1
April, 2026

A News 365Times Venture

1
Wednesday
April, 2026

A News 365Times Venture

ನಟ ದಿ. ಡಾ. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ

Date:

ಬೆಂಗಳೂರು,ಸೆಪ್ಟಂಬರ್,11,2025 (www.justkannada.in):  ನಟ ದಿವಂಗತ ಡಾ. ವಿಷ್ಣುವರ್ಧನ್ ಅವರಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಟ ದಿ. ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಜೊತೆಗೆ ನಟಿ. ದಿ.ಬಿ.ಸರೋಜಾದೇವಿ ಅವರಿಗೂ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಸಚಿವಸಂಪುಟ ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಈ ಘೋಷಣೆ ಮಾಡಿದ್ದಾರೆ. ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಶಿಫಾರಸ್ಸು ಮಾಡಲು ತೀರ್ಮಾನ ಮಾಡಿರುವುದಾಗಿ ತಿಳಿಸಿದ್ದಾರೆ.

ಇತ್ತೀಚೆಗಷ್ಟೆ  ಹಿರಿಯ ನಟಿ ಭಾರತಿ ವಿಷ್ಣುವರ್ದನ್ ಮತ್ತು ನಟ ಅನಿರುದ್ದ್ ಅವರು ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಿ ವಿಷ್ಣುವರ್ಧನ್ ಅವರ ಸಮಾಧಿಗೆ ಅಭಿಮಾನ್ ಸ್ಟುಡಿಯೋದಲ್ಲಿ ಜಾಗ ನೀಡುವಂತೆ ಮನವಿ ಮಾಡಿದ್ದರು. ಅಲ್ಲದೆ ಕರ್ನಾಟಕ ರತ್ನ ಪ್ರಶಸ್ತಿಗೂ ಮನವಿ ಮಾಡಿದ್ದರು ಎನ್ನಲಾಗಿದೆ.

ಜೊತೆಗೆ ಹಿರಿಯ ನಟಿಯರಾದ ಶೃತಿ, ಮಾಳವಿಕಾ ಅವಿನಾಶ್ ಸೇರಿ ಹಲವು ಹಿರಿಯ ನಟಿಯರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ನಟ ದಿ. ಡಾ. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡುವಂತೆ ಮನವಿ ಸಲ್ಲಿಸಿದ್ದರು.

Key words: Actor, Dr. Vishnuvardhan , Karnataka Ratna Award

The post ನಟ ದಿ. ಡಾ. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ- ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ ಮಾರ್ಚ್,30,2026 (www.justkannada.in): ನಮ್ಮ ಜನಪರವಾದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ...

`ஏன் நம்ம ஸ்கூல் மட்டும் இப்படியிருக்குன்னு' அரசு பள்ளியில் பயனில்லா கழிவறை; மனம் வெம்பும் மாணவர்கள்

மயிலாடுதுறை மாவட்டம், செம்பனார்கோயில் ஒன்றியம், கீழப்பெரும்பள்ளம் கிராமத்தில் அரசு உயர்நிலைப்பள்ளி இயங்கி...