27
April, 2026

A News 365Times Venture

27
Monday
April, 2026

A News 365Times Venture

ರಾಜ್ಯದಲ್ಲಿ ಆ.15ರವರೆಗೆ ಭಾರಿ ಮಳೆ ಮುನ್ಸೂಚನೆ.

Date:

ಬೆಂಗಳೂರು,ಆಗಸ್ಟ್,12,2025 (www.justkannada.in):  ರಾಜ್ಯದಲ್ಲಿ ಆಗಸ್ಟ್ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ಆಗಸ್ಟ್ 13 ರಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಮುಂದಿನ ವಾರ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು ದಕ್ಷಿಣ ಒಳನಾಡಿನಲ್ಲಿ  ಆಗಸ್ಟ್ 15ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 16 ರಂದು ಕರಾವಳಿ ಜಿಲ್ಲೆಗಳು ಸೇರಿ ರಾಜ್ಯದಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಆಗಸ್ಟ್ 13 ರಿಂದ 17ರ ವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ ಜಿಲ್ಲೆಗಳ ಹಲವು ಕಡೆ ಭಾರಿ ಮಳೆ ಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಆಗಸ್ಟ್ 12 ರಿಂದ 18ರವರೆಗೆ ಬೆಂಗಳೂರಿನ ಕೆಲವೆಡೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.

Key words: Heavy rains, forecast , state

The post ರಾಜ್ಯದಲ್ಲಿ ಆ.15ರವರೆಗೆ ಭಾರಿ ಮಳೆ ಮುನ್ಸೂಚನೆ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഉക്രൈനെതിരായ ‘വിശുദ്ധ യുദ്ധത്തില്‍’ റഷ്യയ്ക്ക് പൂര്‍ണ പിന്തുണ; നിലപാട് ആവര്‍ത്തിച്ച് ഉത്തര കൊറിയ

പ്യോങ്‌യാങ്: ഉക്രൈനെതിരായ യുദ്ധത്തില്‍ റഷ്യയ്ക്ക് പൂര്‍ണ പിന്തുണ പ്രഖ്യാപിച്ച് ഉത്തര കൊറിയന്‍...

தேர்தல் முடிந்த சூட்டோடு விநாயகர், காளி கோயிலில் சாமி தரிசனம்; சொந்த ஊரில் வைகோ

தமிழக சட்டப்பேரவைத் தேர்தல் முடிந்து விட்ட சூழலில் பதிவான அதிக வாக்கு...

CM Revanth Reddy : BRS ఒక చచ్చిపోయిన శవం.. దానికి భవిష్యత్తు లేదు

CM Revanth Reddy : ముఖ్యమంత్రి రేవంత్ రెడ్డి బీఆర్ఎస్ పార్టీపై...

ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ ಸಿಗಬೇಕು- ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ,ಏಪ್ರಿಲ್,27,2026 (www.justkannada.in): ಸಚಿವ ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ  ಸಿಗಬೇಕು...