7
March, 2026

A News 365Times Venture

7
Saturday
March, 2026

A News 365Times Venture

ಬಿಜೆಪಿಯವರಿಂದ ರಾಜಕೀಯ: ಹಿಂದುತ್ವ ತಮ್ಮ ಆಸ್ತಿ ಅಂದುಕೊಂಡಿದ್ದಾರೆ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಆಗಸ್ಟ್,16,2025 (www.justkannada.in):  ಧರ್ಮಸ್ಥಳ ಚಲೋ ಅಭಿಯಾನ ನಡೆಸುತ್ತಿರುವ ಬಿಜೆಪಿ ವಿರುದ್ದ  ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದು, ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಆಸ್ತಿ ಅಂದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಧರ್ಮಸ್ಥಳದ ಕುರಿತು ಅಪಪ್ರಚಾರ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಾಯಕರು ಧರ್ಮಸ್ಥಳ ಚಲೋ  ನಡಸುತ್ತಿದ್ದಾರೆ.  ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಎಸ್ ಐಟಿ ರಚನೆ ಮಾಡಿದಾಗ ತನಿಖೆ ಆರಂಭಕ್ಕೂ ಮೊದಲು ಬಿಜೆಪಿಯವರು ಧರ್ಮಸ್ಥಳದ ಕುರಿತು ಯಾಕೆ ಮಾತನಾಡಿಲ್ಲ. ಬಿಜೆಪಿಯವರು ಈಗ ರಾಜಕೀಯ ಮಾಡುತ್ತಿದ್ದಾರೆ. ಬಿಜೆಪಿಯವರು ಹಿಂದುತ್ವ ತಮ್ಮ ಮನೆ ಆಸ್ತಿ ಅಂತ ಅಂದುಕೊಂಡಿದ್ದಾರೆ. ಹಿಂದುತ್ವ ಯಾರ ಆಸ್ತಿಯೂ ಅಲ್ಲ ಅವರವರ ಭಕ್ತಿ ಹಾಗೂ ನಂಬಿಕೆಯ ಮೇಲೆ ಇದೆ ಎಂದು ಹರಿಹಾಯ್ದರು.

ಬಿಜೆಪಿಯವರು ರಾಜಕಾರಣ ಬಿಟ್ಟು ಬೇರೇನು ಮಾತಾಡಲ್ಲ. ಬಿಜೆಪಿಗೆ ಧರ್ಮಸ್ಥಳದ ಬಗ್ಗೆ ಪ್ರೀತಿ ಇಲ್ಲ ಬಿಜೆಪಿ ಅವರಿಗೆ ರಾಜಕಾರಣ ಮಾಡುವುದಕ್ಕೆ ಧರ್ಮಸ್ಥಳ ಬೇಕು. ಆದರೆ ನಮಗೆ ರಾಜಕಾರಣ ಮಾಡಲು ಧರ್ಮಸ್ಥಳ ಬೇಡ ಎಂದು ಚಾಟಿ ಬೀಸಿದರು.

Key words: Darmasthala case, BJP, Politics, DCM, DK Shivakumar

The post ಬಿಜೆಪಿಯವರಿಂದ ರಾಜಕೀಯ: ಹಿಂದುತ್ವ ತಮ್ಮ ಆಸ್ತಿ ಅಂದುಕೊಂಡಿದ್ದಾರೆ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Hanamkonda: హనుమకొండలో ఘోర ప్రమాదం.. టిప్పర్ ఢీకొని ఇద్దరు విద్యార్థులు మృతి

Hanamkonda: హనుమకొండ జిల్లాలో విషాదకర ఘటన చోటు చేసుకుంది. జిల్లాలోని హసన్‌పర్తి...

UPSC ಪರೀಕ್ಷೆ ಫಲಿತಾಂಶ ಪ್ರಕಟ: ಅನುಜ್​ ಅಗ್ನಿಹೋತ್ರಿ ದೇಶಕ್ಕೇ ನಂ.1

ನವದೆಹಲಿ,ಮಾರ್ಚ್,6,2026 (www.justkannada.in): ಕೇಂದ್ರ ಲೋಕಸೇವಾ ಸೇವಾ ಆಯೋಗದ (ಯುಪಿಎಸ್​ಸಿ) 2025ನೇ ಸಾಲಿನ...

സ്വന്തം ഊര്‍ജ ആവശ്യങ്ങള്‍ നിറവേറ്റാന്‍ ഇന്ത്യയ്ക്ക് മറ്റൊരു രാജ്യത്തിന്റെ അനുമതി എന്തിന്? സ്റ്റാലിന്‍

ചെന്നൈ: പശ്ചിമേഷ്യയില്‍ സംഘര്‍ഷം തുടരുന്ന സാഹചര്യത്തില്‍ റഷ്യയില്‍ നിന്നും എണ്ണ വാങ്ങുന്നതിനായി...