13
March, 2026

A News 365Times Venture

13
Friday
March, 2026

A News 365Times Venture

ಈ ಹಸ್ತ ವಿರೋಧಿಗಳ ಬಾಯಿ ಮುಚ್ಚಿಸಿದೆ: ನಮ್ಮ ಪಂಚ ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿ- ಡಿಸಿಎಂ ಡಿಕೆ ಶಿವಕುಮಾರ್

Date:

ಮೈಸೂರು,ಜುಲೈ,19,2025 (www.justkannada.in): ಈ ಹಸ್ತ ವಿರೋಧಿಗಳ ಬಾಯಿ ಮುಚ್ಚಿಸಿದೆ. ಗ್ಯಾರಂಟಿಗಳನ್ನ ಟೀಕಿಸುತ್ತಿದ್ದ ಬಿಜೆಪಿಯವರು ಇದೀಗ ನಮ್ಮ ಗ್ಯಾರಂಟಿಗಳನ್ನೇ ಕಾಪಿ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ನುಡಿದರು.

ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಚುನಾವಣೆ ಬಂದಾಗ ಒಂದು ಮಾತು ಹೇಳಿದ್ದೆ ಕಮಲ ಕೇಸರಲ್ಲಿದ್ದರೆ ಚೆನ್ನ ತೆನೆ ಗದ್ದೆಯಲಿದ್ದಾರೆ ಚೆನ್ನ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದಾರೆ ಚೆನ್ನ ಅಂತ ಹೇಳಿದ್ದೆ. ನಾವು ಏನು ಹೇಳಿದ್ದವು ಅದೇ ಕೆಲಸ ಮಾಡಿದ್ದೇವೆ. ನಾವು ಮಾಡುವ ಕೆಲಸಗಳನ್ನು ನಿಮ್ಮ ಕಣ್ಣಲ್ಲಿ ನೋಡಿ ಆಶೀರ್ವಾದ ಮಾಡಿದ್ದೀರಾ. ನಾವು ನಿಮ್ಮ ಬಳಿ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ. ನಿಮ್ಮ ಋಣ ತೀರಿಸಲು ಬಂದಿದ್ದೇವೆ ಎಂದರು.

ಈ ಹಿಂದೆ ಚಾಮುಂಡೇಶ್ವರಿ ಬಳಿ ಹರಕೆ ಹೊತ್ತಿದ್ದವು. ಗ್ಯಾರಂಟಿ ಯೋಜನೆಗಳ ಬಗ್ಗೆ ಹರಕೆ ಹೊತ್ತು ತಾಯಿಗೆ ಕಾಣಿಕೆ ಹಾಕಿ ಬಂದಿದ್ದವು. ಅದೇ ರೀತಿ ನಡೆದುಕೊಳ್ಳುತ್ತಿದ್ದೇವೆ. ಈಗ ನಮ್ಮ ಗ್ಯಾರೆಂಟಿಗಳನ್ನು ಬಿಜೆಪಿ ಕಾಪಿ ಮಾಡಿದೆ. ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ. ವಿರೋಧ ಪಕ್ಷಗಳ ಟೀಕೆಗಳು ಸಾಯುತ್ತವೆ ಎಂದು ವಾಗ್ದಾಳಿ ನಡೆಸಿದರು.

ನಾವು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಅನುದಾನ ಕೊಟ್ಟಿದ್ದೇವೆ. ಇಂಡಿ, ಚಾಮರಾಜನಗರ, ಬೀದರ್ ಎಲ್ಲಾ ಜಿಲ್ಲೆಗಳಿಗೂ ಅಭಿವೃದ್ಧಿಗೆ ಹಣ ನೀಡಿದ್ದೇವೆ. ಈ ಹಸ್ತ ವಿರೋಧಿಗಳ ಬಾಯಿ ಮುಚ್ಚಿಸಿದೆ. ಈ ಹಸ್ತ ರೈತರನ್ನು ಉಳಿಸಿದೆ. ಈ ಹಸ್ತ ಮಹಿಳೆಯರಿಗೆ ನೆರವು ನೀಡಿದೆ. ಪ್ರತಿ ಕುಟುಂಬಕ್ಕೆ 2 ಸಾವಿರ ಹಣ ಕೊಟ್ಟು ನಿಮ್ಮ ಬದುಕಿಗೆ ಶಕ್ತಿ ಕೊಟ್ಟಿದೆ. ನಾವು ಭಾವನೆಗಳ ಮೇಲೆ ಸರ್ಕಾರ ನಡೆಸಲ್ಲ. ಬದುಕಿನ ಮೇಲೆ ಸರ್ಕಾರ ನಡೆಸುತ್ತೇವೆ. ಎಲ್ಲರ ಅಭಿವೃದ್ದಿ ಈ ಹಸ್ತಕ್ಕೆ ಮುಖ್ಯ ಎಂದು ಡಿಕೆ ಶಿವಕುಮಾರ್ ಹೇಳಿದರು.vtu

Key words: Mysore, congress, Sadana samavesha, DCM, DK Shivakumar

The post ಈ ಹಸ್ತ ವಿರೋಧಿಗಳ ಬಾಯಿ ಮುಚ್ಚಿಸಿದೆ: ನಮ್ಮ ಪಂಚ ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Sachin Tendulkar: సచిన్ రిటైర్మెంట్ వెనుక ఇంత కథ ఉందా.. డ్రెస్సింగ్ రూంలోనే ప్లాన్..?

క్రికెట్ ప్రపంచంలో ‘దేవుడు’గా పిలవబడే సచిన్ టెండూల్కర్ పేరు వినగానే పరుగుల...

ಭೀಕರ ಅಪಘಾತದಲ್ಲಿ ಮೂವರು ಸಾವು.

ಮಂಗಳೂರು, ಮಾರ್ಚ್,13,2026 (www.justkannada.in): ಕೆಎಸ್ ಆರ್ ಟಿಸಿ ರಾಜಹಂಸ ಬಸ್...

ഗസയിലെ വംശഹത്യ; ഐ.സി.ജെയിലെ കേസില്‍ കക്ഷി ചേര്‍ന്ന് നെതര്‍ലാന്‍ഡ്‌സും ഐസ്‌ലാന്‍ഡും

ഹേഗ്: ഗസയില്‍ ഇസ്രഈല്‍ നടത്തുന്ന വംശഹത്യ സംബന്ധിച്ച് ഹേഗിലെ അന്താരാഷ്ട്ര നീതിന്യായ...

ராஜீவ் காந்தி பதவிக்கு வேட்டு! – `டெண்டர் முதல் இன்ஸ்டா வரை…' – வெடித்துக் கிளம்பிய விவகாரம்!

தி.மு.க வின் மாணவர் அணிச் செயலாளராகச் செயல்பட்டு வந்த ராஜீவ் காந்தியை...