15
March, 2026

A News 365Times Venture

15
Sunday
March, 2026

A News 365Times Venture

ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ- ಸಚಿವ ದಿನೇಶ್ ಗುಂಡೂರಾವ್‍

Date:

ಕಾರವಾರ,ಜುಲೈ,30,2025 (www.justkannada.in): ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್‍ ಹೇಳಿದರು.

ಡಿಸಿಎಂ ಡಿಕೆ ಶಿವಕುಮಾರ್ ಬಿಟ್ಟು ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಬಗ್ಗೆ ಟೀಕೆ ಹಿನ್ನೆಲೆಯಲ್ಲಿ ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸುತ್ತಿದ್ದಾರೆ.  ಡಿಕೆ ಶಿವಕುಮಾರ್ ಸಿಎಂ ಅನ್ನೋ ವಿಚಾರ ಮುಗಿದ ಅಧ್ಯಾಯ  ಸಿದ್ದರಾಮಯ್ಯ ಶಕ್ತಿಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ ಕಳೆದ ವರ್ಷದಂತೆ ಈಗಲೂ ಶಾಸಕರ ಜೊತೆ ಸಭೆ ನಡೆಸುತ್ತಿದ್ದಾರೆ ಅಷ್ಟೆ ಎಂದರು.

ಅಪರೇಷನ್ ಸಿಂಧೂರ ಕುರಿತು ನಿನ್ನೆ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ ಕುರಿತು ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್,  ಪ್ರಧಾನಿ ಮೋದಿ ಯಾರಿಗಾದರೂ ಉತ್ತರ ಕೊಡುತ್ತಾರಾ ? ಅವರಿಗೆ ಪ್ರಶ್ನೆ ಕೇಳುವುದಕ್ಕೆ ಅವಕಾಶ ಇಲ್ಲ. ನಾನು ಯಾರಿಗೂ ಉತ್ತರ ಕೊಡಬೇಕಾಗಿಲ್ಲ ಎನ್ನುವ ಸರ್ವಾಧಿಕಾರಿ ಧೋರಣೆ ಇದು. ಪುಲ್ವಾಮಾ ಘಟನೆ ಆಗಲು ವೈಫಲ್ಯ ಏನು ಅನ್ನೋದನ್ನ ಹೇಳುವುದೇ ಇಲ್ಲ. ನಮ್ಮ 40 ಸೈನಿಕರು ಹುತಾತ್ಮರಾಗಿದ್ದಕ್ಕೆ ವೈಫಲ್ಯವೇನು ಎನ್ನುವುದನ್ನೇ ಬಹಿರಂಗಪಡಿಸಿಲ್ಲ. ಪಹಲ್ಗಾಮ್‌ ದಾಳಿಯಲ್ಲೂ ಯಾವುದೇ ಸ್ಪಷ್ಟ ಉತ್ತರ ಬಂದಿಲ್ಲ. ಅಮೆರಿಕಾ ಅಧ್ಯಕ್ಷ ಟ್ರಂಪ್ ನಾನೇ ಯುದ್ಧ ನಿಲ್ಲಿಸಿದ್ದೆಂದು ಹೇಳಿದ್ದರು. ಪಾಕಿಸ್ತಾನದವರು ಭಾರತದ 5 ಜೆಟ್‌ ಗಳನ್ನು ಹೊಡೆದಿದ್ದೇವೆ ಎಂದರು. ಆದರೆ ಕೇಂದ್ರ ಸರ್ಕಾರ ಇದುವರೆಗೂ ಈ ಬಗ್ಗೆ ಎಂದೂ ಸ್ಪಷ್ಟಪಡಿಸಿಲ್ಲ ಎಂದು ಕಿಡಿಕಾರಿದರು.vtu

Key words: CM Siddaramaiah, DCM, DK Shivakumar, Minister, Dinesh Gundu Rao

The post ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ- ಸಚಿವ ದಿನೇಶ್ ಗುಂಡೂರಾವ್‍ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಮಗ್ರ ಆರೋಗ್ಯಕ್ಕೆ ಯೋಗ-ವಿಜ್ಞಾನದ ಸಮನ್ವಯ ಅಗತ್ಯ: ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಮೈಸೂರು,ಮಾರ್ಚ್,14,2026 (www.justkannada.in):  ಭಾರತ ದೇಶ ಜಗತ್ತಿಗೆ ಕೊಟ್ಟತಂಹ ಕೊಡಗೆಗಳಲ್ಲಿ ಯೋಗವೂ...

ആര്‍ത്തവ അവധി സ്ത്രീകളുടെ അവകാശങ്ങളുടെ ഭാഗമാക്കണം; സുപ്രീം കോടതിക്കെതിരെ പോളിറ്റ് ബ്യൂറോ

ന്യൂദല്‍ഹി: ആര്‍ത്തവ അവധികള്‍ നിയമവിധേയമാക്കിയാല്‍ സ്ത്രീകളെ ജോലിക്കെടുക്കാന്‍ കമ്പനികള്‍ മടിക്കുമെന്ന സുപ്രീം...

`அதிமுக உறுப்பினர் கார்டை கிழிச்சு போடக்கூட மனசு வரலை!'- சசிகலா கட்சியின் நிறுவன தலைவர் சக்கரவர்த்தி

தனது ஆதரவாளர் ஒருவர் பதிவு செய்து வைத்திருந்த ‘அகில இந்திய புரட்சித்...

Breaking News: మొయినాబాద్ ఫామ్ హౌస్‌లో కాల్పుల కలకలం.. పోలీసులపై డ్రగ్స్ బ్యాచ్ దాడి.!

హైదరాబాద్ శివార్లలోని మొయినాబాద్‌ మరోసారి వార్తల్లో నిలిచింది. ఒక మాజీ ఎమ్మెల్యేకు...