13
March, 2026

A News 365Times Venture

13
Friday
March, 2026

A News 365Times Venture

ಸ್ನೇಹಿತರಿಂದಲೇ ಚಾಕು ಇರಿತ: ಯುವಕ ಸಾವು

Date:

ಮೈಸೂರು,ಜುಲೈ,18,2025 (www.justkannada.in): ಬರ್ತ್ ಡೇ ಸೆಲೆಬ್ರೇಷನ್ ಗೆ ಕರೆಸಿಕೊಂಡು  ಸ್ನೇಹಿತರೇ  ಚಾಕು ಇರಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಯುವಕ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ಕೆಂಪಿಸಿದ್ದನಹುಂಡಿ‌ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಿರಣ್  ಎಂಬ ಯುವಕನೇ ಸ್ನೇಹಿತರಿಂದ ಚಾಕು ಇರಿತಕ್ಕೊಳಗಾಗಿ ಮೃತಪಟ್ಟಿರುವುದು.

ಸ್ನೇಹಿತ ರವಿಚಂದ್ರ ಎಂಬವನ ಬರ್ತ್ ಡೇಗೆ ಕಿರಣ್ ತೆರಳಿದ್ದನು. ಈ ವೇಳೆ ಯುವತಿ ವಿಚಾರಕ್ಕೆ ವಸಂತ, ಮಧು, ಅಭಿ, ಸಿದ್ದರಾಜು ಎಂಬವವರು ಕಿರಣ್ ನನ್ನು ಮನಸೋ ಇಚ್ಛೆ ಥಳಿಸಿ, ಚಾಕು‌ವಿನಿಂದ ಇರಿದಿದ್ದಾರೆ. ಬರ್ತ್‌ ಡೇ ಬಾಯ್‌ ರವಿಚಂದ್ರನಿಂದಲೂ ಹಲ್ಲೆಯಾಗಿದೆ. ಮನೆಗೆ ವಾಪಸ್ ಹೋಗಲು ಬಿಡದೆ ಬೈಕ್ ಗೆ ಡಿಕ್ಕಿ‌ ಹೊಡೆದು ಕೊಲೆಗೆ ಯತ್ನಿಸಿದ್ದು, ಕಿರಣ್ ತಮ್ಮನಿಗೆ ಕರೆ ಮಾಡಲು ಮುಂದಾದಾಗ  ಮತ್ತಷ್ಟು ಕ್ರೂರತ್ವ ತೋರಿದ್ದು, ಮೊಬೈಲ್ ಕಸಿದುಕೊಂಡು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ.

ತಕ್ಷಣ ಕಿರಣ್ ನನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ  ಆಸ್ಪತ್ರೆಯ ಐಸಿಯುನಲ್ಲಿ ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕಿರಣ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.vtu

Key words: friends, Murder, Boy,  stabbed, Mysore

The post ಸ್ನೇಹಿತರಿಂದಲೇ ಚಾಕು ಇರಿತ: ಯುವಕ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಭೀಕರ ಅಪಘಾತದಲ್ಲಿ ಮೂವರು ಸಾವು.

ಮಂಗಳೂರು, ಮಾರ್ಚ್,13,2026 (www.justkannada.in): ಕೆಎಸ್ ಆರ್ ಟಿಸಿ ರಾಜಹಂಸ ಬಸ್...

ഗസയിലെ വംശഹത്യ; ഐ.സി.ജെയിലെ കേസില്‍ കക്ഷി ചേര്‍ന്ന് നെതര്‍ലാന്‍ഡ്‌സും ഐസ്‌ലാന്‍ഡും

ഹേഗ്: ഗസയില്‍ ഇസ്രഈല്‍ നടത്തുന്ന വംശഹത്യ സംബന്ധിച്ച് ഹേഗിലെ അന്താരാഷ്ട്ര നീതിന്യായ...

ராஜீவ் காந்தி பதவிக்கு வேட்டு! – `டெண்டர் முதல் இன்ஸ்டா வரை…' – வெடித்துக் கிளம்பிய விவகாரம்!

தி.மு.க வின் மாணவர் அணிச் செயலாளராகச் செயல்பட்டு வந்த ராஜீவ் காந்தியை...

IndiGo: ఇరాన్ వార్ ఎఫెక్ట్.. పెరిగిన ఇండిగో టికెట్ ధరలు..

IndiGo: మధ్యప్రాచ్యంలోని ఇరాన్ యుద్ధ ప్రభావం దేశ విమానయాన రంగంపై పడింది....