1
April, 2026

A News 365Times Venture

1
Wednesday
April, 2026

A News 365Times Venture

ಸೆ.13 ರಂದು ಸಿಎಂ ಸಿದ್ದರಾಮಯ್ಯ ಮೈಸೂರು, ಮಂಡ್ಯ ಜಿಲ್ಲಾ ಪ್ರವಾಸ.

Date:

ಬೆಂಗಳೂರು,ಸೆಪ್ಟಂಬರ್,10,2025 (www.justkannada.in):  ಸೆಪ್ಟಂಬರ್ 13  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಮತ್ತು ಮಂಡ್ಯ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದಾರೆ.

ಸೆಪ್ಟಂಬರ್ 13 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಡಲಿರುವ ಸಿಎಂ ಸಿದ್ದರಾಮಯ್ಯ ಬೆಳಿಗ್ಗೆ 11.15ಕ್ಕೆ ಮೈಸೂರಿಗೆ ಆಗಮಿಸಲಿದ್ದಾರೆ. ನಂತರ ಶ್ರೀ ಶಿವರಾತ್ರಿ ರಾಜೇಂದ್ರ ನಗರ ವರುಣಾ ಕೆರೆಯ ಪಕ್ಕ ಮೈಸೂರು ತಾಲ್ಲೂಕು ಇಲ್ಲಿ ಜಿಎಸ್ ಎಸ್  ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ,  ಮೈಸೂರು ವತಿಯಿಂದ ಆಯೋಜಿಸಿರುವ ಶ್ರೀ ಶಿವರಾತ್ರಿ ರಾಜೇಂದ್ರ ಅನುಭವ ಮಂಟಪ ಹಾಗೂ ಸಂಘದ ಕಛೇರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ನಂತರ ಸಂಜೆ 4 ಗಂಟೆಗೆ ಮೈಸೂರು ತಾಲ್ಲೂಕಿನ ಬುಗತಹಳ್ಳಿ ಗ್ರಾಮದಲ್ಲಿ ಸಾಮಾಜಿಕ ಕ್ರಾಂತಿಕಾರಿ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದಾದ ಬಳಿಕ ರಸ್ತೆ ಮೂಲಕ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನಲ್ಲಿರುವ  ಗಗನಚುಕ್ಕಿ ಜಲಪಾತಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯ ಜಿಲ್ಲಾಡಳಿತ, ಕನ್ನಡ ಸಂಸ್ಕೃತಿ ಇಲಾಖೆ  ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಿರುವ ಗಗನಚುಕ್ಕಿ ಜಲಪಾತೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿರುವ ಸಿಎಂ ಸಿದ್ದರಾಮಯ್ಯ ನಂತರ ರಾತ್ರಿ 8.30ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Key words: CM Siddaramaiah, Mysore, Mandya, tour, September 13

The post ಸೆ.13 ರಂದು ಸಿಎಂ ಸಿದ್ದರಾಮಯ್ಯ ಮೈಸೂರು, ಮಂಡ್ಯ ಜಿಲ್ಲಾ ಪ್ರವಾಸ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕಾಂಗ್ರೆಸ್ ವಿರುದ್ದ ಮುಸ್ಲೀಮರು ಮುನಿಸಿಕೊಂಡಿಲ್ಲ: ಎಲ್ಲಾ ಬಿಜೆಪಿ ಷಡ್ಯಂತ್ರ- ಸಚಿವ ಮಲ್ಲಿಕಾರ್ಜುನ್

ದಾವಣಗೆರೆ,ಮಾರ್ಚ್,31,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಸ್ಲೀಂ...

ഗള്‍ഫ് രാജ്യങ്ങളിലെ ഇറാന്റെ ആക്രമണങ്ങളെ അപലപിക്കുന്നു: സിറിയന്‍ പ്രസിഡന്റ്

സിറിയ: ഗള്‍ഫ് രാജ്യങ്ങളിലേക്കുള്ള ഇറാന്റെ സൈനിക നടപടികളെ അപലപിച്ച് സിറിയന്‍ പ്രസിഡന്റും...

TVK: விஜய் முன் நிறுத்தப்பட்ட `திடீர்' வேட்பாளர் – திக்குமுக்காடும் திருப்பத்தூர் தவெக!

திருப்பத்தூர் மாவட்ட அ.தி.மு.க-வில், திருப்பத்தூர் தெற்கு ஒன்றியச் செயலாளராக இருந்தவர் டாக்டர்...

Chicken Shops Shut Down: నాన్‌వెజ్‌ ప్రియులకు షాకింగ్‌ న్యూస్‌.. నేటి నుంచి చికెన్‌ సెంటర్లు బంద్..

Chicken Shops Shut Down: నాన్‌వెజ్‌ ప్రియులకు షాకింగ్‌ న్యూస్.. రిటైల్‌...