11
March, 2026

A News 365Times Venture

11
Wednesday
March, 2026

A News 365Times Venture

ಪೊಲೀಸ್ ಪೇದೆಗೆ ಮಾರಣಾಂತಿಕ ಹಲ್ಲೆ: ಐವರ ವಿರುದ್ಧ FIR

Date:

ಮೈಸೂರು, ಆಗಸ್ಟ್,5,2025 (www.justkannada.in): ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಪೇದೆಗೆ ಮಾರಣಾಂತಿಕ ಹಲ್ಲೆ  ಮಾಡಿರುವ ಘಟನೆ ನಡೆದಿದ್ದುಈ ಸಂಬಂಧ ಐವರ ವಿರುದ್ದ ಎಫ್ ಐಆರ್ ದಾಖಲಾಗಿದೆ.

ಸೈಯ್ಯದ್‌ ಮನ್ಸೂರ್ ( 27) ಹಲ್ಲೆಗೆ ಒಳಗಾದ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು ಮೈಸೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣದ‌ ನಡುವೆ ಪೇದೆ ಹೋರಾಟ ನಡೆಸುತ್ತಿದ್ದಾರೆ.  ಸೈಯ್ಯದ್‌ಮನ್ಸೂರ್ ಮೆದುಳಿಗೆ ತೀವ್ರ ಪೆಟ್ಟಾಗಿರುವ ಕಾರಣದಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸೈಯ್ಯದ್‌ಮನ್ಸೂರ್ ರಾಮನಗರ ಪೊಲೀಸ್ ಕಾನ್ಸ್ ಟೆಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು ಮೂಲ ಮಂಡ್ಯದ ಕೆ.ಆರ್.ಪೇಟೆಯ ನಿವಾಸಿಯಾಗಿದ್ದಾರೆ. ಬೈಕ್ ರೇಸ್ ವೀಕ್ಷಣೆ ವೇಳೆ ಕಾಲು ಟಚ್ ಮಾಡಿದ್ದಕ್ಕೆ ಕಿರಿಕ್  ಆಗಿದ್ದು ಈ ವೇಳೆ ಕಿಡಿಗೇಡಿಗಳು ಸೈಯ್ಯದ್ ಮನ್ಸೂರ್ ಮೇಲೆ ದೊಣ್ಣೆ, ರಿಪೀಸ್ ಪಟ್ಟಿ, ಸೈಜ್ ಗಲ್ಲಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ರೇಸ್ ಸ್ಥಳದಿಂದ ಅಟ್ಟಾಡಿಸಿಕೊಂಡು‌ ಹೋಗಿ ಹತ್ಯೆಗೆ ಯತ್ನಿಸಿದ್ದು ಡ್ರೋನ್ ಕ್ಯಾಮೆರಾದಲ್ಲಿ ಹಲ್ಲೆಯ ಇಂಚಿಂಚು‌ ದೃಶ್ಯಾವಳಿ ಸೆರೆಯಾಗಿದೆ.  ಕಳೆದ ವರ್ಷ ನಾಗಮಂಗಲದ ಗಲಭೆಗೆ ಕಾರಣವಾಗಿದ್ದವರು ಈ ರೀತಿ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ . ನಾಗಮಂಗಲದ ಗಣೇಶ ಗಲಾಟೆಯಲ್ಲಿ‌ ಭಾಗಿಯಾಗಿದ್ದ ಕಿಡಿಗೇಡಿಗಳು ಈ  ಹಲ್ಲೆ ನಡೆಸಿದ್ದು, ನಾಗಮಂಗಲದ ಮುತುಬೀರ್, ಅಜ್ಜು, ಬಾಲಿ ಸೇರಿ‌ ಐವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

Key words: Fatal assault , police , FIR ,against ,five

The post ಪೊಲೀಸ್ ಪೇದೆಗೆ ಮಾರಣಾಂತಿಕ ಹಲ್ಲೆ: ಐವರ ವಿರುದ್ಧ FIR appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV)...

‘രാഹുല്‍ ഗാന്ധി പറയുന്ന സത്യങ്ങള്‍ ഭരണപക്ഷത്തിന് ദഹിക്കുന്നില്ല’ ലോക്‌സഭയില്‍ പ്രിയങ്ക ഗാന്ധി

ന്യൂദല്‍ഹി: മോദി സര്‍ക്കാരിന് മുന്നില്‍ ലോക്‌സഭാ പ്രതിപക്ഷ നേതാവ് രാഹുല്‍ ഗാന്ധി...

'நிர்வாகிகளிடம் விருப்ப மனு பெறும் வேல்முருகன்!' – கூடுதல் தொகுதி கிடைக்குமா? த.வா.க ப்ளான் என்ன?

தமிழக வாழ்வுரிமை கட்சித் தலைவர் வேல்முருகன் தனது கட்சி நிர்வாகிகளிடம் விருப்ப...

AP High Court: అవినీతి అధికారులకు షాకిచ్చిన హైకోర్టు.. సీజ్‌ చేసిన నగల విడుదలకు బ్రేక్..

AP High Court: అవినీతి కేసుల్లో ప్రభుత్వ ఉద్యోగుల నుంచి స్వాధీనం...