31
August, 2026

A News 365Times Venture

31
Monday
August, 2026

A News 365Times Venture

ಬಿಜೆಪಿಯವರು ಟೀಕೆ ಬಿಟ್ಟು ರಸಗೊಬ್ಬರ ಪೂರೈಕೆಗೆ ಕೇಂದ್ರದ ಬಳಿ ಮಾತನಾಡಲಿ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಜುಲೈ,29,2025 (www.justkannada.in):  ರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕೇಂದ್ರ ಸರ್ಕಾರವೇ ನೇರ ಹೊಣೆ. ಹೀಗಾಗಿ ಬಿಜೆಪಿ  ಟೀಕೆ ಮಾಡುವುದನ್ನ ಬಿಟ್ಟು ಕೇಂದ್ರದ ಬಳಿ ಮಾತನಾಡಿ ರಸಗೊಬ್ಬರ ಪೂರೈಕೆ ಮಾಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಇರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ರಸಗೊಬ್ಬರ ಪೂರೈಕೆ ಮಾಡಿಲ್ಲ. ಈ ಬಗ್ಗೆ ಪತ್ರ ಬರೆದು ಮನವಿಯನ್ನು ಸಹ ಮಾಡಲಾಗಿದೆ. ಕೇಂದ್ರದಿಂದ 6.82 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬರಬೇಕಿತ್ತು, ಆದರೆ ನಮಗೆ ಪೂರೈಕೆಯಾಗಿರುವುದು 5.27 ಲಕ್ಷ ಮೆಟ್ರಿಕ್ ಟನ್ ಎಂದು ಮಾಹಿತಿ ನೀಡಿದ್ದಾರೆ.

ರಸಗೊಬ್ಬರ ಉತ್ಪಾದನೆ ಮಾಡುವವರು ನಾವಲ್ಲ, ರಸಗೊಬ್ಬರ ಸರಬರಾಜು ಮಾಡುವವರು ನಾವಲ್ಲ. ಬಿಜೆಪಿ ಪಕ್ಷವೇ ಆಡಳಿತದಲ್ಲಿರುವ ಹರಿಯಾಣ, ಮಧ್ಯ ಪ್ರದೇಶ ರಾಜ್ಯಗಳಲ್ಲಿಯೂ ರಸಗೊಬ್ಬರ ಕೊರತೆ ಇದೆ. ಇದಕ್ಕೆ ಕೇಂದ್ರ ಸರ್ಕಾರವೇ ಹೊಣೆ.

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ರಸಗೊಬ್ಬರ ಕೇಳಿದ ರೈತರನ್ನು ಗುಂಡಿಕ್ಕಿ ಕೊಂದಿದ್ದರು. ನಾವು ಅವರಂತಲ್ಲ.  ಬಿಜೆಪಿ ನಾಯಕರು ರಾಜಕೀಯ ಟೀಕೆ ಮಾಡಿ ಕಾಲಹರಣ ಮಾಡುವ ಬದಲು ಕೇಂದ್ರ ಸರ್ಕಾರದ ಬಳಿ ಮಾತನಾಡಿ, ತಕ್ಷಣ ರಸಗೊಬ್ಬರ ಪೂರೈಕೆ ಮಾಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.vtu

Key words: BJP, talk, Central Government,  fertilizer, CM Siddaramaiah

The post ಬಿಜೆಪಿಯವರು ಟೀಕೆ ಬಿಟ್ಟು ರಸಗೊಬ್ಬರ ಪೂರೈಕೆಗೆ ಕೇಂದ್ರದ ಬಳಿ ಮಾತನಾಡಲಿ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പെട്രോളില്‍ കലര്‍ത്തിയ എഥനോള്‍ ശതമാനം വ്യക്തമാക്കണമെന്ന ഹരജി തള്ളി സുപ്രീം കോടതി 

ന്യൂദല്‍ഹി: പമ്പുകളില്‍ നിന്നും നല്‍കുന്ന ബില്ലുകളില്‍ എഥനോള്‍ ശതമാനം വ്യക്തമാക്കണമെന്ന പൊതുതാത്പര്യ...

`தாய் வழியில் சாதிச் சான்றிதழ் வழங்க வேண்டும்!’ – அதிரடி காட்டிய நீதிமன்றம்; அசராத புதுச்சேரி அரசு

புதுச்சேரியைப் பூர்வீகமாகக் கொண்டு வெளிமாநில ஆண்களை திருமணம் செய்யும் பெண்களின் குழந்தைகளுக்கு,...

Tukkuguda Nurse Mu*rder: తుక్కుగూడ నర్సు హ*త్యకేసు.. సీన్ టు సీన్.. అసలేం జరిగిందంటే.!

Tukkuguda Nurse Murder Case: తుక్కుగూడలోని ప్రైమ్‌ కేర్‌ ఆస్పత్రిలో నర్సుగా...

ಇಸ್ಲಾಂ ಧರ್ಮವೇ ಶ್ರೇಷ್ಟ ಎಂದಿದ್ದ ಸಚಿವ ಬಸವರಾಜ ರಾಯರೆಡ್ಡಿ ಯುಟರ್ನ್

ಕೊಪ್ಪಳ,ಆಗಸ್ಟ್,31,2026 (www.justkannada.in):  ಎಲ್ಲಾ ಧರ್ಮಗಳಿಗಿಂತಲೂ ಇಸ್ಲಾಂ ಧರ್ಮವೇ ಶ್ರೇಷ್ಠ ಎಂದು...