27
March, 2026

A News 365Times Venture

27
Friday
March, 2026

A News 365Times Venture

ಬದಾಮಿಯಲ್ಲೂ ಸಿದ್ದರಾಮಯ್ಯಗೆ ಸೋಲಿನ ಭಯವಿತ್ತು: ಸಾಲ ಮಾಡಿ 3 ಸಾವಿರ ವೋಟ್ ಖರೀದಿಸಿದ್ವಿ- ಸಿಎಂ ಇಬ್ರಾಹಿಂ

Date:

ಬೆಂಗಳೂರು,ಆಗಸ್ಟ್,9,2025 (www.justkannada.in):   2018ರಲ್ಲಿ ಬದಾಮಿಯಲ್ಲೂ ಸಿಎಂ ಸಿದ್ದರಾಮಯ್ಯಗೆ ಸೋಲಿನ ಭಯವಿತ್ತು. ಈ ವೇಳೆ ನಾನು ಚಿಮ್ಮನಕಟ್ಟಿ ಸೇರಿ  ಸಾಲ ಮಾಡಿ 3 ಸಾವಿರ ವೋಟ್ ಖರೀದಿಸಿದ್ದವು ಎಂದು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಹೊಸ ಬಾಂಬ್ ಸಿಡಿಸಿದ್ದಾರೆ.

ಸಿಎಂ ಇಬ್ರಾಹಿಂ ನಿನ್ನೆ ಮೈಸೂರಿನ ಕೆಎಸ್ ಒಯು ಕಾರ್ಯಕ್ರಮದಲ್ಲಿ ಮಾತನಾಡಿದ ವಿಡಿಯೋ ವೈರಲ್ ಆಗಿದೆ. ಈ ವೇಳೆ ಮಾತನಾಡಿರುವ ಸಿಎಂ ಇಬ್ರಾಹಿಂ , ಸಿದ್ದರಾಮಯ್ಯರನ್ನ ಬಾದಾಮಿಗೆ ಕಳುಹಿಸಿದ್ದೇ ನಾನು. ಬಿಬಿ ಚಿಮ್ಮನಕಟ್ಟಿ ಒಪ್ಪದಿದ್ದಾಗ ಅವರ ಪತ್ನಿ ಕಡೆಯಿಂದ ಒಪ್ಪಿಸಿದ್ದೆ. ಚಾಮುಂಢೇಶ್ವರಿ ಕ್ಷೇತ್ರದಲ್ಲಿ 30 ಸಾವಿರ ಮತಗಳಿಂದ  ಗೆಲ್ಲುತ್ತೇವೆ ಎಂದಿದ್ದರು ಪಕ್ಕದಲ್ಲೇ ಇದ್ದ ಮಹದೇವಪ್ಪ ಹೇಳಿದ್ದರು. ಆಗ ನಾನು ನೀನೇ ಮೊದಲು ಸೋಲುತ್ತೀಯಾ ಅಂತಾ ಹೇಳಿದ್ದೆ.  ಕೊನೆಗೆ ಚುನಾವಣಾ ಫಲಿತಾಂಶ ಹಾಗೆಯೇ ಬಂತು ಎಂದರು.

ಮತದಾನ ಎಣಿಕೆ ದಿನ ಸಿದ್ದರಾಮಯ್ಯ  ಸೋಲುವ ಭಯದಲ್ಲಿದ್ದರು. ಭಯ ಪಡಬೇಡ ನಾನು ಮ್ಯಾನೇಜ್ ಮಾಡಿದ್ದೀನಿ ಎಂದಿದ್ದೆ. 800ರಿಂದ ಸಾವಿರ ವೋಟ್ ನಿಂದ ಗೆಲ್ತೀಯಾ ಅಂತ ಹೇಳಿದ್ದೆ ಬಾದಾಮಿಯ ಕ್ಷೇತ್ರದಲ್ಲೂ  ಸಿದ್ದರಾಮಯ್ಯಗೆ ಸೋಲುವ ಭಯವಿತ್ತು.  ನಾನು  ಚಿಮ್ಮನಕಟ್ಟಿ ಸೇರಿ ಸಾಲ ಮಾಡಿ 3ಸಾವಿರ ವೋಟ್ ಖರೀದಿಸಿದ್ದವು. ಕಡಿಮೆ ಅಂತರದಲ್ಲಿ ಗೆದ್ದೇ ಗೆಲ್ಲುತ್ತೀಯಾ ಎಂದಿದ್ದೆ ಅದೇ ರೀತಿ ಫಲಿತಾಂಶ ಬಂತು. ಕೊನೆಗೆ ಸಿದ್ದರಾಮಯ್ಯ 6 ತಿಂಗಳ ಬಳಿಕ  ಆ ಸಾಲ ವಾಪಸ್ ಕೊಟ್ಟಿದ್ದಾರೆ. ಈ ವಿಚಾರ ಹೇಳೋಕೆ ನನಗೆ ಯಾವುದೇ ಭಯ ಇಲ್ಲ ಎಂದು  ಸಿಎಂ ಇಬ್ರಾಹಿಂ ಹೇಳಿದ್ದಾರೆ ಎನ್ನಲಾಗಿದೆ.

Key words: Siddaramaiah, afraid, defeat, Badami, CM Ibrahim

The post ಬದಾಮಿಯಲ್ಲೂ ಸಿದ್ದರಾಮಯ್ಯಗೆ ಸೋಲಿನ ಭಯವಿತ್ತು: ಸಾಲ ಮಾಡಿ 3 ಸಾವಿರ ವೋಟ್ ಖರೀದಿಸಿದ್ವಿ- ಸಿಎಂ ಇಬ್ರಾಹಿಂ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാന്റെ ഊര്‍ജ കേന്ദ്രങ്ങള്‍ ആക്രമിക്കില്ല; പത്ത്  ദിവത്തേയ്ക്ക് കൂടി വെടിനിര്‍ത്തലെന്ന് ട്രംപ്

വാഷിങ്ടണ്‍: ഇറാന്റെ ഊര്‍ജ കേന്ദ്രങ്ങള്‍ക്കെതിരായ ആക്രമണം 10 ദിവത്തേയ്ക്ക് കൂടി നിര്‍ത്തിവെയ്ക്കുകയാണന്ന്...

பாலியல் குற்றங்கள் குறித்து சர்ச்சை கருத்து: "மனப்பூர்வமான மன்னிப்பு"- எஸ்.வி.சேகர் வெளியிட்ட வீடியோ

நேற்று திண்டுக்கல்லில் நடைபெற்ற திருமணத்தில் கலந்துகொண்ட நடிகர் எஸ்.வி.சேகர் செய்தியாளர்களைச் சந்தித்தார்....

ನಾಳೆ ಎಲ್ಲಾ ರಾಜ್ಯದ ಸಿಎಂಗಳ ಜೊತೆ ಪ್ರಧಾನಿ ಮೋದಿ ಮೀಟಿಂಗ್

ನವದೆಹಲಿ,ಮಾರ್ಚ್,26,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ...