14
March, 2026

A News 365Times Venture

14
Saturday
March, 2026

A News 365Times Venture

ಮೈಸೂರು: ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಬಂದಿದ್ದ ವ್ಯಕ್ತಿ ಸಾವು

Date:

ಮೈಸೂರು,ಜುಲೈ,21,2025 (www.justkannada.in):  ಜುಲೈ 19 ರಂದು ಮೈಸೂರಿನಲ್ಲಿ ನಡೆದಿದ್ದ  ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಬಂದ್ದಿದ್ದ ವ್ಯಕ್ತಿಯೊಬ್ಬರು  ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತುರುಗನೂರು ಗ್ರಾಮದ ಕುಮಾರ್ (39) ಮೃತಪಟ್ಟ ವ್ಯಕ್ತಿ. ಜುಲೈ 19ರಂದು  ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ  ಕಾಂಗ್ರೆಸ್ ನ ಸಾಧನಾ ಸಮಾವೇಶ ನಡೆದಿತ್ತು. ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವು ನಾಯಕರು ಭಾಗವಹಿಸಿದ್ದರು.

ಈ ನಡುವೆ 300 ರೂಪಾಯಿ ಕೊಡುತ್ತೇವೆ ಎಂದು ಸಮಾವೇಶಕ್ಕೆ ತುರುಗೂರಿನ ಕಾಂಗ್ರೆಸ್ ಮುಖಂಡರು ಕುಮಾರ್ ನನ್ನು ಕರೆತಂದಿದ್ದರಂತೆ. ಆದರೆ ಕಾಂಗ್ರೆಸ್ ಸಮಾವೇಶ ಮುಗಿದರೂ ಕುಮಾರ್ ಮನೆಗೆ ವಾಪಸ್  ಆಗಿರಲಿಲ್ಲ. ರಾತ್ರಿಯಾದರೂ ಕುಮಾರ್ ಮನೆಗೆ  ಬಾರದ ಹಿನ್ನೆಲೆಯಲ್ಲಿ ಗಾಬರಿಗೊಂಡ ಕುಟುಂಬದವರು ಬನ್ನೂರು ಠಾಣೆಗೆ ದೂರು ನೀಡಲು ಮುಂದಾಗಿದ್ದರು. ಆದರೆ ಈ ವೇಳೆ ಪೊಲೀಸರು ಮೈಸೂರು ನಗರ ಠಾಣೆಯಲ್ಲಿ ದೂರು ನೀಡಿ ಎಂದು ಹೇಳಿ ಕಳುಹಿಸಿದ್ದಾರೆ. ನಂತರ ಕುಟುಂಬಸ್ಥರು ಮೈಸೂರು ಠಾಣೆಯಲ್ಲಿ ದೂರು ನೀಡಿದ್ದು, ಇಂದು ಮೈಸೂರಿನ ಶವಾಗಾರದಲ್ಲಿ ಕುಮಾರ್ ಮೃತದೇಹ ಪತ್ತೆಯಾಗಿದೆ. ಮದ್ಯಪಾನ ಜಾಸ್ತಿಯಾಗಿ ಕುಮಾರ್ ಮೃತಪಟ್ಟಿದ್ದಾರೆ ಎಂಬ ಮಾಹಿತಿ  ಲಭ್ಯವಾಗಿದೆ.vtu

Key words: Mysore, man, death, Congress, Sadhana convention

The post ಮೈಸೂರು: ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಬಂದಿದ್ದ ವ್ಯಕ್ತಿ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഒറ്റ രാത്രി കൊണ്ടല്ല, പൊങ്കാല ശുചീകരണം നടന്നത് മൂന്നുദിവസം കൊണ്ട്; വി.വി. രാജേഷിന്റെ വാദം തള്ളി കളക്ടര്‍

തിരുവനന്തപുരം: ആറ്റുകാല്‍ പൊങ്കാല ദിനത്തില്‍ തന്നെ തിരുവനന്തപുരം നഗരം പൂര്‍ണമായും ശുചിയാക്കിയെന്ന...

ஆதவ் டேபிள் ஃபேன்; ஆனந்த் எலெக்ட்ரிக் குக்கர்! – போட்டி போட்டு பரிசுப் பொருட்களை இறக்கும் தவெக-வினர்

தவெகவின் முதற்கட்ட வேட்பாளர் பட்டியலை விஜய் உறுதி செய்திருக்கும் நிலையில், சென்னைக்குள்...

LPG Crisis: భారత్‌కు గుడ్‌ న్యూస్.. హార్ముజ్ నుంచి బయలుదేరిన LPG నౌకలు..

LPG Crisis: భారత్‌కు గుడ్ న్యూస్. దేశవ్యాప్తంగా ఇంధన సంక్షోభం ముంచుకొస్తున్న...