ಭೂಮಿಯನ್ನು ಉಚಿತವಾಗಿ ಕೊಟ್ಟರು. ನಂತರ ನಂಜುಂಡರಾವ್ ಅವರು ತಮ್ಮ ಗುರುಗಳಾದ ವೀರಪ್ಪ ಅವರ ಮಾರ್ಗದರ್ಶನ ಮತ್ತು ಪ್ರೋತ್ಸಾಹದಿಂದ ಈ ಮಟ್ಟಕ್ಕೆ ಬೆಳೆಸಿದರು. ಅವರಿಂದಾಗಿ ಮೈಸೂರು ಸಂಪ್ರದಾಯದ ಚಿತ್ರಕಲೆ ಪುನರುಜ್ಜೀವನ ಕಂಡಿತು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಕಲೆಯ ಸಾಧನೆಗೆ ತಾಳ್ಮೆ, ಪ್ರತಿಭೆ ಮತ್ತು ಪರಿಶ್ರಮ ಇರಬೇಕು. ಮಾಧವಿ ಪಾರೇಖ್ ಅವರು ಸದ್ದುಗದ್ದಲವಿಲ್ಲದೆ ಈ ಸಾಧನೆ ಮಾಡಿದ್ದಾರೆ. ನಂಜುಂಡರಾವ್ ಕೂಡ ಪರಿಷತ್ತಿನ ಆವರಣದಲ್ಲಿ ಅನಾಮಿಕರಂತೆ ಓಡಾಡುತ್ತಿದ್ದರು. ಆದರೆ ಅವರ ತಪಸ್ಸಿನಿಂದಾಗಿ ಚಿತ್ರಕಲಾ ಪರಿಷತ್ತು ದೇಶದ ಮಟ್ಟದಲ್ಲಿ ಗಮನ ಸೆಳೆಯುವಂತೆ ಬೆಳೆಯಿತು. ಈಗ ಪರಿಷತ್ತು ಉತ್ತರಹಳ್ಳಿಯಲ್ಲಿ ವಿಶಾಲ ಕ್ಯಾಂಪಸ್ ಹೊಂದಿದೆ. ಇದರ ಹಿಂದೆ ದಿವಂಗತ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಕಲಾಪ್ರೇಮವೂ ಇದೆ ಎಂದು ಅವರು ನೆನಪಿಸಿಕೊಂಡಿದ್ದಾರೆ.

ಆಧುನಿಕ ಜಗತ್ತಿನಲ್ಲಿ ಕಲೆಗೆ ತುಂಬಾ ಬೇಡಿಕೆ ಇದೆ. ಕಾರ್ಪೊರೇಟ್ ವಲಯದಲ್ಲಿ ಕಲೆಯ ಪೋಷಣೆ ನಡೆಯುತ್ತಿದೆ. ಕಲೆಯು ಸಂಪ್ರದಾಯ ಮತ್ತು ಆಧುನಿಕ ಧಾರೆ ಎರಡನ್ನೂ ಸಮನ್ವಯಗೊಳಿಸಿಕೊಂಡು ಹೋಗುತ್ತಿರುವುದು ಗಮನಾರ್ಹವಾಗಿದೆ ಎಂದು ಪಾಟೀಲ ನುಡಿದಿದ್ದಾರೆ.

ಕಾರ್ಯಕ್ರಮದಲ್ಲಿ ಪರಿಷತ್ ಅಧ್ಯಕ್ಷ ಬಿ ಎಲ್ ಶಂಕರ್, ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪ ಸ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.vtu

Key words: Nanjundarao National Award, presented ,Madhavi Parekh

The post ಚಿತ್ರ ಕಲಾವಿದೆ ಮಾಧವಿ ಪಾರೇಖ್ ಗೆ ‘ನಂಜುಂಡರಾವ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....