25
April, 2026

A News 365Times Venture

25
Saturday
April, 2026

A News 365Times Venture

ದುರ್ಬಲ ವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪೊಲೀಸರು ತಡೆಗಟ್ಟಬೇಕು- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಆಗಸ್ಟ್, 30, 2025 (www.justkannada.in):  ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ರಾಜಭವನದಲ್ಲಿ ನಡೆದ , ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳ ಕಾರ್ಯ ಮತ್ತು ಪ್ರಗತಿ ತೃಪ್ತಿದಾಯಕವಿಲ್ಲ ಎಂಬುದನ್ನು ಗಮನಿಸಿದ್ದೇನೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ದುರ್ಬಲವರ್ಗದವರಿಗೆ  ಸುರಕ್ಷತೆ ಒದಗಿಸುವ ಸರ್ಕಾರದ ಉದ್ದೇಶ ಸಫಲವಾಗಬೇಕು. ಇತರೆ ರಾಜ್ಯಗಳಿಗೆ ಹೋಲಿಸಿದರೆ  ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಶಿಕ್ಷೆಯ ಪ್ರಮಾಣ ಬಹಳ ಕಡಿಮೆಯಿದೆ. ಈ ಬಗ್ಗೆ ಪೊಲೀಸರು ಗಮನಹರಿಸಬೇಕು ಎಂದರು.

ಮುಂಜಾಗ್ರತಾ ಕ್ರಮಗಳಿಂದ ಅಪರಾಧ ತಡೆಗಟ್ಟಬಹುದು

ಇಂದು ವಿಶಿಷ್ಠ ಸೇವೆ ಸಲ್ಲಿಸಿರುವ ಪೊಲೀಸರಿಗೆ ಕೊಡಮಾಡಲಾದ ಸೇವಾಪದಕದ ಹಿಂದೆ ಅವರ ಸೇವಾ ಮನೋಭಾವ, ಪ್ರಾಮಾಣಿಕತೆ ಹಾಗೂ ಪರಿಶ್ರಮವಿರುತ್ತದೆ. ಸಾಮಾಜಿಕ ಕಳಕಳಿಯೊಂದಿಗೆ ಸೇವೆ ಸಲ್ಲಿಸಿದಾಗ ಮಾತ್ರ ಇಂತಹ ಸಾಧನೆ ಸಾಧ್ಯವಾಗುತ್ತದೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ  ಜೊತೆಗೆ ಜನರ ಆಸ್ತಿಪಾಸ್ತಿ ಸಂರಕ್ಷಿಸುವುದು ಪೊಲೀಸರ ಜವಾಬ್ದಾರಿ. ದೇಶದಲ್ಲಿ ಶಾಂತಿ ನೆಮ್ಮದಿ ನೆಲೆಸುವಲ್ಲಿ ಪೊಲೀಸರ ಪಾತ್ರ ಅತ್ಯಂತ ಮಹತ್ವವಾದುದು. ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟುವ ಜವಾಬ್ದಾರಿ ಸರ್ಕಾರ ಹಾಗೂ ಪೊಲೀಸಿನವರದ್ದಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಬಹಳಷ್ಟು ಅಪರಾಧಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.

ಸಾಮಾನ್ಯ ಜನರಿಗೆ ನ್ಯಾಯ ಸಿಗುವಂತಾಗಬೇಕು

ಪೊಲೀಸರಿಗೆ ಸಾಮಾಜಿಕ ಬದ್ದತೆಯಿದ್ದರೆ, ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಸಮಾಜದಲ್ಲಿನ ಅಸಮಾನತೆಗಳನ್ನು ತೊಡೆದು ಸಂವಿಧಾನ ನೀಡುವ ರಕ್ಷಣೆಯನ್ನು ಜಾರಿಗೊಳಿಸುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ಬಲಾಢ್ಯರ ಕೈಯಲ್ಲಿ ಅಧಿಕಾರವಿದ್ದರೆ, ದುರ್ಬಲ ವರ್ಗದವರ ಜೀವನ ದುಸ್ತರವಾಗುತ್ತದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅವರು ತಿಳಿಸಿದ್ದರು. ದುರ್ಬಲವರ್ಗಗಳ ಮೇಲಾಗುವ ದೌಜರ್ನ್ಯಗಳನ್ನು ಪೊಲೀಸರು ತಡೆಗಟ್ಟಬೇಕಿದೆ. ಸಾಮಾನ್ಯ ಜನರಿಗೆ ನ್ಯಾಯ ದೊರಕಿಸಿಕೊಡಬೇಕು. ಪೊಲೀಸರ ಸಂಖ್ಯೆಯ ಬಗ್ಗೆ ಗಮನಹರಿಸದೇ, ಅವರು ತಡೆಗಟ್ಟಿರುವ ಅಪರಾಧಗಳೆಷ್ಟು ಎಂದು ಪರಿಗಣಿಸಬೇಕಾಗಿದೆ ಎಂದರು.

ಇಂದಿನ ಪ್ರಶಸ್ತಿ ವಿಜೇತರ ಸಾಧನೆ ಶ್ಲಾಘನೀಯವಾಗಿದ್ದು, ಇತರರಿಗೆ ಮಾದರಿಯಾಗಬೇಕು. ಸಮಾಜದಲ್ಲಿನ ನ್ಯೂನ್ಯತೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ಪೊಲೀಸ್ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಆತ್ಮವಿಮರ್ಶೆ ಮಾಡಿಕೊಂಡು ಉತ್ತಮ ಸೇವೆ ಸಲ್ಲಿಸಬೇಕು ಎಂದರು.

Key words: Police, President’s Medal, CM,  Siddaramaiah

The post ದುರ್ಬಲ ವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪೊಲೀಸರು ತಡೆಗಟ್ಟಬೇಕು- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബി.ജെ.പിയിലേക്കുള്ള കൂടുമാറ്റം; രാഘവ് ഛദ്ദയ്ക്ക് 24 മണിക്കൂറുകൊണ്ട് നഷ്ടമായത് 10 ലക്ഷം ഫോളോവെഴ്‌സ്

ന്യൂദൽഹി: ആം ആദ്മി പാർട്ടിവിട്ട് ബി.ജെ.പിയിലേക്ക് ചേക്കേറിയ രാജ്യസഭാ എം.പി രാഘവ്...

தெலங்கானா : 'அப்பா முன்ன மாதிரி இல்ல!' – புது கட்சி தொடங்கிய சந்திரசேகர் ராவின் மகள் கவிதா!

தெலங்கானாவில் பாரதிய ராஷ்டிர சமிதி கட்சியின் தலைவர் சந்திரசேகர் ராவ்வின் மகள்...

Barrier Free Tolling: భారత్‌లో కొత్త రకం టోల్ విధానం.. వాహనాలు ఆపాల్సిన అవసరం లేకుండా…

జాతీయ రహదారులపై ప్రయాణాన్ని మరింత వేగంగా, సులభతరం చేసేందుకు కేంద్ర ప్రభుత్వం...

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ- ಸಚಿವ ಕೆ.ವೆಂಕಟೇಶ್

ಬೆಳಗಾವಿ,ಏಪ್ರಿಲ್,25,2026 (www.justkannada.in): ‘ರಾಜ್ಯದಲ್ಲಿ  ಸಿಎಂ ಕುರ್ಚಿ ಖಾಲಿ ಇಲ್ಲ. ‘ಅಧಿಕಾರ...