1
April, 2026

A News 365Times Venture

1
Wednesday
April, 2026

A News 365Times Venture

35 ವರ್ಷಗಳ ಹೋರಾಟದ ಫಲದಿಂದ ಒಳಮೀಸಲಾತಿ ಜಾರಿ- ಸಚಿವ ಕೆ.ಎಚ್ ಮುನಿಯಪ್ಪ

Date:

ದಾವಣಗೆರೆ,ಸೆಪ್ಟಂಬರ್,13,2025 (www.justkannada.in): 35 ವರ್ಷಗಳ ಹೋರಾಟದ ಫಲವಾಗಿ ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಸಿಕ್ಕಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎನ್ ಮುನಿಯಪ್ಪ ತಿಳಿಸಿದರು.

ದಾವಣಗೆರೆಯಲ್ಲಿ ಒಳಮೀಸಲಾತಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಸುಪ್ರೀಂ ಕೋರ್ಟ್ ಒಳಮೀಸಲಾತಿ ಪರ ತೀರ್ಪು ನೀಡಿದ್ದೇ ತಡ ರಾಜ್ಯ ಸರ್ಕಾರ ಒಳ ಮೀಸಲಾತಿ ಪರ ಸೂಕ್ತ ನಿರ್ಧಾರ ತೆಗೆದುಕೊಂಡಿದೆ.  ಎಸ್ ಸಿ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಅನ್ಯಾಯವಾಗದಂತೆ ಸೂಕ್ತ ನಿರ್ಧಾರವನ್ನ ನಮ್ಮ ಸರ್ಕಾರ ತೆಗೆದುಕೊಂಡಿದೆ. ರಾಜ್ಯದಲ್ಲಿ ಶಾಶ್ವತ ಪರಿಷತ್ ಆಯೋಗ ಜಾರಿಯಾಗಲಿದೆ. ಜನಸಂಖ್ಯೆ  ಹೆಚ್ಚಿರುವ ಸಮುದಾಯಕ್ಕೆ ಮೀಸಲಾತಿ  ಹೆಚ್ಚಿಸುವ ಅವಕಾಶ ಸಿಗುತ್ತದೆ ಎಂದರು.

ಸುಪ್ರೀಂಕೋರ್ಟ್ ಒಳಮೀಸಲಾತಿ ಜಾರಿ ಬಗ್ಗೆ ಐತಿಹಾಸಿಕ ತೀರ್ಪು ನೀಡಿದ ನಂತರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದೆ ಆ ವೇಳೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಒಳಮೀಸಲಾತಿ ಪರವಾಗಿ ಆಶಯ ವ್ಯಕ್ತಪಡಿಸಿದರು. ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ ಮಹದೇವಪ್ಪ, ಆರ್.ಬಿ ತಿಮ್ಮಾಪುರ , ಪ್ರಿಯಾಂಕಾ ಖರ್ಗೆ ಸೇರಿದಂತೆ ಎಲ್ಲಾ  ಸಚಿವರು ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೆ ಬೆಂಬಲ ಸೂಚಿಸಿದ್ದಾರೆ. ಒಳಮೀಸಲಾತಿ ಜಾರಿಗೆ ಎಲ್ಲರೂ ಸೇರಿ ಒಗ್ಗಟ್ಟಿನಿಂದ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಒಳ ಮೀಸಲಾತಿ ಜಾರಿ ಬಗ್ಗೆ ಬಿಜೆಪಿಯವರು ವ್ಯಂಗ್ಯವಾಡುತ್ತಿದ್ದಾರೆ.  ಸದಾಶಿವ ಆಯೋಗದ ವರದಿ ಬಗ್ಗೆ  ಬಿಜೆಪಿ ಏಕೆ ಮೌನ ವಹಿಸಿತ್ತು. ಅತಿ ಹಿಂದುಳಿದ ಸಮುದಾಯಕ್ಕೆ ಸಿಎಂ ಸಿದ್ದರಾಮಯ್ಯ  ನ್ಯಾಯ ಒದಗಿಸಲಿದ್ದಾರೆ ಎಂದು ಸಚಿವ  ಕೆ.ಎಚ್ ಮುನಿಯಪ್ಪ ತಿಳಿಸಿದರು.

Key words:  Reservation,  Enforcement , 35 years, struggle, Minister, KH Muniyappa

The post 35 ವರ್ಷಗಳ ಹೋರಾಟದ ಫಲದಿಂದ ಒಳಮೀಸಲಾತಿ ಜಾರಿ- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യുവനടിയുടെ ലൈംഗികാതിക്രമ പരാതി; സംവിധായകന്‍ രഞ്ജിത്ത് അറസ്റ്റില്‍

  കൊച്ചി:യുവനടിയുടെ ലൈംഗികാതിക്രമ പരാതിയില്‍ സംവിധായകനും ചലച്ചിത്ര അക്കാദമി മുന്‍ ചെയര്‍മാനുമായ...

"ஊழலின் பேரரசு திமுக ஆட்சி; மத்திய அரசு கொடுத்த ஒரு‌ பைசாக் கூட.!" – பியூஷ் கோயல் குற்றச்சாட்டு

தமிழ்நாடு சட்டமன்றத் தேர்தல் நெருங்கிவிட்டது. இதையொட்டி இன்று கமலாலயத்தில் பாஜக...

PBKS vs GT : గుజరాత్‌పై పంజాబ్ కింగ్స్ ఘనవిజయం.. అరంగేట్రంలోనే అదరగొట్టిన కూపర్ కానోలీ.!

పంజాబ్ కింగ్స్ తమ ఐపీఎల్ 2026 క్యాంపెయిన్‌ను విక్టరీతో ప్రారంభించింది. ఆస్ట్రేలియా...

ಮಿಡಿದ ಮಾನವೀಯ ಸ್ಪಂದನೆ:  ಮತ್ತಿಗೋಡು ಶಿಬಿರಕ್ಕೆ “ಗಜೇಂದ್ರ “ ಸ್ಥಳಾಂತರ

  ಬೆಂಗಳೂರು, ಮಾ.31: ಒಂಟಿತನದಲ್ಲಿ ಕಳೆಯುತ್ತಿದ್ದ ವೃದ್ಧ ಗಜೇಂದ್ರನಿಗೆ ಇಂದು ಹೊಸ...