12
March, 2026

A News 365Times Venture

12
Thursday
March, 2026

A News 365Times Venture

ಸರ್ಕಾರಿ ಜಮೀನು ಕಬಳಿಸುವ ಭೂಗಳ್ಳರ ವಿರುದ್ದ ಕಠಿಣ ಕಾನೂನು ಕ್ರಮ- ಸಚಿವ ಕೃಷ್ಣಭೈರೇಗೌಡ

Date:

ಬೆಂಗಳೂರು, ಆಗಸ್ಟ್,13,2025 (www.justkannada.in):  ಸರ್ಕಾರಿ ಜಮೀನು ಕಬಳಿಸುವ ಭೂಗಳ್ಳರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಇಲಾಖೆ ಸಚಿವ  ಕೃಷ್ಣಭೈರೇಗೌಡ ತಿಳಿಸಿದರು.

ವಿಧಾನಪರಿಷತ್ ನಲ್ಲಿ ಸದಸ್ಯ ರಾಮೋಜಿ ಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣಭೈರೇಗೌಡ, ಭೂಗಳ್ಳರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಲು ತಿದ್ದುಪಡಿ ಮಾಡಿರುವ ಕಾಯ್ದೆ ಈ ತಿಂಗಳ ಅಂತ್ಯದೊಳಗೆ ಜಾರಿಗೆ ಬರಲಿದೆ. ಇದುವರೆಗೂ ಸರ್ಕಾರಿ ಜಮೀನು ಕಬಳಿಸಿದವರು ಕಾನೂನಿನಿಂದ ತಪ್ಪಿಸಿಕೊಳ್ಳುತ್ತಿದ್ದರು. ನ್ಯಾಯಾಲಯದಿಂದ ತಡೆಯಾಜ್ಞೆ ತರುವುದು ಸೇರಿದಂತೆ ಹಲವು ದಾರಿಗಳಿಂದ ನುಣುಚಿಕೊಳ್ಳುತ್ತಿದ್ದರು. ನೂತನ ಕಾಯ್ದೆಯಲ್ಲಿ ಹಲವಾರು ಕಠಿಣ ಕಾನೂನು ಕ್ರಮಗಳನ್ನು ಸೇರ್ಪಡೆ ಮಾಡಿದ್ದೇವೆ ಎಂದರು.

ಹಾಗೆಯೇ ಯಾರೇ ಆಗಲಿ ಸರ್ಕಾರಿ ಜಮೀನು ಕಬಳಿಸಿರುವುದು ಅಥವಾ ಕಬಳಿಸುವವರಿಗೆ ಪ್ರತ್ಯಕ್ಷವಾಗಿ , ಪರೋಕ್ಷವಾಗಿ ಸಹಾಯ ಮಾಡುವ  ಅಧಿಕಾರಿಗಳ ವಿರುದ್ದವೂ ಕಾನೂನು ಕ್ರಮ ಕೈಗೊಳ್ಳಲು ಹೊಸ ಕಾನೂನಿನಲ್ಲಿ ಅವಕಾಶವಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

Key words: Strict, legal action, against, government land, acquisition

The post ಸರ್ಕಾರಿ ಜಮೀನು ಕಬಳಿಸುವ ಭೂಗಳ್ಳರ ವಿರುದ್ದ ಕಠಿಣ ಕಾನೂನು ಕ್ರಮ- ಸಚಿವ ಕೃಷ್ಣಭೈರೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ...

ഇറാനെ ആക്രമിക്കാനായി ഇറാഖിനെ താവളമാക്കാന്‍ ആരെയും അനുവദിക്കില്ല: ഇറാഖ് പ്രധാനമന്ത്രി

ബാഗ്ദാദ്: ഇറാനെതിരായ ആക്രമണങ്ങള്‍ക്ക് യു.എസ് ഇറാഖിന്റെ വ്യോമാതിര്‍ത്തിയടക്കം ഉപയോഗിക്കുന്നതിനെ എതിര്‍ത്ത് ഇറാഖ്...

Supreme Court: పార్టీ ఫిరాయింపుల కేసులో సుప్రీంకోర్టు సంచలన తీర్పు..

Supreme Court: 10 మంది పార్టీ ఫిరాయింపు కేసు ఎదుర్కొన్న ఎమ్మెల్యేలకు...