27
April, 2026

A News 365Times Venture

27
Monday
April, 2026

A News 365Times Venture

ಹಾಡಹಗಲೇ ಮಹಿಳಾ ಅಧಿಕಾರಿಗೆ ಲೈಂಗಿಕ ದೌರ್ಜನ್ಯ: ಮೊಬೈಲ್ ಕಿತ್ತುಕೊಂಡು ದರೋಡೆಕೋರ ಪರಾರಿ

Date:

ಬೆಂಗಳೂರು, ಆಗಸ್ಟ್​ 13,2025 (www.justkannada.in): ಹಾಡಹಗಲೇ ದರೋಡೆಕೋರನೋರ್ವ  ಪಿಜಿಗೆ ನುಗ್ಗಿ ಮಹಿಳಾ ಅಧಿಕಾರಿಗೆ ಚಾಕು ತೋರಿಸಿ ಹೆದರಿಸಿ ಲೈಂಗಿಕ ದೌರ್ಜನ್ಯವೆಸಗಿ ನಂತರ ಮೊಬೈಲ್​ ಕಿತ್ತುಕೊಂಡು ಪರಾರಿ  ಆಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆಗಸ್ಟ್​ 11ರಂದು ಜುಡಿಷಿಯಲ್ ಲೇಔಟ್​ನ ಲೇಡಿಸ್ ಪಿಜಿಯೊಂದರಲ್ಲಿ ಈ ಘಟನೆ ನಡೆದಿದೆ. ಬೆಸ್ಕಾಂನಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಆಗಿರುವ ಮಹಿಳೆ ಮೇಲೆಯೇ ಈ ದೌರ್ಜನ್ಯವೆಸಗಲಾಗಿದೆ.

15 ದಿನಗಳ ಹಿಂದಷ್ಟೇ ಮಹಿಳೆ ಜುಡಿಷಿಯಲ್ ಲೇಔಟ್​ ನ ಶಿವಾಸ್ ಲೇಡಿಸ್ ಪಿಜಿಗೆ ಸೇರಿಕೊಂಡಿದ್ದರು. ಆಗಸ್ಟ್​ 11ರಂದು ಮಧ್ಯಾಹ್ನ ಕೆಲಸ ಮುಗಿಸಿ ಪಿಜಿಯಲ್ಲಿನ 3ನೇ ಮಹಡಿಯಲ್ಲಿರುವ ತನ್ನ ರೂಮಿಗೆ ಆಗಮಿಸಿದ್ದರು.

ಈ ವೇಳೆ ಏಕಾಏಕಿ ಬಂದ ದರೋಡೆಕೋರ ಚಾಕು ಸಮೇತ  ಪಿಜಿಗೆ ನುಗ್ಗಿ ಮಹಿಳೆಯಿದ್ದ ರೂಮ್​​ ಡೋರ್ ಬಡೆದಿದ್ದಾನೆ. ಪಿಜಿಯವರು ಇರಬಹುದೆಂದು ಮಹಿಳೆ ಬಾಗಿಲು ತೆರೆದಿದ್ದಾರೆ.  ಈ ವೇಳೆ ಮಹಿಳೆಯ ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿದ್ದ ಖದೀಮ, ದೌರ್ಜನ್ಯವೆಸಗಿ ಮೈಮೇಲಿದ್ದ ಚಿನ್ನಾಭರಣ ಕಿತ್ತುಕೊಳ್ಳಲು ಯತ್ನಿಸಿದ್ದಾನೆ. ಬಳಿಕ ಬೆಡ್​ ಮೇಲಿದ್ದ 2 ಮೊಬೈಲ್​ ಗಳು ತೆಗೆದುಕೊಂಡು ಪರಾರಿ ಆಗಿದ್ದಾನೆ. ಘಟನೆ ಕುರಿತು ಯಲಹಂಕ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Key words: Female officer, sexually, assault, Robber

The post ಹಾಡಹಗಲೇ ಮಹಿಳಾ ಅಧಿಕಾರಿಗೆ ಲೈಂಗಿಕ ದೌರ್ಜನ್ಯ: ಮೊಬೈಲ್ ಕಿತ್ತುಕೊಂಡು ದರೋಡೆಕೋರ ಪರಾರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ആന്റണി രാജുവിന് തിരിച്ചടി; തൊണ്ടിമുതൽ തിരിമറിക്കേസിൽ ശിക്ഷ തടയണമെന്ന ആവശ്യം തള്ളി സുപ്രീം കോടതി

ന്യൂദൽഹി: തൊണ്ടിമുതൽ തിരിമറിക്കേസിൽ ശിക്ഷ തടയണമെന്ന് ആവശ്യപ്പെട്ട് മുൻ മന്ത്രി ആന്റണി...

மதுபான வழக்கு: "இந்த நீதிபதி முன் ஆஜராக மாட்டேன், அதற்கு பதில்.!"- கெஜ்ரிவால் வெளியிட்ட வீடியோ

டெல்லி மதுபானக் கொள்கை முறைகேடு தொடர்பாக சிபிஐ (CBI) பதிவு செய்த...

Mamata Banerjee: మోడీ ‘ఝల్‌మురి’.. మమత ‘ఫ్రూట్స్’ కొనుగోలు.. ఫొటోలు వైరల్

పశ్చిమ బెంగాల్‌లో మరికొన్ని గంటల్లో ఎన్నికల ప్రచారం ముగియనుంది. అన్ని పార్టీలు...

ಸಂಪುಟ ಪುನಾರಚನೆ: ಮೇ 2ನೇ ಅಥವಾ 3ನೇ ವಾರದಲ್ಲಿ ‘ಕೈ’ ಶಾಸಕರಿಗೆ ಸಿಹಿಸುದ್ದಿ?

ಬೆಂಗಳೂರು,ಏಪ್ರಿಲ್,27,2026 (www.justkannada.in): ರಾಜ್ಯದಲ್ಲಿ ಉಪಚುನಾವಣೆ ಮುಗಿದ ನಂತರ ಸಚಿವ ಸಂಪುಟ...